ವ್ಯವಸ್ಥಿತ ನಗರಗಳ ನಿರ್ಮಾಣ ಯೋಜನೆ ಅವಶ್ಯ


Team Udayavani, Feb 3, 2020, 10:20 AM IST

HUBALLI-TDY-1

ಹುಬ್ಬಳ್ಳಿ: ಹೊಸೂರಿನಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಹು-ಧಾ ತ್ವರಿತ ಬಸ್‌ ಸೇವೆ ಸಾರಿಗೆ ವ್ಯವಸ್ಥೆ (ಬಿಆರ್‌ಟಿಎಸ್‌) ಉದ್ಘಾಟಿಸಿದರು.

ಹುಬ್ಬಳ್ಳಿ: ನಗರಗಳು ಬೆಳೆಯುವುದನ್ನು ತಡೆಯಲು ಸಾಧ್ಯವಿಲ್ಲ. ಆದರೆ, ನಗರಗಳ ಸಮರ್ಪಕ ಅಭಿವೃದ್ಧಿಗಾಗಿ ಯೋಜನೆಗಳನ್ನು ರೂಪಿಸುವುದು ಅವಶ್ಯಕವಾಗಿದೆ ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಹೇಳಿದರು.

ಹುಬ್ಬಳ್ಳಿ-ಧಾರವಾಡ ತ್ವರಿತ ಬಸ್‌ ಸೇವೆ ಸಾರಿಗೆ ವ್ಯವಸ್ಥೆ (ಬಿಆರ್‌ಟಿಎಸ್‌) ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಅವರು, ವಿಶ್ವದಲ್ಲಿ ಶೇ.55 ಜನರು ನಗರಗಳಲ್ಲಿ ವಾಸ ಮಾಡುತ್ತಿದ್ದಾರೆ. ಸಂಯುಕ್ತ ರಾಷ್ಟ್ರಗಳ ವರದಿಯನ್ವಯ 2050ರ ವೇಳೆಗೆ ನಗರವಾಸಿಗಳ ಪ್ರಮಾಣ ಶೇ.68ರಷ್ಟಾಗಲಿದೆ ಎಂಬ ಅಂದಾಜಿದೆ. ಭಾರತದಲ್ಲಿ 416 ಮಿಲಿಯನ್‌ ಜನರು ನಗರಗಳಿಗೆ ವಲಸೆ ಬರುವ ಸಾಧ್ಯತೆಯಿದೆ ಎಂದರು.

ನಗರಗಳ ಅಭಿವೃದ್ಧಿಗೆ ಸರಕಾರಗಳಿಂದ ಉತ್ತಮ ಯೋಜನೆ ಹಾಗೂ ಸಮರ್ಪಕ ಅನುಷ್ಠಾನ, ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಅಗತ್ಯವಾಗಿದೆ. ವರ್ಷದಿಂದ ವರ್ಷಕ್ಕೆ ವಾಹನಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಂಚಾರ ವ್ಯವಸ್ಥೆ ಸವಾಲಾಗಿದ್ದು, ವಾಯುಮಾಲಿನ್ಯಕ್ಕೆ ಕಾರಣವಾಗುತ್ತಿದೆ. ಇದರ ತಡೆ ಸೂಕ್ತ ಕ್ರಮ ಅಗತ್ಯ ಎಂದು ಹೇಳಿದರು. ಹವಾಮಾನ ಅಸ್ಥಿರತೆ ಪ್ರತಿಯೊಂದು ಅಭಿವೃದ್ಧಿ ಯೋಜನೆಗಳ ಮೇಲೆ ಪ್ರಭಾವ ಬೀರುತ್ತದೆ. ಪ್ರಕೃತಿ ವಿಕೋಪ ತಡೆದುಕೊಳ್ಳುವಂತೆ ನಗರಗಳನ್ನು ರೂಪಿಸಬೇಕಿದೆ. ವಾಯುಮಾಲಿನ್ಯ ಮಾಡದ ಇಲೆಕ್ಟ್ರಿಕ್‌ ವಾಹನಗಳ ಬಳಕೆ ಹೆಚ್ಚಾಗಬೇಕು ಎಂದರು.

ನಗರಗಳಲ್ಲಿ ವಾಸಿಸುವ ಜನರಿಗೆ ಉಜ್ವಲ ಭವಿಷ್ಯ ಒದಗಿಸುವ ದಿಸೆಯಲ್ಲಿ ನಗರಗಳು ಹಾಗೂ ಗ್ರಾಮಗಳ ಮಧ್ಯೆ ಅಂತರ ಕಡಿಮೆಗೊಳಿಸುವುದು ಅಗತ್ಯವಾಗಿದೆ. ಎಲ್ಲರೂ ಸ್ಥಿತ್ಯಂತರದ ಭಾಗವಾದರೆ ಇದು ಸಾಧ್ಯವಾಗುತ್ತದೆ ಎಂದು ಪ್ರತಿಪಾದಿಸಿದರು. ವಾಣಿಜ್ಯನಗರ ಹುಬ್ಬಳ್ಳಿ ಹಾಗೂ ವಿದ್ಯಾನಗರ ಧಾರವಾಡದ ಮಧ್ಯೆ ಸಂಚರಿಸಲು ಬಿಆರ್‌ಟಿಎಸ್‌ ಸೇವೆ ಅನುಕೂಲತೆ ಕಲ್ಪಿಸಿದೆ. ಹು-ಧಾ ಬಿಆರ್‌ ಟಿಎಸ್‌ ಯೋಜನೆ “ಬೆಸ್ಟ್‌ ಮಾಸ್‌ ಟ್ರಾನ್ಸಿಟ್‌’ ಪ್ರಶಸ್ತಿ ಪಡೆದಿರುವುದು ಸಂತಸ ತಂದಿದೆ.ಪ್ರತಿದಿನ 85,000 ಜನರು ಬಿಆರ್‌ಟಿಎಸ್‌ಬಸ್‌ಗಳಲ್ಲಿ ಸಂಚರಿಸುತ್ತಿದ್ದಾರೆ. ಕೆಲವುಮೆಟ್ರೋ ಲೈನ್‌ಗಿಂತ ಹೆಚ್ಚು ಜನರು ಚಿಗರಿ ಬಸ್‌ಗಳಲ್ಲಿ ಸಂಚರಿಸುತ್ತಿರುವುದು ವಿಶೇಷ. 35 ನಿಮಿಷಗಳಲ್ಲಿ ಒಂದು ನಗರದಿಂದ ಇನ್ನೊಂದು ನಗರಕ್ಕೆ ತೆರಳಬಹುದಾಗಿದೆ ಎಂದು ಹೇಳಿದರು.

ಸಣ್ಣ ನಗರಗಳು ಸ್ಮಾರ್ಟ್‌ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಕಲ್ಪಿಸಲು ಸಾಧ್ಯ ಎಂಬುದಕ್ಕೆ ಹುಬ್ಬಳ್ಳಿ-ಧಾರವಾಡ ಬಿಆರ್‌ಟಿಎಸ್‌ ಯೋಜನೆ ಉತ್ತಮ ಉದಾಹರಣೆಯಾಗಿದೆ. ಚಿಗರಿ ಮಾದರಿಯಂತೆ ರಾಜ್ಯದ ವಿವಿಧ ನಗರಗಳಲ್ಲಿ ಸ್ಮಾರ್ಟ್‌ ಸಮೂಹ ಸಂಚಾರ ವ್ಯವಸ್ಥೆ ಜಾರಿಗೊಳ್ಳುವುದು ಅವಶ್ಯಕವಾಗಿದೆ ಎಂದರು.

ನಗರಗಳ ಅಭಿವೃದ್ಧಿಗೆ ಸೂಕ್ತ ಯೋಜನೆಗಳನ್ನು ರೂಪಿಸದಿದ್ದರೆ ವಾಯುಮಾಲಿನ್ಯ, ಕುಡಿಯುವ ನೀರಿನ ಕೊರತೆ, ಘನತ್ಯಾಜ್ಯ ವಿಲೇವಾರಿ, ನೈರ್ಮಲ್ಯ ಕೊರತೆಯಿಂದ ಸಮಸ್ಯೆಗಳು ಉದ್ಭವಿಸುತ್ತವೆ. ಉತ್ತಮ ನಗರ ನಿರ್ಮಾಣ ಯೋಜಕರ ಜವಾಬ್ದಾರಿಯಾಗಿದೆ. ಎಂ. ವೆಂಕಯ್ಯ ನಾಯ್ಡು, ಉಪ ರಾಷ್ಟ್ರಪತಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.