ಆರ್ಥಿಕ ನೆರವು ನೀಡುವಂತೆ ಆಗ್ರಹ
Team Udayavani, May 12, 2020, 10:10 AM IST
ಹುಬ್ಬಳ್ಳಿ: ಕೋವಿಡ್ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಆರ್ಥಿಕ ಸಂಕಷ್ಟ ಅನುಭವಿಸುತ್ತಿರುವ ಶಾಮಿಯಾನ ಕಾರ್ಮಿಕರಿಗೆ ಆರ್ಥಿಕ ನೆರವು ನೀಡಬೇಕೆಂದು ಮುಖ್ಯಮಂತ್ರಿಗೆ ಜಿಲ್ಲಾಧಿಕಾರಿ ಮೂಲಕ ಕರ್ನಾಟಕ ರಾಜ್ಯ ಶಾಮಿಯಾನ ಡೆಕೋರೇಶನ್ ಧ್ವನಿ ಮತ್ತು ಬೆಳಕು ಕ್ಷೇಮಾಭಿವೃದ್ಧಿ ಸಂಘದಿಂದ ಮನವಿ ಸಲ್ಲಿಸಲಾಯಿತು.
ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ರಾಜ್ಯದ ಅಸಂಘಟಿತ ಕಾರ್ಮಿಕರ ಕೈ ಹಿಡಿದಿದ್ದು, ಇದರಲ್ಲಿ ಕೆಲವೊಂದು ವಲಯಗಳನ್ನು ಕೈಬಿಡಲಾಗಿದೆ. ಇದರಲ್ಲಿ ಪೆಂಡಾಲ್, ಶಾಮಿಯಾನ, ಡೆಕೋರೇಟರ್, ಮೈಕ್ ಸಿಸ್ಟಮ್, ವಿದ್ಯುತ್ ಅಲಂಕಾರ, ಮಂಟಪ ಅಲಂಕಾರದ ಕಾರ್ಮಿಕರು ಹಾಗೂ ಮಾಲೀಕರು ಸಾವಿರಾರು ಜನರಿದ್ದಾರೆ. ಇವರೆಲ್ಲರೂ ಉದ್ಯೋಗವಿಲ್ಲದೇ ಜೀವನ ನಡೆಸಲು ಪರದಾಡುತ್ತಿದ್ದಾರೆ. ಸಾವಿರಾರು ಕಾರ್ಮಿಕರು ಒಂದು ಹೊತ್ತಿನ ಊಟಕ್ಕೂ ಪರದಾಡುತ್ತಿರುವ ಸ್ಥಿತಿ ಬಂದೊದಗಿದೆ. ಆದ್ದರಿಂದ ಅಸಂಘಟಿತ ಕಾರ್ಮಿಕ ವಲಯಕ್ಕೆ ನೀಡಿದಂತೆ ಶಾಮಿಯಾನ ಕಾರ್ಮಿಕರಿಗೂ ಆರ್ಥಿಕ ನೆರವು ನೀಡುವಂತೆ ಜಿಲ್ಲಾಧಿಕಾರಿ ದೀಪಾ ಚೋಳನ್ ಮೂಲಕ ಮುಖ್ಯಮಂತ್ರಿಗೆ ಸಂಘದ ಅಧ್ಯಕ್ಷ ಶಿವಕುಮಾರ ಹಿರೇಮಠ, ಕಾರ್ಯದರ್ಶಿ ವಿಶಾಲ ವಾಘಮೋಡೆ ಮನವಿ ಸಲ್ಲಿಸಿದ್ದಾರೆ.