ಕರ್ಫ್ಯೂ ಕೊಂಚ ಸಡಿಲ; ಜನಸಂಚಾರ ಹೆಚ್ಚಳ
Team Udayavani, Jun 15, 2021, 5:49 PM IST
ಧಾರವಾಡ: ಜಿಲ್ಲೆಯಲ್ಲಿ ಅನ್ಲಾಕ್ ಪ್ರಕ್ರಿಯೆಗೆ ಚಾಲನೆ ಲಭಿಸಿದ್ದು, ಸೋಮವಾರ ಮೊದಲ ದಿನವೇ ಜನ ಹಾಗೂ ವಾಹನಗಳ ಸಂಚಾರ ಜೋರಾಗಿತ್ತು.
ಕಳೆದ ಒಂದೂವರೆ ತಿಂಗಳಿಂದ ಜನ-ವಾಹನಗಳ ಸಂಚಾರವಿಲ್ಲದೇ ಭಣಗುತ್ತಿದ್ದ ಸುಭಾಸ, ಟಿಕಾರೆ ಸೇರಿದಂತೆ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನಗಳ ಸಂಚಾರ ಜೋರಾಗಿತ್ತು. ಮಾರುಕಟ್ಟೆ ಪ್ರದೇಶದಲ್ಲಿ ಜನರ ಸಂಚಾರ, ವ್ಯಾಪಾರ-ವಹಿವಾಟು ಹೆಚ್ಚಿತ್ತು.
ಅನ್ಲಾಕ್ ಪ್ರಕ್ರಿಯೆ ಮೊದಲ ಹಂತವಾಗಿ ಅಗತ್ಯ ವಸ್ತುಗಳು ಸೇರಿ ಕೆಲ ವಲಯಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಬೆಳಗ್ಗೆಯಿಂದ ತುಂತುರು ಮಳೆ ಇದ್ದ ಕಾರಣಕ್ಕೆ ಮಾರುಕಟ್ಟೆಯಲ್ಲಿ ಜನ ಸಂಚಾರ ವಿರಳವಾಗಿತ್ತು. ಮಧ್ಯಾಹ್ನ 2 ಗಂಟೆವರೆಗೂ ವ್ಯಾಪಾರ-ವಹಿವಾಟಿಗೆ ಅವಕಾಶ ನೀಡಿದ್ದರಿಂದ ಕೆಲ ವ್ಯಾಪಾರಸ್ಥರು ವಿಳಂಬವಾಗಿ ಅಂಗಡಿ ತೆರೆದರೆ, ಬೆಳಗ್ಗೆ ಬೇಗ ಅಂಗಡಿ ತೆರೆದವರಿಗೆ ಮಳೆ ನಿರಾಸೆ ಮೂಡಿಸಿತು.
ರಸ್ತೆಗಿಳಿದ ಜನರು ಮಾತ್ರ ಸರ್ಕಾರದ ನಿಯಮ ಪಾಲನೆ ಮಾಡದಿರುವುದು ಸ್ಪಷ್ಟವಾಗಿತ್ತು. ಬಹುತೇಕ ಜನರು, ವ್ಯಾಪಾರಸ್ಥರು ಮಾಸ್ಕ್ ಇಲ್ಲದೆ ವ್ಯಾಪಾರ-ವಹಿವಾಟು ನಡೆಸಿರುವುದು ಸಾಮಾನ್ಯವಾಗಿತ್ತು. ಮಧ್ಯಾಹ್ನದ ಬಳಿಕ ಜನ ಸಂಚಾರ ವಿರಳವಾಗಿತ್ತು. ಆಟೋಗಳು ರಸ್ತೆಗಳಿದು ಸಂಚಾರ ಮಾಡಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ