ತೀರ್ಪುಗಳ ತರಾತುರಿ ವಿಶ್ಲೇಷಣೆ ಸಾಧುವಲ್ಲ


Team Udayavani, Jul 27, 2019, 8:22 AM IST

hubali-tdy-5

ಹುಬ್ಬಳ್ಳಿ: ನೂತನ ನ್ಯಾಯಾಲಯ ಸಂಕೀರ್ಣವನ್ನು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕಾ ವೀಕ್ಷಿಸಿದರು.

ಹುಬ್ಬಳ್ಳಿ: ನ್ಯಾಯಾಲಯಗಳ ತೀರ್ಪುಗಳನ್ನು ಎಲೆಕ್ಟ್ರಾನಿಕ್‌ ಮಾಧ್ಯಮ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ತರಾತುರಿಯಲ್ಲಿ ವಿಶ್ಲೇಷಣೆ ಮಾಡುವುದು ಸಾಧುವಲ್ಲ. ಇದರಿಂದ ಸಾರ್ವಜನಿಕ ವಲಯಕ್ಕೆ ತಪ್ಪು ಸಂದೇಶಗಳು ರವಾನೆಯಾಗುವ ಸಾಧ್ಯತೆಗಳಿರುತ್ತವೆ ಎಂದು ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಅಭಯ ಶ್ರೀನಿವಾಸ ಓಕಾ ಹೇಳಿದರು.

ಇಲ್ಲಿನ ಹೊಸ ನ್ಯಾಯಾಲಯ ಸಂಕೀರ್ಣದಲ್ಲಿ ವಕೀಲರ ಸಂಘದಿಂದ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಸುಪ್ರೀಂ ಹಾಗೂ ಹೈಕೋರ್ಟ್‌ಗಳಲ್ಲಿನ ಮಹತ್ವದ ತೀರ್ಪುಗಳು ಸುಮಾರು 800-1000 ಪುಟಗಳಲ್ಲಿರುತ್ತವೆ. ಬೆಳಗ್ಗೆ ತೀರ್ಪು ಪ್ರಕಟವಾದರೆ ಒಂದೆರಡು ಗಂಟೆಗಳಲ್ಲಿ ಈ ಬಗ್ಗೆ ವಿಶ್ಲೇಷಣೆಗಳು ಶುರುವಾಗುತ್ತವೆ. ಇದರಲ್ಲಿ ಕಾನೂನು ಪರಿಣಿತರು, ತಜ್ಞರೆನಿಸಿಕೊಂಡ ಕೆಲವರು ಚರ್ಚೆಯಲ್ಲಿ ಪಾಲ್ಗೊಂಡಿರುತ್ತಾರೆ. ಸುದೀರ್ಘ‌ ತೀರ್ಪನ್ನು ಸೀಮಿತ ಅವಧಿಯಲ್ಲಿ ಓದಿ, ಅರ್ಥೈಸಿಕೊಂಡು ವಿಶ್ಲೇಷಣೆ, ವ್ಯಾಖ್ಯಾನ ಮಾಡುವುದು ಸುಲಭವಲ್ಲ. ಹೀಗೆ ತರಾತುರಿಯಿಂದ ಚರ್ಚೆ ಮಾಡುವುದು, ವಿಶ್ಲೇಷಿಸುವುದರಿಂದ ಸಾರ್ವಜನಿಕ ವಲಯಕ್ಕೆ ತಪ್ಪು ಸಂದೇಶ ಹೋಗುವ ಸಾಧ್ಯತೆಗಳಿರುತ್ತದೆ ಎಂದರು. ನ್ಯಾಯಾಲಯದ ತೀರ್ಪುಗಳನ್ನು ವಿಮರ್ಶಿಸುವುದು ತಪ್ಪಲ್ಲ. ಒಬ್ಬ ಸಾಮಾನ್ಯ ವ್ಯಕ್ತಿಯೂ ವಿಮರ್ಶಿಸಬಹುದು. ಆದರೆ ಅದು ಕಾನೂನಿನ ತಳಹದಿ ಮೇಲೆ ಇರಬೇಕು. ಸಮಾಜದಲ್ಲಿ ನ್ಯಾಯಾಂಗ ವ್ಯವಸ್ಥೆಗೆ ದೊಡ್ಡ ಗೌರವವಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿ ತನಗೆ ಕೊನೆಯದಾಗಿ ನ್ಯಾಯ ದೊರೆಯುವುದಾದರೆ ನ್ಯಾಯಾಲಯದಲ್ಲಿ ಎನ್ನುವ ಭಾವನೆಯಿದೆ. ಈ ಭಾವನೆಯನ್ನು ಮತ್ತಷ್ಟು ಹೆಚ್ಚಿಸಿಕೊಂಡು ವೃತ್ತಿಪರತೆ ಕಾಪಾಡಿಕೊಳ್ಳಬೇಕು. ನಮ್ಮ ತೀರ್ಪುಗಳನ್ನು ಸಾಮಾನ್ಯ ಜನರು ಸೇರಿದಂತೆ ಕೆಲ ಏಜೆನ್ಸಿಗಳು ಗಮನಿಸುತ್ತಿರುತ್ತವೆ ಎಂಬುದು ನಮ್ಮ ಮನದಲ್ಲಿರಬೇಕು ಎಂದರು.

ಪ್ರಮುಖ ಸ್ವಾತಂತ್ರ್ಯ ಹೋರಾಟಗಾರರು ವಕೀಲರಾಗಿದ್ದರು ಎಂಬುದು ಇತಿಹಾಸವಾಗಿದೆ. ಮೊದಲ ಲೋಕಸಭೆಯಲ್ಲಿ ಶೇ.35 ಸದಸ್ಯರು ವಕೀಲರಾಗಿದ್ದರು. ಹೀಗಾಗಿ ಅಂದಿನ ಚರ್ಚೆಗಳು, ಕಾನೂನುಗಳ ತಿದ್ದುಪಡಿಗೆ ಸಾಕಷ್ಟು ನೆರವಾಯಿತು. ಪರೋಕ್ಷವಾಗಿ ಸಾಕಷ್ಟು ಹಿರಿಯ ವಕೀಲರು ಕೂಡ ಅಂದಿನ ಸಂಸತ್ತಿಗೆ ಕಾನೂನಿನ ನೆರವು ನೀಡಿದರು. ಯುವ ವಕೀಲರು ನ್ಯಾಯಾಧೀಶರ ಹುದ್ದೆಗಳಿಗೆ ಬರಬೇಕು. ಆ ನಿಟ್ಟಿನಲ್ಲಿ ಅಧ್ಯಯನ, ಸತತ ಪರಿಶ್ರಮವಿರಬೇಕು. ಆಧುನಿಕ ತಂತ್ರಜ್ಞಾನ ಸಾಕಷ್ಟು ಅನುಕೂಲವಾಗಿದ್ದು, ಹಳೆಯ ತೀರ್ಪುಗಳನ್ನು ಕ್ಷಣಾರ್ಧದಲ್ಲಿ ಪಡೆಯಬಹುದಾಗಿದೆ. ಆದರೆ ಇದನ್ನು ಬಳಸುವಾಗ, ಅಳವಡಿಸಿಕೊಳ್ಳುವಾಗ ಜಾಗರೂಕತೆ ಅಗತ್ಯ ಎಂದರು. ಹೈಕೋರ್ಟ್‌ ರಿಜಿಸ್ಟ್ರಾರ್‌ ನ್ಯಾ| ವಿ. ಶ್ರೀಶಾನಂದ, ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಈಶಪ್ಪ ಭೂತೆ, ವಕೀಲರ ಸಂಘದ ಅಧ್ಯಕ್ಷ ಅಶೋಕ ಬಳಿಗಾರ ಇನ್ನಿತರರಿದ್ದರು.

ಟಾಪ್ ನ್ಯೂಸ್

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣೆ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

ಖರ್ಗೆ

ECI; ಮತದಾನದ ಅಂಕಿಅಂಶಗಳ ಆರೋಪ ಮಾಡಿದ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಆಯೋಗದ ಕಿಡಿ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ

Road Mishap ದಾಂಡೇಲಿ; ಕಾರು-ದ್ವಿಚಕ್ರ ವಾಹನ ಅಪಘಾತ: ಸವಾರ ಗಂಭೀರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

prahlad-joshi

2025 ರಿಂದ ಕಲ್ಲಿದ್ದಲು ಆಮದು ಸಂಪೂರ್ಣವಾಗಿ ಬಂದ್: ಪ್ರಹ್ಲಾದ್ ಜೋಶಿ

1-wewewqeeq

Relaxed mood; ಮೊಮ್ಮಗಳೊಂದಿಗೆ ಆಟವಾಡಿದ ಕೇಂದ್ರ ಸಚಿವ‌ ಪ್ರಹ್ಲಾದ ಜೋಶಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1-qewqeqwe

I am back ; ಜೈಲಿನಿಂದ ಬಿಡುಗಡೆಗೊಂಡು ಚುನಾವಣೆ ಪ್ರಚಾರಕ್ಕೆ ಧುಮುಕಿದ ಕೇಜ್ರಿವಾಲ್

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

D. K. Shivakumar-ಎಚ್‌ಡಿಕೆ ಜಗಳದಲ್ಲಿ ಬಿಜೆಪಿ ತಲೆಹಾಕಲ್ಲ: ಆರ್‌.ಅಶೋಕ್‌

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

JDS ಜತೆ ಮೈತ್ರಿ, ಅವಲೋಕನ ಸಭೆಯಲ್ಲಿ ನಿರ್ಧಾರ: ಮಹೇಶ ಟೆಂಗಿನಕಾಯಿ

ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Election Commission ಮೇಲ್ಮನೆ ಚುನಾವಣೆ: ಬಲಗೈ ತೋರು ಬೆರಳಿಗೆ ಶಾಯಿ

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.