ಠಾಣೆ ಮೆಟ್ಟಿಲೇರಿದ ಕುರ್ಚಿ ಕಿತ್ತಾಟ!


Team Udayavani, Jul 14, 2018, 5:27 PM IST

14-july-21.jpg

ಹಾವೇರಿ: ನಗರಸಭೆ ಅಧ್ಯಕ್ಷ ಸ್ಥಾನದ ಕುರ್ಚಿಗಾಗಿ ಬಿಜೆಪಿ-ಕಾಂಗ್ರೆಸ್‌ ನಡುವೆ ಸದಸ್ಯರ ನಡುವೆ ಕಚ್ಚಾಟ ಶುರುವಾಗಿದ್ದು ಶುಕ್ರವಾರ ಹಂಗಾಮಿ ಅಧ್ಯಕ್ಷ ತಾನು ಎಂದು ಬಿಜೆಪಿಯ ಇರ್ಫಾನ್‌ಖಾನ್‌ ಪಠಾಣ ಅಧ್ಯಕ್ಷರ ಕುರ್ಚಿಯಲ್ಲಿ ಆಸೀನರಾದರು.

ಬುಧವಾರ ಬಿಜೆಪಿ ಸದಸ್ಯರು ಅವಿಶ್ವಾಸಮಂಡನೆ ನಿರ್ಣಯ ಕೈಗೊಂಡಿದ್ದರು. ಬಳಿಕ ಗುರುವಾರ ನಗರಸಭೆ ಅಧ್ಯಕ್ಷೆ ಪಾರ್ವತಮ್ಮ ಹಲಗಣ್ಣನವರ ತಾವೇ ನಗರಸಭೆ ಅಧ್ಯಕ್ಷೆ; ಬಿಜೆಪಿಯವರು ಮಂಡಿಸಿರುವ ಅವಿಶ್ವಾಸ ಮಂಡನೆ ಸಭೆಯೇ ಅಸಿಂಧು ಎಂದು ಅಧ್ಯಕ್ಷ ಕುರ್ಚಿಯಲ್ಲಿ ಆಸೀನರಾಗಿದ್ದರು. ಶುಕ್ರವಾರ ಮಧ್ಯಾಹ್ನ ದಿಢೀರನೇ ಬಿಜೆಪಿಯವರು ನಿರ್ಣಯ ಕೈಗೊಂಡು ಆಯ್ಕೆಯಾಗಿದ್ದ ಹಂಗಾಮಿ ಅಧ್ಯಕ್ಷ ಇರ್ಫಾನ್‌ಖಾನ್‌ ಪಠಾಣ ನಗರಸಭೆ ಅಧ್ಯಕ್ಷರ ಕಚೇರಿಗೆ ಬಂದು ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತಿದ್ದರು. ನಂತರ ಬಂದ ಪಾರ್ವತಮ್ಮ ಹಲಗಣ್ಣನವರ ಕುರ್ಚಿ ಬಿಟ್ಟು ಕೊಡುವಂತೆ ವಾಗ್ವಾದ ನಡೆಸಿದರು.

‘ಇಲ್ಲಿ ನಾನು ಅಧ್ಯಕ್ಷೆಯಾಗಿದ್ದೇನೆ. ಕೋರಂ ಇಲ್ಲದೇ ಮಾಡಿರುವ ಸಭೆ, ತೆಗೆದುಕೊಂಡಿರುವ ತೀರ್ಮಾನ ಯಾವುದೂ ಕಾನೂನಾತ್ಮಕವಾಗಿಲ್ಲ. ನಾನು ಕುಳಿತುಕೊಳ್ಳಬೇಕಾದ ಅಧ್ಯಕ್ಷರ ಕುರ್ಚಿ ಬಿಟ್ಟು ಮೇಲೇಳಿ’ ಎಂದು ಪಾರ್ವತಮ್ಮ ಹಲಗಣ್ಣನವರ ಹೇಳಿದರು. ಇದಕ್ಕೆ ಪಠಾಣ ಉತ್ತರಿಸಿ, ಅವರು ‘ನಾನೇ ಹಂಗಾಮಿ ಅಧ್ಯಕ್ಷ’ ಎಂದು ಕುರ್ಚಿ ಬಿಟ್ಟು ಮೇಲೇಳಲಿಲ್ಲ. ಕೊನೆಗೆ ಈ ವಿಷಯವನ್ನು ಜಿಲ್ಲಾಧಿ ಕಾರಿ ಗಮನಕ್ಕೆ ತರುವುದಾಗಿ ಪಾರ್ವತಮ್ಮ ಹಲಗಣ್ಣನವರ ಕಚೇರಿಯಿಂದ ಹೊರನಡೆದರು. ಇವರ ಈ ಕಿತ್ತಾಟದಿಂದಾಗಿ ಜನರಿಗೆ ನಗರಸಭೆಯ ಅಧಿಕೃತ ಅಧ್ಯಕ್ಷರು ಯಾರು ಎಂಬುದು ತಿಳಿಯದಂತಾಗಿದೆ. ನಗರಸಭೆ ಕಾನೂನಿನ ಪ್ರಕಾರ ನಗರಸಭೆಯಲ್ಲಿ ಕೈಗೊಂಡ ಮಹತ್ವದ ನಿರ್ಣಯಗಳಿಗೆ ಜಿಲ್ಲಾಧಿಕಾರಿಯವರ ಅಂಕಿತ ಬಿದ್ದ ನಂತರವೇ ಅದು ಅಧಿಕೃತಗೊಳ್ಳುತ್ತದೆ. ಜಿಲ್ಲಾಧಿಕಾರಿಯವರು ಈವರೆಗೂ ಅವಿಶ್ವಾಸ ನಿರ್ಣಯದ ಬಗ್ಗೆ ಅಂಕಿತ ಹಾಕದೆ ಇರುವುದರಿಂದ ಅಧ್ಯಕ್ಷರ ಕುರ್ಚಿಗಾಗಿ ಈಗ ಕಿತ್ತಾಟ ನಡೆದಿದೆ.

ತಾರಕಕ್ಕೇರಿದ ಕಿತ್ತಾಟ
ಅಧ್ಯಕ್ಷ ಕುರ್ಚಿ ಕಚ್ಚಾಟ ಶುಕ್ರವಾರ ಸಂಜೆ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ. ಪಾರ್ವತಮ್ಮ ಹಲಗಣ್ಣನವರ ನಾನು ಕಚೇರಿಗೆ ಹೋದಾಗ ಇರ್ಫಾನ್‌ಖಾನ್‌ ಅಧ್ಯಕ್ಷರ ಕುರ್ಚಿಯಲ್ಲಿ ಕುಳಿತಿದ್ದರು. ಇದ್ದನ್ನು ಪ್ರಶ್ನಿಸಿದಾಗ ತಮ್ಮ ಸೊಂಟಕ್ಕೆ ಕೈ ಹಾಕಿ ದೂಡಿ ಅವಮಾನ ಮಾಡಿದ್ದಾರೆ. ಸದಸ್ಯ ನಿರಂಜನ ಹೇರೂರು ಹಾಗೂ ಲಲಿತಾ ಗುಂಡೇನಹಳ್ಳಿ ನಗರಸಭೆಯಲ್ಲಿ ಕೆಲಸ ಮಾಡಬಾರದು. ಇತ್ತ ಬಂದರೆ ಜೀವಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿದ್ದಾರೆ ಎಂದು ಮೂವರ ವಿರುದ್ಧ ದೂರು ದಾಖಲಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಇರ್ಫಾನ್‌ಖಾನ್‌ ಪಾರ್ವತಮ್ಮನವರು ಹಾಗೂ ಕಾಂಗ್ರೆಸ್‌ನ ಕೆಲ ಸದಸ್ಯರು ಅವಾಚ್ಯ ಶಬ್ದಗಳಿಂದ ನಿಂದಿಸಿ, ಕಚೇರಿಯಿಂದ ಹೊರಹೋಗದಿದ್ದರೆ ಹೆಣ ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಅಲ್ಲದೆ ಮಹಿಳಾ ಸದಸ್ಯೆಗೆ ಹೊಡೆದಿದ್ದಾರೆ ಎಂದು ದೂರು ನೀಡಿದ್ದು, ಅಧ್ಯಕ್ಷ ಕುರ್ಚಿ ಕಚ್ಚಾಟ ಅತಿರೇಕಕ್ಕೆ ತಿರುಗಿದೆ. 

ಟಾಪ್ ನ್ಯೂಸ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

ಸಿ.ಟಿ. ರವಿ

Pen drive Case; ಹಾಲಿ ಮಹಿಳಾ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಪ್ರಧಾನಿ ಮೋದಿ ಪ್ರಧಾನ ಸುಳ್ಳುಗಾರ, ಸುಳ್ಳಿನ ಸರದಾರ: ಬಿ.ಕೆ.ಹರಿಪ್ರಸಾದ್

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

Hubli; ಸಭೆ ಮೊಟಕುಗೊಳಿಸಿದ ಅಧಿಕಾರಿಗಳು; ಪ್ರತಿಭಟನೆ ನಡೆಸಿದ ಮಠಾಧೀಶರು

vijayendra

Hubli; ಕೇರಳ ಮಾದರಿಯಲ್ಲಿ ರಾಜ್ಯದಲ್ಲಿ ಸರ್ಕಾರ ನಡೆಯುತ್ತಿದೆ: ವಿಜಯೇಂದ್ರ ಆರೋಪ

ಪೋಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನ… ಅತ್ಯಾಚಾರ ಆರೋಪಿ ಕಾಲಿಗೆ ಗುಂಡೇಟು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.