ಪಕ್ಷ ಸಂಘಟನೆಗೆ ಸಕ್ರಿಯರಾಗಿ: ನಾಡಗೌಡ


Team Udayavani, Jan 16, 2017, 12:50 PM IST

hub2.jpg

ಹುಬ್ಬಳ್ಳಿ: ರಾಜ್ಯ ರಾಜಕೀಯದಲ್ಲಿ ಬದಲಾವಣೆ ಖಂಡಿತವಾಗಿದ್ದು, ಮುಂಬರುವ ದಿನಗಳಲ್ಲಿ ಸಂಯುಕ್ತ ಜನತಾದಳ(ಜೆಡಿಯು)ಗೆ ಉತ್ತಮ ಅವಕಾಶವಿದೆ. ಹೊರಗಿನಿಂದ ಬರುವ ನಾಯಕರಿಗಾಗಿ ಕಾಯ್ದು ಕುಳಿತುಕೊಳ್ಳದೆ, ಪಕ್ಷದ ಮುಖಂಡರು, ಕಾರ್ಯಕರ್ತರು ಪಕ್ಷ ಸಂಘಟನೆಗೆ ಸಕ್ರಿಯವಾದರೆ ನಿರ್ಣಾಯಕ ಸ್ಥಿತಿಗೆ ಬಂದೇ ಬರುತ್ತೇವೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಡಾ| ಎಂ.ಪಿ.ನಾಡಗೌಡ ಹೇಳಿದರು. 

ಇಲ್ಲಿನ ಜೆಡಿಯು ಕಚೇರಿಯಲ್ಲಿ ರವಿವಾರ ಆಯೋಜಿಸಿದ್ದ ಪಕ್ಷದ ಚೈತನ್ಯ ಸಭೆ ಹಾಗೂ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ರಾಜ್ಯದಲ್ಲಿ ಕೆಟ್ಟ ಸರಕಾರ ಇದೆ ಎಂದರೆ, ಅನ್ಯಾಯದ ಬಗ್ಗೆ ಮೌನ ವಹಿಸುವ ಮೂಲಕ ವಿಪಕ್ಷಗಳು ಸರಕಾರಕ್ಕಿಂತ ಹೆಚ್ಚು ಕೆಟ್ಟ ಸ್ಥಿತಿಯಲ್ಲಿವೆ ಎಂದರು.

ಯಡಿಯೂರಪ್ಪಗೆ ಸವಾಲು: ಮುಖ್ಯಮಂತ್ರಿಯಾದರೆ 24 ಗಂಟೆಯಲ್ಲಿ ಮಹದಾಯಿ ಸಮಸ್ಯೆ ಇತ್ಯರ್ಥ ಪಡಿಸುವುದಾಗಿ ಹೇಳಿರುವ ಬಿಜೆಪಿ  ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಸಮಸ್ಯೆ ಇತ್ಯರ್ಥಕ್ಕೆ ಮುಂದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ವಿಶೇಷ ಮನವಿ ಮಾಡಿ, ಒಂದು ದಿನದ ಮಟ್ಟಿಗೆ ಯಡಿಯೂರಪ್ಪ ಅವರಿಗೆ ಮುಖ್ಯಮಂತ್ರಿ ಪಟ್ಟ ಕೊಡಿಸಲಾಗುವುದು. ಮಹದಾಯಿ ಇತ್ಯರ್ಥ ಪಡಿಸಿ ತೋರಿಸಲಿ ಎಂದು ಸವಾಲು ಹಾಕಿದರು.  

ಸಾಮೂಹಿಕ ನಾಯಕತ್ವ ಪರಿಕಲ್ಪನೆ: ಜೆಡಿಯು ನಾಯಕ ಮಹಿಮಾ ಪಟೇಲ್‌ ಮಾತನಾಡಿ, ಜನತಾ ಪರಿವಾರ ಮೊದಲಿನಿಂದಲೂ ಸಾಮೂಹಿಕ  ನಾಯಕತ್ವದ ಪರಿಕಲ್ಪನೆಯಲ್ಲಿ ಬಂದಿದೆ. ಪ್ರಸ್ತುತ ಸ್ಥಿತಿಯಲ್ಲಿ ನಾವು ಅಧಿಕಾರಕ್ಕೆ ಬರುತ್ತೇವೆ ಎಂದರೆ ಹಾಸ್ಯ-ಅಪಹಾಸ್ಯ ಮಾಡುವವರೇ ಅಧಿಕ. 1983ರಲ್ಲಿ ಇದೇ ಸ್ಥಿತಿ ಇತ್ತು, ಜನತಾ ಪಕ್ಷ ಅಧಿಕಾರಕ್ಕೆ ಬರುವ ನಿರೀಕ್ಷೆ ಯಾರಿಗೂ ಇರಲಿಲ್ಲ.

ಅಂದು ಮೊದಲ ಬಾರಿಗೆ ಅಧಿಕಾರ ಹಿಡಿದಿತ್ತು. ಇಂದು ಸಹ ಅದೇ ಸ್ಥಿತಿ ಇದೆ. ವಿವಿಧ ಪಕ್ಷಗಳಲ್ಲಿನ ಜನತಾ ಪರಿವಾರದ ಅನೇಕರು ಮತ್ತೆ ಜೆಡಿಯು ಕಡೆ ನೋಡುತ್ತಿದ್ದಾರೆ ಎಂದರು. ಜೆಡಿಯು ಒಂದು ರೀತಿ ವೀಣೆಯ  ಸುಮಧುರ ನಾದವಿದ್ದಂತೆ. ಡೊಳ್ಳು ಬಡಿತದ ಅಬ್ಬರದಲ್ಲಿ ಅದು ಕೇಳಿಸದು. ಅಬ್ಬರ ನಿಂತ ಕೂಡಲೇ ಸುಮಧುರ ಧ್ವನಿ ಹಲವರನ್ನು ಆಕರ್ಷಿಸುತ್ತದೆ.

ಪಕ್ಷ ಸಂಘಟನೆ ದೃಷ್ಟಿಯಿಂದ ಮುಂದಿನ ತಿಂಗಳು ಕೋಲಾರದಲ್ಲಿ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ ಎಂದರು. ರೈತ ಮುಖಂಡ ಎಂ.ಗೋಪಾಲ ಮಾತನಾಡಿ, ಜನರ ಬಗೆಗಿನ ಪ್ರೀತಿ ಹೃದಯದಿಂದ ಬರಬೇಕೆ ವಿನಃ ತುಟಿಯಿಂದ ಅಲ್ಲ. ರಾಜಕೀಯ ಪಕ್ಷಗಳು ಜನರ ಸಮಸ್ಯೆ ಜೀವಂತವಾಗಿರಿಸಿ ಪರಿಹಾರದ ನಾಟಕವಾಡುತ್ತಿವೆ ಎಂಬುದಕ್ಕೆ ಮಹದಾಯಿ ಜ್ವಲಂತ ಸಾಕ್ಷಿ.

ಪ್ರಧಾನಿ ಮನಸ್ಸು ಮಾಡಿದರೆ ಒಂದು ತಾಸಿನಲ್ಲಿ ಇತ್ಯರ್ಥವಾಗಲಿದೆ ಎಂದರು. ಮಾಜಿ ಶಾಸಕ ಧರ್ಮಪ್ಪ ಮಾತನಾಡಿ, ಭ್ರಷ್ಟಾಚಾರ-ಕಪ್ಪು ಹಣ ತಡೆ ನೆಪದಲ್ಲಿ ಜಾರಿಗೊಂಡ ನೋಟುಗಳ ಅಪನಗದೀಕರಣ ಹಲವು ಸಮಸ್ಯೆ ಸೃಷ್ಟಿಸಿದೆ. ಆದರೆ, ಸಾವಿರಾರು ಕೋಟಿ ಸಂಪತ್ತು ಹೊಂದಿದ ಒಬ್ಬರೇ ಒಬ್ಬ ರಾಜಕಾರಣಿ ಮನೆ ಮೇಲೆ ದಾಳಿ ನಡೆದಿಲ್ಲ.

ಭ್ರಷ್ಟಾಚಾರ ತಡೆಯ ಅಣಕು ಪ್ರದರ್ಶನವಷ್ಟೇ ಇದು ಎಂದು ವ್ಯಂಗ್ಯವಾಡಿದರು. ಪಕ್ಷದ ಮುಖಂಡರಾದ ಸಾವಿತ್ರಿ ಗುಂಡಿ, ಎಸ್‌.ಹೈಬತ್ತಿ, ಜಿ.ಕೆ.ಸಿ.ರೆಡ್ಡಿ ಇನ್ನಿತರರು ಮಾತನಾಡಿದರು. ಮುಖಂಡರಾದ ಶಶಿಕಾಂತ ತಾವರೆಗೆ, ಶ್ರೀಶೈಲಗೌಡ ಕಮತರ, ರತ್ನಾ ಗಂಗಣ್ಣವರ, ಜಿ.ಎಸ್‌. ತೋಬದ, ಉಸ್ಮಾನ್‌ ಶರೀಫ್, ಪದ್ಮಾ ಸೂರ್ಯವಂಶ, ಕೋರಿಶೆಟ್ಟರ, ಶೇಖಣ್ಣ ಹೊರಕೇರಿ ಇನ್ನಿತರರು ಇದ್ದರು.   

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.