ನಿರಂತರ ಓದಿನಿಂದ ವ್ಯಕ್ತಿತ್ವ ವಿಕಾಸ


Team Udayavani, Feb 13, 2017, 2:38 PM IST

hub5.jpg

ಧಾರವಾಡ: ವಿಭಿನ್ನ ಕ್ಷೇತ್ರಗಳ ಪುಸ್ತಕಗಳನ್ನು ಇಷ್ಟಪಟ್ಟು ಓದು ಹಾಗೂ ಆ ನಿರಂತರ ಓದಿನಿಂದ ವ್ಯಕ್ತಿತ್ವ ವಿಕಾಸ ಸಾಧ್ಯವಾಗುತ್ತದೆ ಎಂದು ಶಿವಮೊಗ್ಗೆಯ ಕಿಶೋರ ಸಾಹಿತಿ, ಅಂಕಣಕಾರರಾದ 7ನೆಯ ತರಗತಿಯ ವಿದ್ಯಾರ್ಥಿ ಅಂತಃಕರಣ ಹೇಳಿದರು. 

ಸಮೀಪದ ಬೆಳ್ಳಿಗಟ್ಟಿ ಗ್ರಾಮದಲ್ಲಿ ಬೆಲ್ಲದ ಶಿಕ್ಷಣ ಮತ್ತು ಕೃಷಿ ಅಭಿವೃದ್ಧಿ ಪ್ರತಿಷ್ಠಾನ ರವಿವಾರ ಹಮ್ಮಿಕೊಂಡಿದ್ದ ಹಳ್ಳಿಗಾಡಿನ ಸರಕಾರಿ ಶಾಲಾ ಮಕ್ಕಳ ವಿಕಾಸ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಜ್ಜಿ, ಅಪ್ಪ, ಅಮ್ಮ, ದೊಡ್ಡಮ್ಮ ಸೇರಿ ಎಲ್ಲರೂ ನೀಡಿದ ಮುಕ್ತವಾದ ಪ್ರೀತಿಯ ಮಾರ್ಗದರ್ಶನ ನನ್ನೊಳಗೆ ಒಂದು ವಿಶಿಷ್ಟ ಆಸಕ್ತಿಯ ಬರವಣಿಗೆಯನ್ನು ರೂಢಿಸಿತು. 

ಯು.ಕೆ.ಜಿ. ಇದ್ದಾಗಲೇ ಸಣ್ಣ ಕತೆ ಬರೆಯಲು ಶುರುವಿಟ್ಟುಕೊಂಡಿರುವ ನನ್ನಿಂದ ಈ ತನಕ 11  ಕೃತಿಗಳು ಓದುಗರ ಕೈಸೇರಿವೆ ಎಂದರು. ಪ್ರತಿಯೊಬ್ಬರೂ ಒಂದೊಂದು ಆಸಕ್ತಿಯನ್ನು ಬೆಳೆಸಿಕೊಳ್ಳಬೇಕು. ನನಗೆ ಕ್ರಿಕೆಟ್‌ ಅಂದರೆ ಬಹಳ ಇಷ್ಟ. ಕ್ರಿಕೆಟ್‌ ಕುರಿತು ನನ್ನ ಬಳಿ ಎಲ್ಲ ದಾಖಲೆಗಳಿವೆ.

ಆಟಗಾರನಾಗಿ ಇಲ್ಲವೇ ಕೋಚ್‌ ಆಗಿ ಅಥವಾ ಟಿವಿ ಕ್ರಿಕೆಟ್‌ ಕಾಮೆಂಟ್ರೇಟರ್‌ ಆಗಿ ಕಾರ್ಯನಿರ್ವಹಿಸುವ ಹಂಬಲ ಹೊಂದಿದ್ದೇನೆ ಎಂದರು. ಬೆಲ್ಲದ ಶಿಕ್ಷಣ ಮತ್ತು ಕೃಷಿ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಮಾತನಾಡಿ, ಇಂದು ಅಖಂಡ ವಿಶ್ವ ಒಂದೇ ಮನೆಯಾಗಿದೆ. ಅದು ಎಲ್ಲರಿಗೂ ಹತ್ತಿರಗೊಂಡಿದೆ.

ದೇಶದ ಆಸ್ತಿಯಾಗಿರುವ ಮಕ್ಕಳು ಸ್ವಾವಲಂಬಿಯಾಗಿ ಸ್ವಾಭಿಮಾನದಿಂದ ಬದುಕಬೇಕಾಗಿದೆ. ಸ್ಪರ್ಧಾತ್ಮಕ ಜಗತ್ತಿನಲ್ಲಿ ನಮ್ಮ ಹಳ್ಳಿಗಾಡಿನ ಮಕ್ಕಳೂ ಸಹ ಹೊಸ ಚಿಂತನೆಗಳ ಮೂಲಕ ಬೆಳೆಯಬೇಕೆನ್ನುವ ಆಶಯ ಈ ಶಿಬಿರದ  ಹಿಂದಿದೆ ಎಂದರು. 

ಮಕ್ಕಳ ಸಾಹಿತಿ ಡಾ| ಆನಂದ ಪಾಟೀಲ ಮಾತನಾಡಿ, ಮಕ್ಕಳ ದಿನ ನಿತ್ಯದ ಶಾಲೆ ಕಲಿಕೆಯಾಚೆ ಇನ್ನಷ್ಟು ಅರಿವನ್ನು ವಿಸ್ತರಿಸಿಕೊಳ್ಳಲು ಈ ಬಗೆಯ ಚಟುವಟಿಕೆಯನ್ನ ಹಮ್ಮಿಕೊಳ್ಳುತ್ತಿದ್ದು, ಬೇರೆ-ಬೇರೆ ರಂಗದಲ್ಲಿನ ಪರಿಣತರು ಮಕ್ಕಳೊಡನೆ ಸಮಯ ಹಂಚಿಕೊಳ್ಳಲಿದ್ದಾರೆ. 

ಇದೊಂದು ಗ್ರಾಮೀಣ ಮಕ್ಕಳಿಗೆ ಹೊಸ ಅನುಭವವಾಗಲಿದೆ. ಇದು ಕಲಿಕೆಯ ಪಾಠವಾಗದೆ,  ಉಲ್ಲಾಸದ ಸಮಯವಾಗಲಿದ್ದು, ಮಕ್ಕಳಿಗೆ ಹಿರಿಯರೊಡನೆ ಹಲವಾರು ಬಗೆಯಲ್ಲಿ ಹಂಚಿಕೊಳ್ಳಲು, ಅವರಿಂದ ಸ್ಫೂಧಿರ್ತಿಗೊಳ್ಳಲು ಸಾಧ್ಯವಾಗಲಿದೆ. ಈಗಾಗಲೆ ವಿಶೇಷವಾದ  ಸಾಧನೆ ಮಾಡಿದ ಮಕ್ಕಳೂ ಇಲ್ಲಿ ಸಮಯ ಹಂಚಿಕೊಳ್ಳಲಿದ್ದಾರೆ ಎಂದರು.  

ಟಾಪ್ ನ್ಯೂಸ್

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ

modi (4)

NITI Aayog ಸಭೆ ಇಂದು; “ವಿಕಸಿತ ಭಾರತ’ದ ಬಗ್ಗೆ ಚರ್ಚೆ: 7 ರಾಜ್ಯಗಳಿಂದ ಬಹಿಷ್ಕಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.