ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆ
•ಶ್ರದ್ಧಾ-ಭಕ್ತಿಯಿಂದ ರಂಜಾನ್ ಆಚರಣೆ•ಧರ್ಮಗುರುಗಳಿಂದ ಬೋಧನೆ•ಬಡವರಿಗೆ ನಗದು-ದವಸ-ವಸ್ತ್ರ ವಿತರಣೆ
Team Udayavani, Jun 6, 2019, 9:17 AM IST
ಧಾರವಾಡ: ನಗರದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಧಾರವಾಡ: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ನಗರದ ಗುಲಗಂಜಿಕೊಪ್ಪದ ಈದ್ಗಾ ಮೈದಾನದಲ್ಲಿ ಬುಧವಾರ ಸಾವಿರಾರು ಮುಸ್ಲಿಂ ಬಾಂಧವರು ಶ್ರದ್ಧಾ-ಭಕ್ತಿಯಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಬೆಳಗ್ಗೆ ಈದ್ಗಾ ಮೈದಾನದಲ್ಲಿ ಧರ್ಮಗುರುಗಳು ಪ್ರಾರ್ಥನೆ ಬೋಧಿಸಿದರು. ಪ್ರಾರ್ಥನೆಯಲ್ಲಿ ಪಾಲ್ಗೊಂಡ ಜನರು ಅಲ್ಲಾಹನನ್ನು ಸ್ಮರಿಸಿದರು. ಇದೇ ವೇಳೆ ಮಳೆಗಾಗಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ ರಂಜಾನ್ ಶುಭಾಶಯ ವಿನಿಮಯ ಮಾಡಿಕೊಂಡರು. ಅಪಾರ ಸಂಖ್ಯೆ ಹಿರಿಯರು ಮತ್ತು ನೂರಾರು ಮಕ್ಕಳು ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಗಮನ ಸೆಳೆದರು. ಪ್ರಾರ್ಥನೆ ಮುಗಿದ ಬಳಿಕ ಇದೇ ವೇಳೆ ಬಡವರು, ನಿರ್ಗತಿಕರಿಗೆ ನಗದು, ದವಸ, ವಸ್ತ್ರ ಮತ್ತಿತರ ಸಾಮಗ್ರಿಗಳನ್ನು ನೀಡಿ ರಂಜಾನ್ ಮಹತ್ವ ಸಾರಿದರು.
ಅಂಜುಮನ್ ಇಸ್ಲಾಂ ಸಂಸ್ಥೆಯ ಆಡಳಿತ ಅಧಿಕಾರಿ ಎಸ್. ನಿಸಾರ ಅಹಮ್ಮದ ಮಾತನಾಡಿ, ಪವಿತ್ರ ರಂಜಾನ್ ತಿಂಗಳಲ್ಲಿ ಒಟ್ಟು 30 ಉಪವಾಸಗಳು ಮಾಡಲಾಗುತ್ತಿದ್ದು, ಮಕ್ಕಳಿಗೆ, ರೋಗಿಗಳಿಗೆ, ಗರ್ಭಿಣಿಯರಿಗೆ ಉಪವಾಸದಲ್ಲಿ ವಿನಾಯತಿ ಇದೆ. ಇನ್ನೂಳಿದವರಿಗೆ ಉಪವಾಸಗಳನ್ನು ಮಾಡಬೇಕೆಂದು ಪವಿತ್ರ ಧರ್ಮ ಗ್ರಂಥ ಖುರಾನನಲ್ಲಿ ಹೇಳಲಾಗಿದೆ. ಉಪವಾಸದಿಂದ ಬೇರೆಯವರ ಕಷ್ಟ ಕಾರ್ಪಣ್ಯಗಳು ಅರಿವು ಆಗುತ್ತದೆ. ಆರ್ಥಿಕ ಸದೃಢತೆ ಹೊಂದಿದವರು ತಮ್ಮ ಆದಾಯದಲ್ಲಿ ಶೇ.2.5 ಹಣವನ್ನು ಬಡವರಿಗಾಗಿ ಮೀಸಲಿಡ ಬೇಕಾಗುತ್ತದೆ ಎಂದರು.
ಈದ್ಗಾ ಮೈದಾನದ ಒಳಗಡೆ ರಸ್ತೆ ನಿರ್ಮಿಸಲು ಗ್ರಾಮೀಣ ಶಾಸಕರ ಅನುದಾನದಡಿ 20 ಲಕ್ಷ ರೂ.ಗಳು ಸರ್ಕಾರದಿಂದ ಮಂಜೂರಾಗಿದ್ದು, ಕಾರ್ಯ ಪೂರ್ಣಗೊಂಡಿದೆ. ಅಂಜುಮನ್ ಪದವಿ ಪೂರ್ವ ವಿದ್ಯಾಲಯಕ್ಕೆ 4 ಲಕ್ಷ ರೂ.ಗಳು ಅನುದಾನ ಬಂದಿದ್ದು, ಈ ಹಣದಿಂದ ಕಂಪ್ಯೂಟರ್ಗಳನ್ನು ಖರೀದಿಸಿ ಕಂಪ್ಯೂಟರ್ ಸಾಯನ್ಸ್ ವಿಭಾಗ ಪ್ರಾರಂಭಿಸಲಾಗಿದೆ ಎಂದರು.
ಬ್ಲಾಕ್ ಸಿ ವಾಣಿಜ್ಯ ಸಂರ್ಕೀಣ ಕಟ್ಟಡ ನಿರ್ಮಿಸಲು ವರ್ಕ್ಸ್ ಬೋರ್ಡ್ಗೆ 8 ಕೋಟಿ ಅನುದಾನ ನೀಡಲು ಮನವಿ ಮಾಡಿದ್ದು, ಕೆಲವೇ ದಿನಗಳಲ್ಲಿ ಮಂಜೂರ ಆಗುವ ಸಾಧ್ಯತೆ ಇದೆ. ಎಲ್.ಕೆ.ಜಿ ಯಿಂದ ಸ್ನಾತಕೋತ್ತರ ತರಗತಿಗಳು ಒಳಗೊಂಡ ಸಂಸ್ಥೆ ಇದಾಗಿದೆ. ಪ್ರತಿ ವರ್ಷದಂತೆ ಉರ್ದು ಪ್ರಾರ್ಥಮಿಕ ಶಾಲೆಯ ವಿಧ್ಯಾರ್ಥಿಗಳಿಗೆ ಉಚಿತವಾಗಿ ಪುಸ್ತಕ, ಸಮವಸ್ತ್ರ ನೀಡಲಾಗಿದೆ ಎಂದರು.
ಮಳೆಗಾಗಿ ಪ್ರಾರ್ಥನೆ: ಮಳೆಯ ಸಲುವಾಗಿ ಲಕಮಾಪೂರ ಹಾಗೂ ದಾಸನಕೊಪ್ಪ ಗ್ರಾಮದ ಮುಸ್ಲಿಂ ಬಾಂಧವರು ಈದ್ ನಮಾಜ್ನಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!