ಕಲಾಪ್ರದರ್ಶನಕ್ಕಿನ್ನು ಪರೀಕ್ಷೆ ಕಡ್ಡಾಯ!


Team Udayavani, Jun 28, 2018, 6:00 AM IST

examination-cd.jpg

ಧಾರವಾಡ: ಗಣ್ಯರ ಜಯಂತಿ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಒಂದೇ ಕಲಾ ತಂಡದಿಂದ ವರ್ಷದಲ್ಲಿ 50 ಪ್ರದರ್ಶನ, ಯೋಗ್ಯ ಕಲಾತಂಡಗಳ ನಿರ್ಲಕ್ಷé, ಅಧಿಕಾರಿಗಳ ಒಳಒಪ್ಪಂದ ಮತ್ತು ಕಲಾ ದಲ್ಲಾಳಿಗಳ ಹಾವಳಿ ನಿಯಂತ್ರಣಕ್ಕೆ ಸಮ್ಮಿಶ್ರ ಸರ್ಕಾರ ಆಕಾಶವಾಣಿ ಮಾದರಿಯಲ್ಲಿ ಕಲಾತಂಡಗಳ ಆಯ್ಕೆಗೆ ಮುಂದಾಗಿದೆ.

ದೇಶದಲ್ಲೇ ಕಲಾವಿದರಿಗೆ ಅತಿ ಹೆಚ್ಚು ಅನುದಾನ ನೀಡುವ ರಾಜ್ಯ ಎಂಬ ಖ್ಯಾತಿ ಹೊಂದಿರುವ ಕರ್ನಾಟಕ ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇದೀಗ ಇಂಥದ್ದೊಂದು ದಿಟ್ಟ ನಿರ್ಧಾರಕ್ಕೆ ಬಂದಿದೆ. ಇನ್ನು, ಕಲಾ ಪ್ರದರ್ಶನ ಮಾಡುವ ಕಲಾ ತಂಡಗಳು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಡೆಸುವ ಪರೀಕ್ಷೆಯಲ್ಲಿ ಉತ್ತೀರ್ಣವಾಗಿ ಕಲಾತಂಡಗಳ ಪಟ್ಟಿಯಲ್ಲಿರಲು ಅರ್ಹತೆ ಪಡೆಯಬೇಕು. ಇದನ್ನು ಕಡ್ಡಾಯಗೊಳಿಸಲು ನಿರ್ಧರಿಸಿದೆ.

ಇಲ್ಲಿಯವರೆಗೂ ಜಿಲ್ಲಾಮಟ್ಟದಲ್ಲಿ ಬೆರಳೆಣಿಕೆ ಕಲಾತಂಡಗಳು ಮಾತ್ರ ಮೇಲಿಂದ ಮೇಲೆ ಪ್ರದರ್ಶನ ನೀಡುತ್ತಿದ್ದವು. ಈ ಕುರಿತು ಅನೇಕ ಬಾರಿ ಜಿಲ್ಲಾಮಟ್ಟದಲ್ಲಿ ಮತ್ತು ವಿಧಾನಸಭೆಯಲ್ಲೂ ಕೂಡ ಸಾಕಷ್ಟು ಚರ್ಚೆಯಾಗಿತ್ತು. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಸಮ್ಮಿಶ್ರ ಸರ್ಕಾರ, ಒಂದೇ ತಿಂಗಳಲ್ಲಿ ಸಂಸ್ಕೃತಿ ಇಲಾಖೆಯ ಸುಧಾರಣೆಗೆ ಕೈ ಹಾಕಿದೆ.

ಕಮಿಷನ್‌ ಮಾಫಿಯಾ:
ಸರ್ಕಾರದಿಂದ ನಡೆಯುವ 27ಕ್ಕೂ ಹೆಚ್ಚು ಗಣ್ಯರ ಜಯಂತಿ ಮತ್ತು ಸ್ಥಳೀಯ ಆಸಕ್ತಿದಾಯಕ ಕಾರ್ಯಕ್ರಮಗಳಿಗೆ ವಿವಿಧ ಕಲಾತಂಡಗಳನ್ನು ಇಲಾಖೆ ಆಹ್ವಾನಿಸುತ್ತ ಬಂದಿದೆ. ಇಲ್ಲಿ ಆಯಾ ಜಿಲ್ಲೆಗಳಲ್ಲಿನ ಕೆಲವೇ ಕೆಲವು ಕಲಾ ತಂಡಗಳು ಕಾರ್ಯಕ್ರಮ ಕೊಡುತ್ತಿದ್ದವು. ಕಲಾವಿದರ ಮಾಫಿಯಾ ಇಲ್ಲಿ ಕೆಲಸ ಮಾಡುತ್ತಿತ್ತು. ಕೆಲವು ಜಿಲ್ಲೆಗಳಲ್ಲಂತೂ ಕಲಾ ದಲ್ಲಾಳಿಗಳ ಹಾವಳಿ ಹೆಚ್ಚಾಗಿದ್ದೂ ಉಂಟು. ಇದನ್ನು ಮನಗಂಡ ಸರ್ಕಾರ 30 ಜಿಲ್ಲೆಗಳಲ್ಲೂ ಅರ್ಹತೆ ಪಡೆದವರಿಗಷ್ಟೇ ಕಾರ್ಯಕ್ರಮ ನೀಡಲು ಯೋಜಿಸಿದೆ.

ಕಲಾವಿದರ ಆಯ್ಕೆಗೆ ಸಮಿತಿ:
ಸದ್ಯಕ್ಕೆ ಜಿಲ್ಲಾ ಮಟ್ಟದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರ ಅಧ್ಯಕ್ಷತೆಯಲ್ಲಿ, ವಾರ್ತಾ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಪ್ರತಿನಿಧಿಗಳನ್ನು ಒಳಗೊಂಡ ಕಲಾತಂಡಗಳ ಆಯ್ಕೆ ಸಮಿತಿ ರಚಿಸಲಾಗುತ್ತದೆ. ಈ ಸಮಿತಿ ಆಯಾ ಜಿಲ್ಲೆಗಳ ವ್ಯಾಪ್ತಿಯ ಕಲಾತಂಡಗಳನ್ನು ಗುರುತಿಸಿ ಆಯ್ಕೆ ಮಾಡಲು ಅರ್ಜಿ ಆಹ್ವಾನಿಸಲಿದೆ. ನಂತರ ವಿವಿಧ ಕಲಾ ಪ್ರಕಾರದ ತಂಡಗಳು ಮತ್ತು ಕಲಾವಿದರು ಸಂದರ್ಶನಕ್ಕೆ ಹಾಜರಾಗಬೇಕು. ಆಯ್ಕೆಯಾದ ತಂಡಗಳನ್ನು ಕ್ರಮ ಸಂಖ್ಯೆಗೆ ಅನುಗುಣವಾಗಿ ಸೂಚನಾ ಫಲಕದಲ್ಲಿ ಪ್ರಕಟಿಸಿ, ಕನ್ನಡ ಸಂಸ್ಕೃತಿ ಇಲಾಖೆ ಕಚೇರಿಯಲ್ಲೂ ದಾಖಲಿಸಲಾಗುತ್ತದೆ. ಪಟ್ಟಿ ಸೇರಿದ ಉತ್ತಮ ತಂಡಗಳಿಗೆ ಆವರ್ತದ (ರೂಸ್ಟರ್‌)ಆಧಾರದ ಮೇಲೆ ಪ್ರದರ್ಶನಕ್ಕೆ ಅವಕಾಶ ನೀಡಲಾಗುತ್ತದೆ. ಈ ಅಧಿಕಾರವನ್ನು ಸಹಾಯಕ ನಿರ್ದೇಶಕರಿಗೆ ನೀಡಲಾಗಿದೆ.

ಆಕಾಶವಾಣಿ ಮಾದರಿ
ಈ ತನಕ ಧನಸಹಾಯ ಪಡೆಯಲು ಯಾವುದೇ ಕಟ್ಟಳೆಗಳು ಇರಲಿಲ್ಲ. ನೇರವಾಗಿ ಕಾರ್ಯಕ್ರಮದ ವರದಿ ಕೊಟ್ಟು ಅನುದಾನ ಪಡೆಯಬಹುದಾಗಿತ್ತು. ಕೇಂದ್ರ ಪ್ರಸಾರ ಭಾರತಿ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಇದೇ ಮಾದರಿ ಇದೆ. ಆಯಾ ಕಲಾ ಪ್ರಕಾರದ ತಂಡಗಳ ಸದಸ್ಯರ ಧ್ವನಿ ಪರೀಕ್ಷೆ ಮಾಡಿ, ನುರಿತ ತಜ್ಞರು ಕಲಾ ತಂಡಗಳ ಪ್ರದರ್ಶನ ನೋಡಲಾಗುತ್ತದೆ. ಅರ್ಹತೆ ಪಡೆದ  ನಂತರವೇ ಆಕಾಶವಾಣಿ, ದೂರದರ್ಶನ ಕಲಾವಿದರ ಪಟ್ಟಿಯಲ್ಲಿ ಆ ಕಲಾವಿದರು ಸೇರ್ಪಡೆಯಾಗುತ್ತಾರೆ. ಆಕಾಶವಾಣಿಯಲ್ಲಿ ಉತ್ತಮ ಸಾಧನೆಗೆ ತಕ್ಕಂತೆ ಕಲಾವಿದರಿಗೆ ಎ,ಬಿ,ಸಿ, ಗ್ರೇಡ್‌ಗಳನ್ನು ಕೂಡ ನೀಡಲಾಗುತ್ತದೆ.

ನಿರ್ಲಕ್ಷಿಸಿದರೆ ಪಟ್ಟಿಯಿಂದ ಔಟ್‌
ಕಲಾ ತಂಡಗಳ ಮುಖ್ಯಸ್ಥರಿಗೆ ಅಧಿಕೃತವಾಗಿ ವೈಯಕ್ತಿಕ ವಿವರ ನೀಡಲು ಕೋರಲಾಗಿದೆ. ಅಲ್ಲಿ ಆ ಕಲಾತಂಡಗಳ ಮುಖ್ಯಸ್ಥರು ತಮ್ಮ ಸ್ವ ವಿವರದ ಜೊತೆಗೆ ತಮ್ಮ ಸಂಗಡಿಗರ ವಿವರವನ್ನೂ ನೀಡಬೇಕು. ತಂಡದಲ್ಲಿ ಇಲ್ಲದಿರುವ ಕಲಾವಿದರನ್ನು ಬಳಸಿಕೊಂಡರೆ ಧನಸಹಾಯಕ್ಕೆ ಕತ್ತರಿ ಬೀಳಲಿದೆ. ಅಷ್ಟೇ ಅಲ್ಲ, ಇಲಾಖೆ ನಿಗದಿ ಪಡಿಸಿದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೇ ಹೋದರೆ ಆ ಕಲಾವಿದರ ಹೆಸರನ್ನು ಪಟ್ಟಿಯಿಂದ ಕೈ ಬಿಡುವ ಅಧಿಕಾರವನ್ನು ಸಹಾಯಕ ನಿರ್ದೇಶಕರಿಗೆ ನೀಡಲಾಗಿದೆ.

ನೂತನ ಕಲಾತಂಡಗಳ ಆಯ್ಕೆಗೆ ಸರ್ಕಾರದಿಂದ ಆದೇಶ ಬಂದಿರುವುದು ನಿಜ. ಇದರಿಂದ ಸಮಾನವಾಗಿ ಎಲ್ಲಾ ಕಲಾವಿದರ ಕಲೆ ಪ್ರದರ್ಶನಕ್ಕೆ ಅವಕಾಶ ನೀಡಲು ಸಾಧ್ಯವಾಗುತ್ತದೆ.
– ಸಿದ್ದಲಿಂಗೇಶ ರಂಗಣ್ಣವರ, ಸಹಾಯಕ ನಿರ್ದೇಶಕ, ಧಾರವಾಡ.

– ಬಸವರಾಜ ಹೊಂಗಲ್‌

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.