ಬಿಜೆಪಿಗೆ ಜನತೆ ತಕ್ಕಪಾಠ ಕಲಿಸುವ ದಿನ ದೂರವಿಲ್ಲ
ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಕೊಡುಗೆ ಸ್ಮರಣೀಯ
Team Udayavani, Aug 13, 2022, 6:10 PM IST
ಧಾರವಾಡ: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಧಾರವಾಡ-71 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಗರದ ವಾರ್ಡ್ ಗಳಲ್ಲಿ ಕಾಂಗ್ರೆಸ್ನಿಮದ ತಿರಂಗಾ ಯಾತ್ರೆ ನಡೆಸಲಾಯಿತು.
ಮುರುಘಾಮಠದಲ್ಲಿ ಕೆಪಿಸಿಸಿ ಸದಸ್ಯೆ ಶಿವಲೀಲಾ ಕುಲಕರ್ಣಿ ಹಾಗೂ ಕೆಪಿಸಿಸಿ ಜಿಲ್ಲಾ ಉಸ್ತುವಾರಿ ಪಿ.ವಿ.ಮೋಹನ್ ತಿರಂಗಾ ಯಾತ್ರೆಗೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಪಿ.ವಿ. ಮೋಹನ್, ಸ್ವಾತಂತ್ರ್ಯ ಹೋರಾಟದಲ್ಲಿ ಕಾಂಗ್ರೆಸ್ ಕೊಡುಗೆ ಸ್ಮರಣೀಯ. ಅನೇಕ ಮಹನೀಯರ ತ್ಯಾಗ-ಬಲಿದಾನ ಪ್ರತೀಕವಾಗಿ ಸ್ವಾತಂತ್ರ್ಯ ಲಭಿಸಿದ್ದು, ಅದನ್ನು ಉಳಿಸಿಕೊಳ್ಳಬೇಕು. ಧ್ವಜ ಸಂಹಿತೆ ಉಲ್ಲಂಘಿಸಿ ಪಾಲಿಸ್ಟರ್ ಧ್ವಜ ಹಾರಿಸಲು ಆದೇಶ ನೀಡುವ ಮೂಲಕ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಲಾಗಿದೆ.
ರಾಷ್ಟ್ರಧ್ವಜ ದೇಶದ ಸ್ವಾಭಿಮಾನದ ಸಂಕೇತ. ಇದಕ್ಕೆ ಅಪಚಾರ ಆಗದಂತೆ ಎಚ್ಚರ ವಹಿಸಬೇಕು. ಬಿಜೆಪಿ ನಾಯಕರು ಢೋಂಗಿತನದ ದೇಶಭಕ್ತಿ ಪ್ರದರ್ಶನ ಮಾಡುತ್ತಿದ್ದು, ಅಗತ್ಯ ವಸ್ತಗಳ ಬೆಲೆ ಏರಿಸುವುದರ ಜತೆಗೆ ಬಡವರ ಜೀವನದ ಜತೆಗೆ ಚೆಲ್ಲಾಟ ಆಡುತ್ತಿದ್ದಾರೆ.
ಬಿಜೆಪಿಗೆ ಜನತೆ ತಕ್ಕ ಪಾಠ ಕಲಿಸುವ ದಿನ ದೂರವಿಲ್ಲ ಎಂದರು. ಮುರುಘಾ ಮಠದಿಂದ ಆರಂಭಗೊಂಡ ಪಾದಯಾತ್ರೆ ಹೆಬ್ಬಳ್ಳಿ ಅಗಸಿ, ಕಾಮನಕಟ್ಟಿ, ನವಲೂರು ಅಗಸಿ, ಹೊಸಯಲ್ಲಾಪುರ, ಮದಾರಮಡ್ಡಿ, ಕೆಸಿಸಿ ಬ್ಯಾಂಕ್, ಸುಭಾಷ್ ರಸ್ತೆ, ರೀಗಲ್ ಸರ್ಕಲ್, ಗೊಲ್ಲರ ಒಣಿ, ಕಮಲಾಪುರ, ಮಾಳಾಪೂರ, ಶಿವಾಲಯ, ಗುಲಗಂಜಿಕೊಪ್ಪ ಗಣಪತಿ ಗುಡಿಗೆ ಮುಕ್ತಾಯಗೊಂಡಿತು. ಕೆಪಿಸಿಸಿ ಸದಸ್ಯೆ ಶಿವಲೀಲಾ ಕುಲಕರ್ಣಿ, ಮಹಾನಗರ ಜಿಲ್ಲಾಧ್ಯಕ್ಷ ಅಲ್ತಾಫ ಹಳ್ಳೂರ, ಅರವಿಂದ ಎಗನಗೌಡರ, ಈಶ್ವರ ಶಿವಳ್ಳಿ, ಪಾಲಿಕೆ ಸದ್ಯಸರಾದ ರಾಜು ಕಮತಿ, ಸೂರವ್ವ ಪಾಟೀಲ, ದೀಪಾ ಸಂತೋಷ ನೀರಲಕಟ್ಟಿ, ಮೈನು ನಧಾಪ, ಆನಂದ ಸಿಂಗನಾಥ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ