ಸಮ್ಮಿಶ್ರ ಸರ್ಕಾರ ಶೀಘ್ರವೇ ಪತನ
Team Udayavani, Jun 4, 2018, 6:35 AM IST
ಧಾರವಾಡ: ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಮೈತ್ರಿಯ ಫಲವಾಗಿ ಮುಖ್ಯಮಂತ್ರಿ ಆಗಿರುವ ಎಚ್.ಡಿ. ಕುಮಾರಸ್ವಾಮಿ ಅವರು ಎಷ್ಟು ದಿನಗಳ ಕಾಲ ಸಿಎಂ ಆಗಿರುತ್ತಾರೆ ಎಂಬ ಬಗ್ಗೆ ನಾನು ಭವಿಷ್ಯ ಹೇಳಲಾರೆ.
ಆದರೆ ಅತೀ ಶೀಘ್ರದಲ್ಲೇ ಈ ಸಮ್ಮಿಶ್ರ ಸರಕಾರ ಪತನಗೊಳ್ಳಲಿದೆ ಎಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎಲ್ಲಾ ಕಡೆ ದೊಡ್ಡ ಮೀನು ಸಣ್ಣ ಮೀನನ್ನು ನುಂಗಿದರೆ
ಕರ್ನಾಟಕದಲ್ಲಿ ಸಣ್ಣ ಮೀನೇ ದೊಡ್ಡ ಮೀನನ್ನು ನುಂಗುತ್ತಿದೆ. ಕಾಂಗ್ರೆಸ್ ಪಕ್ಷವು ಜೆಡಿಎಸ್ ಮುಂದೆ ಮಂಡೆಯೂರಿದ
ಪರಿಣಾಮ, ಇವು ಕಾಂಗ್ರೆಸ್ನ ಕೊನೆಯದಿನಗಳು. ನಾವು ಹೇಳಿದ ಹಾಗೆ ಸಿದ್ದರಾಮಯ್ಯ ಅವರೇ ಕಾಂಗ್ರೆಸ್ನ ಕೊನೆಯ ಮುಖ್ಯ ಮಂತ್ರಿ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರನ್ನು ಎದುರಿಸಲು ಕಾಂಗ್ರೆಸ್ ಪಕ್ಷವು ಇಂದು 50 ಪಕ್ಷಗಳೊಂದಿಗೆ ದೋಸ್ತಿ ಮಾಡಿಕೊಳ್ಳುವ ದಯನೀಯ ಸ್ಥಿತಿ ತಲುಪಿದೆ. ಈ ಮೂಲಕ ಕಾಂಗ್ರೆಸ್ ಪಕ್ಷ ಅವನತಿ ಹಂತ ತಲುಪಿದೆ.
ರಾಹುಲ್ ಗಾಂಧಿ ಅವರಿಗೆ ಸ್ವಂತ ಬುದ್ಧಿ ಹಾಗೂ ಸ್ವಂತ ಶ್ರಮ ಇಲ್ಲದಿರುವುದರಿಂದ ಜೆಡಿಎಸ್ ಹಾಗೂ ತೃತೀಯ ರಂಗದ ಮುಂದೆ ಮಂಡೆಯೂರಿದ್ದಾರೆ. ನಾವು ಕಾಂಗ್ರೆಸ್ ಮುಕ್ತ ಭಾರತ ಆಗಬೇಕು ಎನ್ನುತ್ತೇವೆ. ಆದರೆ, ಆ ಕೆಲಸವನ್ನು ರಾಹುಲ್ ಗಾಂಧಿ ಅವರೇ ಮಾಡುತ್ತಿದ್ದಾರೆ. ಕಾಂಗ್ರೆಸ್ಗೆ ಏಕಾಂಗಿಯಾಗಿ ಮೋದಿ ಅವರನ್ನು ಎದುರಿಸಲಾಗದೇ ದುಷ್ಟಕೂಟ ರಚಿಸಿಕೊಂಡು ಬರುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL; ಸ್ಟಾಯಿನಿಸ್ ಏಟಿಗೆ ತವರಲ್ಲೆ ಚಾಂಪಿಯನ್ ಚೆನ್ನೈ ಠುಸ್!
Congress vs BJP; ಬ್ರಹ್ಮಾವರದಲ್ಲಿ ಶಕ್ತಿ ಪ್ರದರ್ಶನದ ವೇದಿಕೆ!
Shikaripur; ಸಂಭ್ರಮದ ಹುಚ್ಚರಾಯಸ್ವಾಮಿ ಬ್ರಹ್ಮ ರಥೋತ್ಸವ:ಯಡಿಯೂರಪ್ಪ ಕುಟುಂಬ ಭಾಗಿ
Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ