ಬಿಜೆಪಿಯಿಂದ ಪ್ರಚಾರ ಜಾಸ್ತಿ, ಕೆಲಸ ಕಮ್ಮಿ


Team Udayavani, Aug 13, 2017, 11:59 AM IST

hub2.jpg

ಧಾರವಾಡ: ಕೇವಲ ಭಾಷಣ ಮಾಡಿ ಜನರನ್ನು ಮರಳು ಮಾಡುವ ಬಿಜೆಪಿಯಿಂದ ಕೆಲಸ ಕಡಿಮೆ ಇದ್ದರೂ ಪ್ರಚಾರ ಜಾಸ್ತಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು. ಇಲ್ಲಿನ ಲಕಮನಹಳ್ಳಿಯಲ್ಲಿ ಶನಿವಾರ ಶ್ರೀ ಸಿದ್ದರಾಮಯ್ಯ ಅಭಿಮಾನಿಗಳ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಹು-ಧಾ ನಗರಾಭಿವೃದ್ಧಿ ಪ್ರಾಧಿಕಾರದಿಂದ ನಿರ್ಮಾಣಗೊಂಡ ಬಡಾವಣೆಗೆ ಶ್ರೀ ಸಿದ್ಧರಾಮಯ್ಯ ನಗರ ನಾಮಕರಣ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಕಾಂಗ್ರೆಸ್‌ನಲ್ಲಿ ಕೆಲಸ ಜಾಸ್ತಿ, ಪ್ರಚಾರ ಕಡಿಮೆ. ಹೀಗಾಗಿ ನಮ್ಮ ಮುಖಂಡರು ಸಹ ಉತ್ತಮ ಭಾಷಣ ಮಾಡುವುದನ್ನು ಕಲಿಯಬೇಕು ಎಂದರು. ಲಕಮನಹಳ್ಳಿಯಲ್ಲಿ ಹುಡಾದಿಂದ ನಿರ್ಮಾಣಗೊಂಡ ಬಡಾವಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಟ್ಟಿದ್ದು ಸ್ವಾಗತಾರ್ಹ. ಆದರೆ ಈ ಬಡಾವಣೆಗೆ ಶೀಘ್ರದಲ್ಲಿ ಮೂಲಸೌಕರ್ಯ ಕಲ್ಪಿಸಲು ನಾವೆಲ್ಲ ಶ್ರಮಿಸಬೇಕು. ಅಂದಾಗ ಮಾತ್ರ ಈ ಹೆಸರಿಟ್ಟಿದ್ದು ಸಾರ್ಥಕ. 

ಈಗಾಗಲೇ ಶೇ. 50ರಷ್ಟು ಬಡಾವಣೆ ಅಭಿವೃದ್ಧಿಯಾಗಿದೆ. ಉಳಿದ ಕಾರ್ಯಗಳನ್ನು ನಡೆಸುವ ಕುರಿತು ಎಲ್ಲರೂ ಚರ್ಚಿಸಿ ಶ್ರಮಿಸಬೇಕು. ಇದರಿಂದ ಇಲ್ಲಿ ಜನರು ಬಂದು ವಾಸ ಮಾಡಲು ಸಾಧ್ಯವಾಗುತ್ತದೆ. ಇಲ್ಲವಾದಲ್ಲಿ ಮುಖ್ಯಮಂತ್ರಿ ಅವರ ಹೆಸರಿಟ್ಟಿದ್ದು ವ್ಯರ್ಥವಾಗುತ್ತದೆ ಎಂದು ಹೇಳಿದರು. 

ಕೆಪಿಸಿಸಿ ಉಪಾಧ್ಯಕ್ಷ ವೀರಣ್ಣ ಮತ್ತಿಕಟ್ಟಿ ಮಾತನಾಡಿ, ಈ ಬಡಾವಣೆಯಲ್ಲಿ ಮುಖ್ಯವಾಗಿ ರಸ್ತೆ, ವಿದ್ಯುತ್‌ ಹಾಗೂ ನೀರಿನ ಸೌಕರ್ಯ ಕಲ್ಪಿಸಿದರೆ ಹೆಚ್ಚಿನ ಜನರು ವಾಸಿಸಲು ಪ್ರಾರಂಭಿಸುತ್ತಾರೆ. ನಂತರದಲ್ಲಿ ಕನ್ನಡ ಪ್ರಾಥಮಿಕ ಶಾಲೆ, ಬಸ್‌ ಸೌಕರ್ಯ ಸೇರಿದಂತೆ ಇತರ ಮೂಲಕ ಸೌಕರ್ಯ ಕಲ್ಪಿಸಿದರೆ ಉತ್ತಮ ಬಡಾವಣೆ ಆಗುವುದರಲ್ಲಿ ಸಂದೇಹವಿಲ್ಲ ಎಂದರು.

ಶಾಸಕ ಸಿ.ಎಸ್‌. ಶಿವಳ್ಳಿ ಮಾತನಾಡಿ, ಜನರಿಗೆ ಟೋಪಿ ಹಾಕುತ್ತಿರುವ ಬಿಜೆಪಿ ಉತ್ತರಕುಮಾರನ ಪಾತ್ರ ಮಾಡುತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಪಾಲಿಕೆ ಸದಸ್ಯ ದೀಪಕ ಚಿಂಚೋರೆ ಮಾತನಾಡಿದರು. ಹುಡಾ ಅಧ್ಯಕ್ಷ ಅನ್ವರ್‌ ಮುಧೋಳ ಅಧ್ಯಕ್ಷತೆ ವಹಿಸಿದ್ದರು. ಮನಸೂರು ರೇವಣಸಿದ್ಧೇಶ್ವರ ಮಠದ ಬಸವರಾಜ ದೇವರು ಸಾನ್ನಿಧ್ಯ ವಹಿಸಿದ್ದರು. 

ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ನಾಗರಾಜ ಛಬ್ಬಿ, ಕೆಎಂಫ್ ಅಧ್ಯಕ್ಷ ನೀಲಕಂಠ ಅಸೂಟಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಾರಸಮಲ್‌ ಜೈನ್‌, ಕರ್ನಾಟಕ ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ವೇದವ್ಯಾಸ ಕೌಲಗಿ, ಗ್ರಾಮೀಣ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಎಚ್‌.ವಿ. ಮಾಡಳ್ಳಿ, ಪಾಲಿಕೆ ಸದಸ್ಯರಾದ ಯಾಸೀನ ಹಾವೇರಿಪೇಟ್‌, ಪ್ರಕಾಶ ಕ್ಯಾರಕಟ್ಟಿ, ಹುಡಾ ಆಯುಕ್ತ ನಿಂಗಪ್ಪ ಕುಮ್ಮಣ್ಣವರ, ಸದಸ್ಯರಾದ ಪ್ರಭು ಪ್ರಭಾಕರ, ಸರೋಜಾ ಪಾಟೀಲ, ಕಿರಣ ಪಾಟೀಲ, ಸಂದೀಪ ರೋಖಡೆ,

-ಮುಖಂಡರಾದ ಮುತ್ತುರಾಜ ಮಾಕಡವಾಲೆ, ಪಿ.ಎಚ್‌. ನೀರಲಕೇರಿ, ದೇವರಾಜ ಕಂಬಳಿ, ಸಿ.ಬಿ. ಯಲಿಗಾರ, ವಸಂತ ಅರ್ಕಾಚಾರ, ಆನಂದ ಜಾಧವ, ಹೇಮಂತ ಗುರ್ಲಹೊಸೂರ, ಇರ್ಫಾನ್‌ ಜಾಹಗೀರದಾರ, ಅಶೋಕ ತುರಾಯಿದಾರ, ಲಿಂಗಯ್ಯ ಹಿರೇಮಠ, ರವಿ ಕಬ್ಬೇರ, ಮುಸ್ತಾಕ ಪಟೇಲ್‌ ಇತರರಿದ್ದರು. ಪಾಲಿಕೆ ಸದಸ್ಯ ಸುಭಾಷ ಶಿಂಧೆ ಸ್ವಾಗತಿಸಿದರು. ಹುಡಾ ಮಾಜಿ ಅಧ್ಯಕ್ಷ ದಾನಪ್ಪ ಕಬ್ಬೇರ ಪ್ರಾಸ್ತಾವಿಕ ಮಾತನಾಡಿದರು. ಹಜರತಅಲಿ ಗೊರವನಕೊಳ್ಳ ನಿರೂಪಿಸಿದರು. ಮೋಹನ  ಹೊಸಮನಿ ವಂದಿಸಿದರು.  

ಟಾಪ್ ನ್ಯೂಸ್

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.