ಆರೋಗ್ಯ ಕಾರ್ಡ್‌ ಅಕ್ರಮ ತಡೆಗೆ ಬಿಗಿ ಕ್ರಮ


Team Udayavani, May 2, 2019, 1:33 PM IST

hub-4

ಬೆಂಗಳೂರು: ‘ಆಯುಷ್ಮಾನ್‌ ಭಾರತ್‌ ಆರೋಗ್ಯ ಕರ್ನಾಟಕ’ ಕಾರ್ಡ್‌ಗಳ ನಕಲಿ ಸೃಷ್ಟಿ ಹಾಗೂ ವಿತರಣೆಯಲ್ಲಿ ಅವ್ಯವಹಾರ ತಡೆಗಟ್ಟುವ ನಿಟ್ಟಿನಲ್ಲಿ ಎಪಿಎಲ್, ಬಿಪಿಎಲ್ ಕಾರ್ಡ್‌ ಜತೆಗೆ ಕುಟುಂಬ ಸದಸ್ಯರಿಗೆ ಬಯೋಮೆಟ್ರಿಕ್‌ ಕಡ್ಡಾಯ ಸೇರಿದಂತೆ ಇನ್ನೂ ಅನೇಕ ಹೊಸ ನಿಯಮಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಾರಿಗೆ ತಂದಿದೆ.

ಯೋಜನೆ ಆರಂಭವಾದಾಗಿನಿಂದ ಇಲ್ಲಿಯವರೆಗೆ 32.5 ಲಕ್ಷ ಕಾರ್ಡ್‌ಗಳನ್ನು ವಿತರಿಸಲಾಗಿದೆ. ಆದರೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾರ್ಡ್‌ ವಿತರಣೆಯ ವೇಳೆ ಅವ್ಯವಹಾರ ನಡೆಯುತ್ತಿರುವ ಕುರಿತು ಇಲಾಖೆಗೆ ದೂರುಗಳು ಬಂದಿವೆ. ಪ್ರಮುಖವಾಗಿ ಫೋಟೊ ಸ್ಟುಡಿಯೋಗಳಲ್ಲಿ ನಕಲಿ ಕಾರ್ಡ್‌ ಸೃಷ್ಟಿ, ಮಧ್ಯವರ್ತಿಗಳು ಶೀಘ್ರವಾಗಿ ಕಾರ್ಡ್‌ ಕೊಡಿಸುತ್ತೇನೆ ಎಂದು ದುಪ್ಪಟ್ಟು ಹಣ ವಸೂಲಿ ಮಾಡಿದ ಘಟನೆಗಳು ವರದಿಯಾಗಿವೆ. ಈ ಹಿನ್ನೆಲೆಯಲ್ಲಿ ಸಾರ್ವತ್ರಿಕ ಆರೋಗ್ಯ ಯೋಜನೆಯಲ್ಲಿ ಮಧ್ಯವರ್ತಿ ಹಾಗೂ ಸೇವಾ ಕೇಂದ್ರಗಳಲ್ಲಿ ಅಕ್ರಮ ನಡೆಯಬಾರದು ಎಂದು ಕಾರ್ಡ್‌ ವಿತರಿಸುವ ಎಲ್ಲಾ ಹಂತಗಳಲ್ಲೂ ಹೊಸ ನಿಯಮಗಳನ್ನು ಜಾರಿಗೆ ತರಲು ಆರೋಗ್ಯ ಇಲಾಖೆ ಮುಂದಾಗಿದೆ.

ಇಲ್ಲಿಯವರೆಗೂ ಆರೋಗ್ಯ ಕಾರ್ಡ್‌ ಪಡೆಯಲು ಆಧಾರ್‌ ಹಾಗೂ ರೇಷನ್‌ ಕಾರ್ಡ್‌ ಮಾತ್ರ ನೀಡಲು ಸಾರ್ವಜನಿಕರಿಗೆ ಸೂಚಿಸಲಾಗಿತ್ತು. ಆದರೆ, ಇನ್ನು ಮುಂದೆ ಕುಟುಂಬ ಸದಸ್ಯರೆಲ್ಲರೂ ಕಡ್ಡಾಯವಾಗಿ ಬಯೋಮೆಟ್ರಿಕ್‌ ವಿವರಗಳನ್ನು ನೀಡಲೇಬೇಕು. ಇದರ ಜತೆಗೆ ಆಧಾರ್‌-ಒಟಿಪಿ ಹಾಗೂ ಕ್ಯೂಆರ್‌ ಕೋಡ್‌ ಆಧಾರಿತವಾಗಿ ಕಾರ್ಡ್‌ ವಿತರಿಸುವುದನ್ನು ರದ್ದುಗೊಳಿಸಲಾಗಿದೆ. ಇದರಿಂದ ಫ‌ಲಾನುಭವಿಗಳೇ ಹಾಜರಿದ್ದು ಕಾರ್ಡ್‌ ಪಡೆಯಬೇಕಾಗುತ್ತದೆ.

ಆರೋಗ್ಯ ಕಾರ್ಡ್‌ ವಿತರಿಸುವ ಸರ್ಕಾರಿ ಆಸ್ಪತ್ರೆಗಳು, ಸೇವಾ ಸಿಂಧು ಕೇಂದ್ರ, ಬೆಂಗಳೂರು ಒನ್‌ ಹಾಗು ಕರ್ನಾಟಕ ಒನ್‌ ಸಿಬ್ಬಂದಿ ಬಯೋಮೆಟ್ರಿಕ್‌ ದಾಖಲೆಗಳನ್ನು ನೀಡಿ ತಮ್ಮ ಕಚೇರಿ ಪ್ರವೇಶಿಸಲು ಹಾಗೂ ಕಂಪ್ಯೂಟರ್‌ ಬಳಸುವುದನ್ನು ಕಡ್ಡಾಯ ಮಾಡಲಾಗಿದೆ. ಸಿಬ್ಬಂದಿಗೆ ಬಯೋಮೆಟ್ರಿಕ್‌ ಕಡ್ಡಾಯವಾದಾಗ ಅನಧಿಕೃತ ವ್ಯಕ್ತಿ ಅಥವಾ ಏಜೆಂಟ್ರುಗಳು ಕಾರ್ಡ್‌ ತಯಾರಿಕೆ, ವಿತರಣೆಯ ಯಾವುದೇ ಹಂತದಲ್ಲಿ ಅಕ್ರಮ ನಡೆಸಲು ಸಾಧ್ಯವಾಗುವುದಿಲ್ಲ. ಜತೆಗೆ, ಅಧಿಕೃತವಾಗಿ ಕಾರ್ಡ್‌ ವಿತರಿಸುವ ಸಿಬ್ಬಂದಿ ತಾವು ವಿತರಿಸುವ ಕಾರ್ಡ್‌ಗಳಿಗೆ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ.

ಅಲ್ಲದೇ, ಆಸ್ಪತ್ರೆ ಹಾಗೂ ಸೇವಾಕೇಂದ್ರಗಳಲ್ಲಿ ಕಾರ್ಡ್‌ ವಿತರಿಸುವ ಇಲಾಖೆಯ ಸಿಬ್ಬಂದಿ, ಪಾಸ್‌ವರ್ಡ್‌/ಯುಸರ್‌ ಐಡಿಯನ್ನು ಅನಧಿಕೃತ ವ್ಯಕ್ತಿಗಳೊಂದಿಗೆ ಹಂಚಿಕೊಳ್ಳುವಂತಿಲ್ಲ. ಈ ನಿಟ್ಟಿನಲ್ಲಿ ಕಾರ್ಡ್‌ ವಿತರಣೆಗೆ ಬಳಸಲಾಗುತ್ತಿರುವ ಸಾಫ್ಟ್ವೇರ್‌ನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಸರ್ಕಾರಿ ಆಸ್ಪತ್ರೆಗಳು ದಿನದ 24 ಗಂಟೆ ಕಾರ್ಡ್‌ ವಿತರಿಸಬಹುದು. ಆದರೆ, ಬಿ1, ಕೆ1 ಸೇವಾಸಿಂಧು ಕೇಂದ್ರಗಳು ಬೆಳಗ್ಗೆ 8ರಿಂದ ಸಂಜೆ 6ರವರೆಗೆ ಮಾತ್ರ ಕಾರ್ಯ ನಿರ್ವಹಿಸಬೇಕಿದೆ.

‘ಸಾರ್ವತ್ರಿಕ ಯೋಜನೆಯನ್ನು ಯಶಸ್ವಿಗೊಳಿಸುವುದು ನಮ್ಮ ಗುರಿಯಾಗಿದ್ದು, ಕಾರ್ಡ್‌ ವಿತರಣೆಯಲ್ಲಿ ಅಕ್ರಮ ಎಸಗುವ ಅಥವಾ ಶಾಮೀಲಾಗಿರುವ ಮಧ್ಯವರ್ತಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಲು ಸೂಚಿಸಿದ್ದೇನೆ’ ಎಂದು ಇಲಾಖೆ ಆಯುಕ್ತ ಪಂಕಜ್‌ ಕುಮಾರ್‌ ಪಾಂಡೆ ತಿಳಿಸಿದ್ದಾರೆ. ಇವುಗಳನ್ನು ಮೀರಿ ಯಾವುದೇ ಮಧ್ಯವರ್ತಿಗಳು ಅಥವಾ ಅಕ್ರಮ ಕಂಡು ಬಂದರೆ 104 ಸಹಾಯವಾಣಿಗೆ ಕರೆ ಮಾಡಿ ತಿಳಿಸಬಹುದು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.