ಉ.ಕ.ದಲ್ಲಿ ಸಿಪೆಟ್ ಸ್ಥಾಪನೆಗೆ ಕೇಂದ್ರ ಸಿದ್ಧ
Team Udayavani, Sep 17, 2017, 11:58 AM IST
ಹುಬ್ಬಳ್ಳಿ: ಸೆಂಟ್ರಲ್ ಇನ್ಸ್ಟಿಟ್ಯೂಟ್ ಫಾರ್ ಪ್ಲಾಸ್ಟಿಕ್ ಇಂಜಿನಿಯರಿಂಗ್ ಟೆಕ್ನಾಲಜಿ (ಸಿಪೆಟ್)ಸಂಸ್ಥೆಯನ್ನು ಈ ಭಾಗದಲ್ಲಿ ಸ್ಥಾಪಿಸಲು ಕೇಂದ್ರ ಸರಕಾರ ಸಿದ್ಧವಿದ್ದು, ಇದಕ್ಕೆ ಬೇಕಾದ ಸುಮಾರು 45 ಎಕರೆ ಜಮೀನು ರಾಜ್ಯ ಸರಕಾರದಿಂದ ಕೊಡಿಸುವ ಪ್ರಯತ್ನಗಳು ನಡೆಯಬೇಕು ಎಂದು ಕೇಂದ್ರ ರಾಸಾಯನಿಕ, ರಸಗೊಬ್ಬರ ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಅನಂತಕುಮಾರ ಹೇಳಿದರು.
ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯ 89ನೇ ಸಂಸ್ಥಾಪನಾ ದಿನಾಚರಣೆ ಹಾಗೂ ನವೀಕೃತ ಸಭಾಗೃಹ ಮತ್ತು ಆಡಳಿತ ಕಚೇರಿಗೆ ಶನಿವಾರ ಚಾಲನೆ ನೀಡಿ ಅವರು ಮಾತನಾಡಿದರು. ಹುಬ್ಬಳ್ಳಿ ವಿಮಾನ ನಿಲ್ದಾಣ ಮೇಲ್ದರ್ಜೆಗೇರಿಸಿದ್ದು, ಬೆಂಗಳೂರು-ಹುಬ್ಬಳ್ಳಿ-ಮುಂಬೈಗೆ ಸಾಕಷ್ಟು ಬೇಡಿಕೆಯಿದೆ.
ವಿಮಾನಯಾನ ಸಚಿವರನ್ನು ಭೇಟಿಯಾಗಿ ಇದಕ್ಕೆ ಅವಕಾಶ ಪಡೆಯುತ್ತೇನೆ. ಬೆಳಗಾವಿಯಿಂದ ಮುಂಬೈಗೆ ಒಂದು ವಿಮಾನದ ಸಮಯ ದೊರೆತಿದೆ. ಅದೇ ಸಮಯವನ್ನು ಬೆಂಗಳೂರು- ಹುಬ್ಬಳ್ಳಿ- ಬೆಳಗಾವಿ- ಮುಂಬೈಗೆ ನೀಡುವಂತೆ ಮನವಿ ಮಾಡುತ್ತೇನೆ.
1200 ಕೋಟಿ ರೂ. ವೆಚ್ಚದಲ್ಲಿ ಚಿಕ್ಕಜಾಜೂರು-ಬೆಂಗಳೂರು ರೈಲ್ವೆ ಜೋಡಿ ಮಾರ್ಗದಲ್ಲಿ ವಿದ್ಯುದ್ದೀಕರಣ ಕೈಗೊಳ್ಳುವಂತೆ ರೈಲ್ವೆ ಸಚಿವ ಪಿಯೂಶ್ ಗೋಯಲ್ರೊಂದಿಗೆ ಚರ್ಚಿಸುವುದಾಗಿ ಭರವಸೆ ನೀಡಿದರು. ಹು-ಧಾ ಅಭಿವೃದ್ಧಿಗೆ ಕೇಂದ್ರ ಸರಕಾರ 10 ಸಾವಿರ ಕೋಟಿ ರೂ. ನೀಡಿದೆ.
ಆದರೆ ಕಾಮಗಾರಿಗಳನ್ನು ಗುತ್ತಿಗೆ ಪಡೆದವರೆಲ್ಲಾ ಹೊರ ರಾಜ್ಯದವರು. ಪರಿಸ್ಥಿತಿ ಹೀಗಿರುವಾಗ ಸ್ಥಳೀಯವಾಗಿ ಯುವಕರಿಗೆ ಉದ್ಯೋಗ ನೀಡಲು ಸಾಧ್ಯವಾಗುವುದಿಲ್ಲ. ಇದನ್ನು ಕೆಸಿಸಿಐ ಗಂಭೀರವಾಗಿ ಪರಿಗಣಿಸಿ ಔದ್ಯೋಗಿಕ ಸಾಮರ್ಥ್ಯ ನಿರ್ಮಿಸಲು ಶ್ರಮ ವಹಿಸಬೇಕು ಎಂದರು.
ಉದ್ಯಮಿ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ, ಸ್ಥಳೀಯ ಉದ್ಯಮಿಗಳಾದ ಮುರಾರಿ ಎಸ್.ಬಿಡಸಾರಿಯಾ, ಜಿತೇಂದ್ರ ಮಜೇಥಿಯಾ, ವಿಜಯಪುರದ ರಾಜೇಂದ್ರ ತಾಳಿಕೋಟೆ, ಕಲಬುರಗಿಯ ರವೀಂದ್ರ ದೇವರಮನಿಗೆ ವಾಣಿಜ್ಯ ರತ್ನ ಪ್ರಶಸ್ತಿ ನೀಡಿ ಸನ್ಮಾನಿಸಿದರು. ಸಂಸ್ಥಾಪನ ದಿನಾಚರಣೆ ಪ್ರಯುಕ್ತ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.
ಸಂಸದ ಪ್ರಹ್ಲಾದ ಜೋಶಿ, ಶಾಸಕ ಅರವಿಂದ ಬೆಲ್ಲದ, ಮಹಾಪೌರ ಡಿ.ಕೆ.ಚವ್ಹಾಣ, ಮಾಜಿ ಸಂಸದ ಐ.ಜಿ. ಸನದಿ, ಕೆಸಿಸಿಐ ಅಧ್ಯಕ್ಷ ರಮೇಶ ಪಾಟೀಲ, ಉಪಾಧ್ಯಕ್ಷ ಎಸ್.ಜಿ. ಕೆಮತೂರ, ಶಿವಶಂಕರಪ್ಪ ಮೂಗಬಸ್ತ, ಶರಣಬಸಯ್ಯ ಕದ್ರಳ್ಳಿಮಠ, ಸಿದ್ದೇಶ್ವರ ಕಮ್ಮಾರ, ವಿನಯ ಜವಳಿ, ಎಂ.ವಿ. ಕರಮರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ
Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್ ನೀಚ ಕೃತ್ಯ