ಭ್ರಷ್ಟರು ದೇಶಭಕ್ತರಾಗಲು ಸಾಧ್ಯವಿಲ್ಲ


Team Udayavani, Apr 23, 2017, 3:30 PM IST

hub3.jpg

ಹುಬ್ಬಳ್ಳಿ: ದೇಶಭಕ್ತಿಯ ಕಾರಣದಿಂದ ಸೇವೆಗೆ ಸೇರಿರುವ ಪೊಲೀಸರು ಯಾವುದೇ ಬಗೆಯ ಭ್ರಷ್ಟಾಚಾರಕ್ಕೆ ಅವಕಾಶ ಕೊಡಬೇಡಿ. ಭ್ರಷ್ಟರಾದವರು ದೇಶಭಕ್ತರಾಗಲು ಸಾಧ್ಯವಿಲ್ಲವೆಂದು ಜಂಗಲವಾಲೆ ಬಾಬಾ ಖ್ಯಾತಿಯ ದಿಗಂಬರ ಸಂತ ಮುನಿಶ್ರೀ ಚಿನ್ಮಯಸಾಗರ ಮಹಾರಾಜರು ನುಡಿದರು. 

ಇಲ್ಲಿನ ಕಾರವಾರ ರಸ್ತೆಯ ಹಳೆಯ ಸಿಎಆರ್‌ ಮೈದಾನದ ಆವರಣದಲ್ಲಿ ಶುಕ್ರವಾರ ಪೊಲೀಸ್‌ ಸಿಬ್ಬಂದಿ ಉದ್ದೇಶಿಸಿ ಆಶೀರ್ವಚನ ನೀಡಿದ ಮುನಿಶ್ರೀ, ದುರ್ಜನರಿಗೆ ಕಡಿವಾಣ ಹಾಕುವ ಪೊಲೀಸರು ಸಜ್ಜನರ ರಕ್ಷಣೆಗೆ ಮುಂದಾಗಬೇಕು. ಸಜ್ಜನರಿಗೆ ಎಂದೂ ತೊಂದರೆ ಕೊಡಬೇಡಿ ಎಂದರು. 

ಸಂತರು ಹಾಗೂ ಪೊಲೀಸರ ದಾರಿಗಳು ಬೇರೆಯಾಗಿರಬಹುದು. ಆದರೆ ಇಬ್ಬರ ಉದ್ದೇಶ ಒಂದೇ ಆಗಿದೆ. ಸಮಾಜವನ್ನು ಪಾಪಮುಕ್ತಗೊಳಿಸುವ ಸಮಾನ ಕಾರ್ಯ ಮಾಡುತ್ತಿದ್ದಾರೆ. ದೇಶಸೇವೆ ಮಾಡಬೇಕು. ಉತ್ತಮ ಸಮಾಜ ನಿರ್ಮಿಸಬೇಕೆಂಬ ಭಾವನೆ ಹೊಂದಿ ಪೊಲೀಸ್‌ ಸೇವೆಗೆ ಸೇರಿರುವ ನೀವು ಸತ್ಯ ಮಾರ್ಗದಲ್ಲಿ ಮುನ್ನಡೆಯಲು ಎಂದಿಗೂ ಭೀತಿ ಪಡಬೇಡಿ.

ಸಮಯದ ಪರಿವಿಲ್ಲದೆ ಕುಟುಂಬದ ಸದಸ್ಯರಿಂದ ದೂರ ಉಳಿದು ಸಮಾಜದ ಸುರಕ್ಷೆಗಾಗಿ ಶ್ರಮಿಸುವ ನಿಮ್ಮ ಬಗ್ಗೆ ನಿಮ್ಮ ಪರಿವಾರ ಮಾತ್ರವಲ್ಲ ಇಡೀ ಸಮಾಜಕ್ಕೆ ಹೆಮ್ಮೆ ಇದೆ ಎಂದರು. ನಿಮ್ಮ ಅಧಿಕಾರ, ಸಂಪತ್ತು, ಐಶ್ವರ್ಯ ನೋಡಿ ಜನ ನಿಮ್ಮನ್ನು ಗುರುತಿಸುವುದಿಲ್ಲ. ನಿಮ್ಮ ಸೇವೆ, ಸಮವಸ್ತ್ರಕ್ಕೆ ಮಹತ್ವ ಕೊಡುತ್ತಾರೆ.

ಆದ್ದರಿಂದ ನಿಮ್ಮಬಗ್ಗೆ ಯಾರಾದರೂ ಟೀಕೆ-ಟಿಪ್ಪಣೆಗಳನ್ನು ಮಾಡಿದರೆ  ಅದಕ್ಕೆ ನೀವು ಎದೆಗುಂದಬೇಡಿ. ಸಶಕ್ತ ಸಮಾಜ ನಿರ್ಮಾಣವೇ ನಿಮ್ಮ ಗುರಿಯಾಗಬೇಕು. ಪಾಪಗಳನ್ನು ತಡೆಯುವುದೇ ನಿಮ್ಮ ಉದ್ದೇಶವಾಗಬೇಕು. ನಿಮ್ಮ ಕಾಯಕದಲ್ಲಿ ಧೈರ್ಯವಾಗಿ ಮುನ್ನುಗ್ಗಿ. ಯಾವುದೇ ಆಮಿಷ, ಒತ್ತಡಗಳಿಗೆ ಮಣಿಯಬೇಡಿ ಎಂದರು. 

ಆಯುಕ್ತ ಪಾಂಡುರಂಗ ರಾಣೆ ಮಾತನಾಡಿ, ಮುನಿಶ್ರೀಗಳ ಬೋಧನೆಗಳನ್ನು ಪೊಲೀಸರು, ಸಮಾಜ ಆದರ್ಶವಾಗಿಟ್ಟುಕೊಂಡರೆ ಸಮಾಜದಲ್ಲಿ ಶಾಂತಿ-ನೆಮ್ಮದಿ ಸ್ಥಾಪನೆ ಸಾಧ್ಯ ಎಂದರು. ಇದೇ ಸಂದರ್ಭದಲ್ಲಿ ಜೈನ ಸಮಾಜದ ವತಿಯಿಂದ ಹಾಗೂ ಮುನಿಶ್ರೀ ಚಿನ್ಮಯಸಾಗರ ಚಾರಿಟೇಬಲ್‌ ಟ್ರಸ್ಟ್‌ ವತಿಯಿಂದ ಪೊಲೀಸ್‌ ಅಧಿಕಾರಿಗಳನ್ನು ಸನ್ಮಾನಿಸಲಾಯಿತು.

ಜೈನ ಸಮಾಜ ಅಧ್ಯಕ್ಷ ಶಾಂತಿನಾಥ ಹೋತಪೇಟಿ,  ಉಪಾಧ್ಯಕ್ಷರಾದ ವಿಮಲ ತಾಳಿಕೋಟಿ, ರಾಜೇಂದ್ರ ಬೀಳಗಿ, ಶ್ರೇಣಿಕರಾಜ ರಾಜಮಾನೆ, ಮಹಾವೀರ ಸೂಜಿ, ಧನಪಾಲ ಮುನ್ನೊಳ್ಳಿ, ಬ್ರಹ್ಮಕುಮಾರ ಬೀಳಗಿ,  ಸುನಂದಾ ಗೋಟಡಕಿ, ತ್ರಿಶಲಾ ಮಾಲಗತ್ತಿ, ಪೊಲೀಸ್‌ ಅಧಿಕಾರಿಗಳು, ಸಿಬ್ಬಂದಿ ಇದ್ದರು.  

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.