ಪಾಲಿಕೆಯಿಂದ ವಾಹನ ಬಾಡಿಗೆ ಬಾಕಿ; ಭರವಸೆಯ ಬೆನ್ನಲ್ಲೇ ಹೋರಾಟ ಅಂತ್ಯ
Team Udayavani, Jun 12, 2019, 9:21 AM IST
ಹುಬ್ಬಳ್ಳಿ: ಜಿಲ್ಲಾ ವಾಹನ ಚಾಲಕರು ಹಾಗೂ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ಪಾಲಿಕೆ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಹುಬ್ಬಳ್ಳಿ: ಮಹಾನಗರ ಪಾಲಿಕೆ ಸೇವೆಗೆ ನೀಡಲಾದ ವಾಹನಗಳ ಬಾಡಿಗೆ ಹಣ ಪಾವತಿ ಮಾಡದಿರುವುದನ್ನು ಖಂಡಿಸಿ ಜಿಲ್ಲಾ ವಾಹನ ಚಾಲಕರು ಹಾಗೂ ಮಾಲೀಕರ ಕ್ಷೇಮಾಭಿವೃದ್ಧಿ ಸಂಘದಿಂದ ವಾಹನ ಸೇವೆ ಸ್ಥಗಿತಗೊಳಿಸಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಅಧಿಕಾರಿಗಳ ಭರವಸೆ ಮೇಲೆ ಮಂಗಳವಾರ ಹಿಂಪಡೆಯಲಾಗಿದೆ.
ಕಳೆದ ಹಲವಾರು ವರ್ಷಗಳಿಂದ ಮಹಾನಗರ ಪಾಲಿಕೆಗೆ ಮಾಸಿಕ ಬಾಡಿಗೆ ಆಧಾರದ ಮೇಲೆ ವಾಹನಗಳನ್ನು ನೀಡಲಾಗಿದ್ದು, ಕಳೆದ ಮೂರ್ನಾಲ್ಕು ತಿಂಗಳಿಂದ ವಾಹನಗಳ ಬಾಡಿಗೆ ಹಣ ಸಂದಾಯ ಮಾಡಲಾಗಿಲ್ಲ. ಒಟ್ಟು 38 ವಾಹನಗಳು ಬಾಡಿಗೆ ಆಧಾರಿತ ಸೇವೆ ನೀಡುತ್ತಿದ್ದು, ಸುಮಾರು 30 ಲಕ್ಷ ರೂ. ಹಣ ಪಾವತಿಯಾಗಬೇಕಾಗಿತ್ತು. ಆದರೆ ಕಳೆದ ವಾರ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ್ದರೂ ಸ್ಪಂದನೆ ನೀಡಿರಲಿಲ್ಲ. ಆದ್ದರಿಂದ ಸೋಮವಾರದಿಂದ ವಾಹನ ಸಂಚಾರ ಸ್ಥಗಿತಗೊಳಿಸಿ ಹೋರಾಟ ಆರಂಭಿಸಲಾಗಿತ್ತು.
ಮಂಗಳವಾರ ಮಧ್ಯಾಹ್ನ ಪಾಲಿಕೆ ಉಪ ಆಯುಕ್ತ ಹಾಗೂ ಮುಖ್ಯ ಲೆಕ್ಕಾಧಿಕಾರಿಗಳು ಸಂಜೆಯೊಳಗೆ ಬಾಕಿ ಇರುವ ಹಣ ಸಂದಾಯ ಮಾಡಲಾಗುವುದು ಪ್ರತಿಭಟನೆ ಹಿಂಪಡೆಯಿರಿ ಎಂದು ಮೌಖೀಕವಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಹೋರಾಟ ಹಿಂಪಡೆಯಲಾಗಿದೆ. ಪ್ರೇಮನಾಥ ಚಿಕ್ಕತುಂಬಳ, ಸತೀಶ ಬಳ್ಳಾರಿ, ಬಸಪ್ಪ ದೊಡ್ಡಮನಿ, ಪರಶುರಾಮ ಸೋನಿಕರ, ಹನುಮಂತ, ಈರಪ್ಪ ಜೋಗಿ, ಪ್ರಕಾಶ ಅತ್ತಿಗೇರಿ, ಅಶೋಕ ಲಮಾಣಿ, ರವಿ ವಗ್ಗರ, ಶ್ರೀನಿವಾಸ ಹಿರೇಮನಿ ಮೊದಲಾದವರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್