ಹೆಣ್ಣು ಮಕ್ಕಳ ಮಾರಾಟ ಜಾಲ ಮತ್ತೆ ಸಕ್ರಿಯ

ನಾಲ್ಕು ತಿಂಗಳುಗಳ‌ಲ್ಲಿ 67ಕ್ಕೂ ಹೆಚ್ಚು ಬಡ ಹೆಣ್ಣು ಮಕ್ಕಳ ಮಾರಾಟ

Team Udayavani, Dec 11, 2019, 6:30 AM IST

ds-49

ಧಾರವಾಡ: ಮೂರು ವರ್ಷಗಳ ಹಿಂದೆ ತೀವ್ರ ಸ್ವರೂಪ ಪಡೆದುಕೊಂಡು ಪೊಲೀಸರ ಕಠಿನ ಕ್ರಮದಿಂದ ಕ್ಷೀಣಿಸಿದ್ದ ಹೆಣ್ಣು ಮಕ್ಕಳ ಮಾರಾಟ ಜಾಲ ಉತ್ತರ ಕರ್ನಾಟಕದಲ್ಲಿ ಮತ್ತೆ ಹೆಡೆ ಎತ್ತಿದೆ. ಕಳೆದ ನಾಲ್ಕು ತಿಂಗಳಲ್ಲಿ 67ಕ್ಕೂ ಹೆಚ್ಚು ಯುವತಿಯರು ಉತ್ತರ ಭಾರತಕ್ಕೆ ಮಾರಾಟವಾಗಿದ್ದಾರೆ.

ಗುಜ್ಜರ ಮದುವೆ ನೆಪದಲ್ಲಿ ರಾಜಸ್ಥಾನ, ಮಹಾರಾಷ್ಟ್ರ, ದಿಲ್ಲಿಯತ್ತ ಹೆಣ್ಣು ಮಕ್ಕಳನ್ನು ಸಾಗಿಸುವ ಜಾಲ ತೆರೆಮರೆಯಲ್ಲಿಯೇ ಕೆಲಸ ನಿರ್ವಹಿಸುತ್ತಿದ್ದು, ಬಡ ಹೆಣ್ಣು ಮಕ್ಕಳ ತಂದೆ- ತಾಯಿಯನ್ನು ಪುಸಲಾಯಿಸಿ ಅವರಿಗೆ ಲಕ್ಷಾಂತರ ರೂಪಾಯಿ ಕೊಟ್ಟು ಹೆಣ್ಣು ಮಕ್ಕಳನ್ನು ಸಾಗಾಟ ಮಾಡಲಾಗುತ್ತಿದೆ.

ಮೂರು ವರ್ಷಗಳ ಹಿಂದೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಹೆಣ್ಣು ಮಕ್ಕಳ ಮಾರಾಟ ಪ್ರಕರಣವನ್ನು ಭೇದಿಸಿದ್ದ ಪೊಲೀಸರಿಗೆ ಈ ಜಾಲದ ಕರಾಳ ಮುಖದರ್ಶನವಾಗಿತ್ತು. ಅನಂತರ ಕಡಿಮೆಯಾಗಿದ್ದ ಹೆಣ್ಣು ಮಕ್ಕಳ ಮಾರಾಟ ಜಾಲ ಈಗ ಮತ್ತೆ ಗರಿಗೆದರಿದೆ. ಧಾರವಾಡ ಮೂಲದ ಸಾಧನಾ ಸ್ವಯಂಸೇವಾ ಸಂಸ್ಥೆ ಈ ಜಾಲಕ್ಕೆ ಸಿಲುಕಿದ ಹೆಣ್ಣು ಮಕ್ಕಳ ಸಮೀಕ್ಷೆ ನಡೆಸಿದೆ.

ಯಾರಿಗೆ ಗಾಳ
ಹೆಣ್ಣು ಮಕ್ಕಳ ಮಾರಾಟ ಜಾಲದ ಪ್ರಕರಣಗಳು ಪೊಲೀಸರ ಸಮೀಪವೂ ಸುಳಿಯದಂತೆ ನೋಡಿಕೊಳ್ಳಲು ಕೆಲವು ರಾಜಕೀಯ ಪುಢಾರಿಗಳಿಗೆ ಹಫ್ತಾ ನೀಡಲಾಗುತ್ತಿದೆ. ಹಳ್ಳಿಗಳಲ್ಲಿರುವ ಕಡು ಬಡತನ, ಕುಟುಂಬ ಸಮಸ್ಯೆ, ತಂದೆ ಅಥವಾ ತಾಯಿಯನ್ನು ಕಳೆದುಕೊಂಡು ಅನಾಥರಾಗಿ ಬದುಕುವ ಹೆಣ್ಣು ಮಕ್ಕಳನ್ನು ಆಯಾ ಗ್ರಾಮಗಳಲ್ಲಿನ ಸಂಬಂಧಿಗಳ ಮುಖಾಂತರ ಏಜೆಂಟರು ಪತ್ತೆ ಮಾಡುತ್ತಿದ್ದಾರೆ. ಪತ್ತೆ ಯಾದವರನ್ನು ಪೊಲೀಸರಿಗೆ ಸಂಶಯ ಬಾರದಂತೆ ನಗರಗಳಲ್ಲಿನ ದೇವಸ್ಥಾನಗಳಿಗೆ ಕರೆಯಿಸಿಕೊಂಡು ಅಲ್ಲಿ ಮಾತುಕತೆ ಮಾಡಿಸಿ, ಹೆಣ್ಣುಮಕ್ಕಳ ಪೋಷಕರಿಗೆ ಹಣ ನೀಡಿ ಅವರನ್ನು ಮದುವೆ ಮಾಡಿಕೊಂಡು ಹೋಗುತ್ತಿದ್ದಾರೆ.

ಸಾಕ್ಷಿ ಕೊರತೆ -ಮುಂಬಯಿ ನಂಟು
ಹೆಣ್ಣು ಮಕ್ಕಳ ಮಾರಾಟ ಜಾಲದಲ್ಲಿ ಗುಜ್ಜರ ಮದುವೆ ಒಂದು ಅಸ್ತ್ರವಾಗಿ ಪರಿಣಮಿಸಿದೆ. ಹೆಣ್ಣು ಮಕ್ಕಳನ್ನು ಪತ್ತೆ ಮಾಡಿ ಮದುವೆ ಮಾಡಿಸಿಕೊಟ್ಟವರು 50 ಸಾವಿರ ರೂ.ಗಳಿಂದ ಎರಡು ಲಕ್ಷ ರೂ.ವರೆಗೂ ಕಮಿಷನ್‌ ಪಡೆಯುತ್ತಿದ್ದಾರೆ. ಏಜೆಂಟರಿಗೆ ಮುಂಬಯಿಯಲ್ಲಿ ಅನೈತಿಕ ಅಡ್ಡೆಗಳನ್ನು ನಡೆಸುವವರ ಸಂಪರ್ಕವಿದೆ. ಕಲಘಟಗಿ ಮತ್ತು ಮುಂಡ ಗೋಡದಲ್ಲಿನ ಬಡ ಹೆಣ್ಣು ಮಕ್ಕಳೇ ಅತೀ ಹೆಚ್ಚು ಸಂಖ್ಯೆಯಲ್ಲಿ ಮುಂಬಯಿ ರೈಲು ಹತ್ತಿದ್ದಾರೆ.

ಇನ್ನು ಈ ಪ್ರಕರಣದಲ್ಲಿ ಸ್ವತಃ ಹೆಣ್ಣು ಮಕ್ಕಳ ತಂದೆ-ತಾಯಿ ಮತ್ತು ಊರಿನ ಹಿರಿಯರೇ ಭಾಗಿಯಾಗಿದ್ದರಿಂದ ಅವರನ್ನು ಸಾಕ್ಷಿ ಮಾಡಲು ಪೊಲೀಸರು ಹಿಂದೇಟು ಹಾಕುತ್ತಿದ್ದಾರೆ. ಹೆಣ್ಣು ಮಕ್ಕಳನ್ನು ಲಿವಿಂಗ್‌ ಟುಗೆದರ್‌ ಪರಿಕಲ್ಪನೆಯಲ್ಲಿ ಸಜ್ಜುಗೊಳಿಸಿ ಕಾನೂನಿನಿಂದ ರಕ್ಷಣೆ ನೀಡಿ ಈ ಅನೈತಿಕ ದಂಧೆಗೆ ನೂಕಲಾಗುತ್ತಿದೆ.

ಎಲ್ಲೆಲ್ಲಿ ಮಾರಾಟ?
ಧಾರವಾಡ ತಾಲೂಕಿನ ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, ನರೇಂದ್ರ, ಕೋಟೂರು, ಬೇಲೂರು, ಲಾಳಗಟ್ಟಿ, ಹೊಲ್ತಿಕೋಟಿ; ಕಲಘಟಗಿ ತಾಲೂಕಿನ ಮಡಕಿ ಹೊನ್ನಳ್ಳಿ, ತಂಬೂರು, ದೇವಿಕೊಪ್ಪ , ಹುಬ್ಬಳ್ಳಿ ತಾಲೂಕಿನ ಕೊಟಗುಣಸಿ, ಅದರಗುಂಚಿ; ಕುಂದಗೋಳ ತಾಲೂಕಿನ ಸಂಶಿ, ಹಿರೇನರ್ತಿ; ನವಲಗುಂದ ತಾಲೂಕಿನ ಯಮನೂರು, ಇಬ್ರಾಹಿಂಪೂರ, ಮಜ್ಜಿಗುಡ್ಡ ಈ ಗ್ರಾಮಗಳಲ್ಲಿ ಒಂದು ವರ್ಷದಲ್ಲಿ 25ಕ್ಕೂ ಹೆಚ್ಚು ಯುವತಿಯರನ್ನು ಗುಜ್ಜರ ಮದುವೆ ರೂಪದಲ್ಲಿ ಮಾರಾಟ ಮಾಡಲಾಗಿದೆ.

ನಮ್ಮ ಅಪ್ಪ ಈಗಾಗಲೇ ಇಬ್ಬರು ಅಕ್ಕಂದಿರನ್ನು ಮಾರಾಟ ಮಾಡಿ ಈಗ ನನ್ನ ಮಾರಾಟಕ್ಕೂ ಸಜ್ಜಾಗಿದ್ದಾನೆ. ಆದರೆ ದೇವರ ದಯೆಯಿಂದ ನಾನು ಪಾರಾಗಿದ್ದೇನೆ.
– ಸವಿತಾ (ಹೆಸರು ಬದಲಿಸಿದೆ) ಚಿಕ್ಕಮಲ್ಲಿಗವಾಡ ಗ್ರಾಮ

ಧಾರವಾಡ ಮಾತ್ರವಲ್ಲ ಉತ್ತರ ಕರ್ನಾಟಕ ಭಾಗದಲ್ಲಿ ಈ ಜಾಲ ಹರಡಿಕೊಂಡಿದೆ. ಈ ಬಗ್ಗೆ ಈಗಾಗಲೇ ಕ್ರಮ ವಹಿಸಿದ್ದೇನೆ. ಬಡ ಹೆಣ್ಣು ಮಕ್ಕಳನ್ನು ತಂದೆ- ತಾಯಿ ಮಾರಾಟ ಮಾಡಿದ್ದು ಗೊತ್ತಾದರೆ ಅವರ ಮೇಲೆ ಕಠಿನ ಕ್ರಮ ತೆಗೆದುಕೊಳ್ಳುತ್ತೇನೆ.
-ವರ್ತಿಕಾ ಕಟಿಯಾರ್‌, ಎಸ್ಪಿ-ಧಾರವಾಡ

–  ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.