ಬೆಳಗ್ಗೆ ಬಂಡೆದ್ದ ದೀಪಕ ಚಿಂಚೋರೆ ಸಂಜೆಗೆ ತಣ್ಣಗಾದರು!


Team Udayavani, Apr 18, 2018, 12:47 PM IST

h3.jpg

ಧಾರವಾಡ: ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ನನಗೆ ಕಾಂಗ್ರೆಸ್‌ ಟಿಕೆಟ್‌ ತಪ್ಪಲು ಜಿಲ್ಲಾ ಉಸ್ತುವಾರಿ ಸಚಿವ ವಿನಯ್‌ ಕುಲಕರ್ಣಿ ಅವರೇ  ಕಾರಣರಾಗಿದ್ದು, ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸುವುದಾಗಿ ಕಾಂಗ್ರೆಸ್‌ ಮುಖಂಡ ದೀಪಕ್‌ ಚಿಂಚೋರೆ ಹೇಳಿದರು. 

ಮಂಗಳವಾರ  ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ 36 ವರ್ಷಗಳಿಂದ ನಾನು ಕಾಂಗ್ರೆಸ್‌ ಗೆ ನಿಷ್ಠಾವಂತ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತ ಬಂದಿದ್ದೇನೆ.  ಆದರೂ ನನಗೆ ಟಿಕೆಟ್‌ ನೀಡಲಿಲ್ಲ. ಆರಂಭದಲ್ಲಿ ನನಗೆ ಹುಡಾ ಅಧ್ಯಕ್ಷ ಸ್ಥಾನ ಕೊಡಬೇಕು ಎಂದಾಗಿತ್ತು.

ಅದೂ ಸಿಕ್ಕಲಿಲ್ಲ, ನಂತರ  ಬಾಲವಿಕಾಸ ಅಕಾಡೆಮಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದಾಗಿತ್ತು ಅದನ್ನೂ ತಪ್ಪಿಸಲಾಯಿತು. ಕೊನೆಗೆ ಹು-ಧಾ ಪಶ್ಚಿಮ ಕ್ಷೇತ್ರದ ಟಿಕೆಟ್‌ ಕೂಡ  ತಪ್ಪಿ ಹೋಯಿತು ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹು-ಧಾ ಪಶ್ಚಿಮ ಕ್ಷೇತ್ರಕ್ಕೆ ನಾನು ಮತ್ತು ಇಸ್ಮಾಯಿಲ್‌ ತಮಟಗಾರ ಇಬ್ಬರೂ  ಆಕಾಂಕ್ಷಿಗಳಾಗಿದ್ದೆವು.

ಇಬ್ಬರ ಹೆಸರನ್ನು ಮುಖ್ಯಮಂತ್ರಿಗಳು ಮುಂದಿಟ್ಟು ಅವರು ನಿರ್ಧಾರ ಕೈಗೊಳ್ಳಬೇಕಿತ್ತು. ಆದರೆ ಅಲ್ಲಿ ಪಟ್ಟಿಯಲ್ಲಿ ನನ್ನ ಹೆಸರೇ  ಹೋಗಿಲ್ಲ. ಅದನ್ನು ಜಿಲ್ಲಾ ಉಸ್ತುವಾರಿ ಸಚಿವರೇ ತಪ್ಪಿಸಿದ್ದು, ನನಗೆ ಈ ಬಗ್ಗೆ ತೀವ್ರ ನೋವುಂಟಾಗಿದೆ. ಇಸ್ಮಾಯಿಲ್‌ ತಮಟಗಾರ ಅವರು ಗೆಲ್ಲಬೇಕು. 

ಹೀಗಾಗಿ ನಾನು ಅವರಿಗೆ ಬೆಂಬಲ ನೀಡುತ್ತೇನೆ. ಆದರೆ ಗ್ರಾಮೀಣ ಕ್ಷೇತ್ರದಲ್ಲಿ ಸಚಿವ ವಿನಯ್‌ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ  ಕಣಕ್ಕಿಳಿಯುತ್ತೇನೆ. ನನ್ನ ಶಕ್ತಿ ಏನೆಂದು ಕಾಂಗ್ರೆಸ್‌ ಮುಖಂಡರಿಗೆ ತೋರಿಸುತ್ತೇನೆ ಎಂದು ಚಿಂಚೋರೆ ಹೇಳಿದರು.

ಎರಡು ದಿನದಲ್ಲಿ ಬಂಡಾಯ ಶಮನ: ವಿನಯ್
ಧಾರವಾಡ:
ಜಿಲ್ಲಾ ಕಾಂಗ್ರೆಸ್‌ನಲ್ಲಿ ಭಿನ್ನಮತ ಇಲ್ಲ. ನಮ್ಮ ಪಕ್ಷದ ಯಾರೂ ಕೂಡ ಬಿಜೆಪಿಯನ್ನು ಸೇರುವುದು ಅಸಾಧ್ಯವಾಗಿದ್ದು, ಕಾಂಗ್ರೆಸ್‌ನ ಬಂಡಾಯ ಎರಡು ದಿನದಲ್ಲಿ ಶಮನಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ ಹೇಳಿದರು.

ಮಂಗಳವಾರ ರಾತ್ರಿ ದೀಪಕ್‌  ಚಿಂಚೋರೆ ನಿವಾಸಕ್ಕೆ ಭೇಟಿ ಕೊಟ್ಟು ಅವರೊಂದಿಗೆ ಮಾತುಕತೆ ನಡೆಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೀಪಕ್‌  ಚಿಂಚೋರೆಯವರು ಪಕ್ಷದಲ್ಲಿ ನನಗಿಂತಲೂ ಹಿರಿಯರಾಗಿದ್ದಾರೆ. ಸಹಜವಾಗಿ ಅವರಿಗೆ ಟಿಕೆಟ್‌ ತಪ್ಪಿರುವುದು ನೋವು ತಂದಿದೆ. ಆ ಕುರಿತು ಅವರು  ನಮ್ಮೊಂದಿಗೆ ಮಾತನಾಡಿದ್ದಾರೆ.

ನಾನು ಅವರ ಟಿಕೆಟ್‌ ತಪ್ಪುವುದಕ್ಕೆ ಕಾರಣನಲ್ಲ. ಎಲ್ಲ ಕ್ಷೇತ್ರಗಳಲ್ಲಿ 8, 10, 12ರಷ್ಟು ಜನ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಗಳಿದ್ದು, ಪಕ್ಷ ಒಬ್ಬರನ್ನು ಮಾತ್ರ ಅಭ್ಯರ್ಥಿಯನ್ನಾಗಿಸಬೇಕು. ಹೀಗಾಗಿ ಎಲ್ಲರಿಗೂ ಟಿಕೆಟ್‌ ಸಿಗುವುದು ಅಸಾಧ್ಯ. ದೀಪಕ್‌ ಚಿಂಚೋರೆ  ಅವರಿಗೆ ಆಗಿರುವ ಅಸಮಾಧಾನ ಕುರಿತು ಹಿರಿಯ ಮುಖಂಡರ ಜೊತೆ ಚರ್ಚಿಸುತ್ತೇನೆ ಎಂದರು. 

Ad

ಟಾಪ್ ನ್ಯೂಸ್

ಮೊಂಟೆಪದವು ಮಹಿಳೆ ಅತ್ಯಾಚಾ*ರಗೈದು ಕೊ*ಲೆ ಪ್ರಕರಣ: ಬಿಹಾರ ಮೂಲದ ಆರೋಪಿ ಬಂಧನ

ಮೊಂಟೆಪದವು ಮಹಿಳೆ ಅತ್ಯಾಚಾ*ರಗೈದು ಕೊ*ಲೆ ಪ್ರಕರಣ: ಬಿಹಾರ ಮೂಲದ ಆರೋಪಿ ಬಂಧನ

Tesla-Maha-CM

ದೇಶದ ಮೊದಲ ʼಟೆಸ್ಲಾʼ ಕಾರು ಮಳಿಗೆ ಉದ್ಘಾಟಿಸಿದ ಸಿಎಂ ದೇವೇಂದ್ರ ಫಡ್ನವೀಸ್‌

Rehabilitation not required in all land acquisition cases: Supreme Court

Supreme Court: ಎಲ್ಲ ಭೂಸ್ವಾಧೀನ ಪ್ರಕರಣಗಳಲ್ಲಿ ಪುನರ್ವಸತಿ ಅಗತ್ಯವಿಲ್ಲ

Belthangady; ಪಿಲ್ಯ ಪರಿಸರದಲ್ಲಿ ನಾಯಿ ಮೇಲೆ ಚಿರತೆ ದಾಳಿ; ಗ್ರಾಮಸ್ಥರಲ್ಲಿ ಆತಂಕ

Belthangady; ಪಿಲ್ಯ ಪರಿಸರದಲ್ಲಿ ನಾಯಿ ಮೇಲೆ ಚಿರತೆ ದಾಳಿ; ಗ್ರಾಮಸ್ಥರಲ್ಲಿ ಆತಂಕ

Gunjan Arya assumed office as the new Superintendent of Police of Dharwad District

Dharwad ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

Aranthodu; ಅರಣ್ಯ ಇಲಾಖೆ ಕಾರ್ಯಾಚರಣೆ; ಪೆರಾಜೆ ಗಡಿದಾಟಿದ ಕಾಡಾನೆ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ

ಉಡುಪಿ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳಲ್ಲೂ ಡ್ರಗ್ಸ್‌ ತಡೆ ಸಮಿತಿ ರಚನೆ: ಎಸ್‌ಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gunjan Arya assumed office as the new Superintendent of Police of Dharwad District

Dharwad ಜಿಲ್ಲಾ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಗುಂಜನ್ ಆರ್ಯ ಅಧಿಕಾರ ಸ್ವೀಕಾರ

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

BJP ಆಡಳಿತವಿರುವ ರಾಜ್ಯಗಳಲ್ಲಿ‌ ಏನೆಲ್ಲ ನಡೆಯುತ್ತಿದೆ ಚರ್ಚೆ ಗೆ ಬರಲಿ‌: ಸಂತೋಷ ಲಾಡ್ ಸವಾಲು

Hubballi: ವಿಶ್ವದಲ್ಲೇ ಭಾರತ 4ನೇ ಅತಿ ಬಲಾಢ್ಯ ಆರ್ಥಿಕ‌ ರಾಷ್ಟ್ರವಾಗಿ ಹೊರಹೊಮ್ಮಿದೆ: ಜೋಶಿ

Hubballi: ವಿಶ್ವದಲ್ಲೇ ಭಾರತ 4ನೇ ಅತಿ ಬಲಾಢ್ಯ ಆರ್ಥಿಕ‌ ರಾಷ್ಟ್ರವಾಗಿ ಹೊರಹೊಮ್ಮಿದೆ: ಜೋಶಿ

ಸಿಎಂ ಬದಲಾವಣೆ ವಿಚಾರದಲ್ಲಿ ನಾವು-ನೀವು ಮಾತನಾಡುವುದು ಅಪ್ರಸ್ತುತ: ಪ್ರಿಯಾಂಕ್ ಖರ್ಗೆ

ಸಿಎಂ ಬದಲಾವಣೆ ವಿಚಾರದಲ್ಲಿ ನಾವು-ನೀವು ಮಾತನಾಡುವುದು ಅಪ್ರಸ್ತುತ: ಪ್ರಿಯಾಂಕ್ ಖರ್ಗೆ

Hubli: 20 accused arrested in Aralikkatti Oni fight case

Hubli: ಅರಳಿಕಟ್ಟಿ ಓಣಿ ಹೊಡೆದಾಟ ಪ್ರಕರಣದಲ್ಲಿ 20 ಆರೋಪಿಗಳ ಬಂಧನ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

ಮೊಂಟೆಪದವು ಮಹಿಳೆ ಅತ್ಯಾಚಾ*ರಗೈದು ಕೊ*ಲೆ ಪ್ರಕರಣ: ಬಿಹಾರ ಮೂಲದ ಆರೋಪಿ ಬಂಧನ

ಮೊಂಟೆಪದವು ಮಹಿಳೆ ಅತ್ಯಾಚಾ*ರಗೈದು ಕೊ*ಲೆ ಪ್ರಕರಣ: ಬಿಹಾರ ಮೂಲದ ಆರೋಪಿ ಬಂಧನ

Tesla-Maha-CM

ದೇಶದ ಮೊದಲ ʼಟೆಸ್ಲಾʼ ಕಾರು ಮಳಿಗೆ ಉದ್ಘಾಟಿಸಿದ ಸಿಎಂ ದೇವೇಂದ್ರ ಫಡ್ನವೀಸ್‌

Fraud Case ಬ್ರಹ್ಮಾವರ: ಖಾತೆಯ ಹಣ ವರ್ಗಾಯಿಸಿ ವಂಚನೆ

Fraud Case ಬ್ರಹ್ಮಾವರ: ಖಾತೆಯ ಹಣ ವರ್ಗಾಯಿಸಿ ವಂಚನೆ

Rehabilitation not required in all land acquisition cases: Supreme Court

Supreme Court: ಎಲ್ಲ ಭೂಸ್ವಾಧೀನ ಪ್ರಕರಣಗಳಲ್ಲಿ ಪುನರ್ವಸತಿ ಅಗತ್ಯವಿಲ್ಲ

14-lotus

Environment: ಪ್ರಕೃತಿಯ ಪೋಷಣೆಗೆ ನಾವೆಲ್ಲರೂ ಪಾಲುದಾರರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.