ಸಂಘಟನೆಯಿಂದ ಸಮಸ್ಯೆ ಎದುರಿಸುವ ಶಕ್ತಿ

•ನಿಂತು ಹೋಗಿದ್ದ ರಂಗಭೂಮಿ ಕಲಾವಿದರ ಸಂಘಟನೆ ಪುನಾರಂಭ ಉತ್ತಮ ಕಾರ್ಯ: ಬಸವರಾಜ ಹೊರಟ್ಟಿ

Team Udayavani, Aug 5, 2019, 8:48 AM IST

huballi-tdy-4

ಹುಬ್ಬಳ್ಳಿ: ಇಲ್ಲಿನ ಕೆಬಿಆರ್‌ ಡ್ರಾಮಾ ಕಂಪನಿಯಲ್ಲಿ ನಡೆದ ಕಾರ್ಯಕ್ರಮವನ್ನು ಬಸವರಾಜ ಹೊರಟ್ಟಿ ಉದ್ಘಾಟಿಸಿದರು.

ಹುಬ್ಬಳ್ಳಿ: ಸಂಘಟನೆ ಇದ್ದರೆ ಶಕ್ತಿ, ಇಲ್ಲದಿದ್ದರೇ ಏನೂ ಇಲ್ಲ ಎನ್ನುವುದನ್ನು ನಾನು ಹತ್ತಿರದಿಂದ ಕಂಡಿದ್ದೇನೆ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಹೇಳಿದರು.

ಕೆಬಿಆರ್‌ ಡ್ರಾಮಾ ಕಂಪನಿಯಲ್ಲಿ ರವಿವಾರ ರಾಜ್ಯ ವೃತ್ತಿ ರಂಗಭೂಮಿ ಮಾಲೀಕರ ಸಂಘದ 2019-20ನೇ ಸಾಲಿನ ಸಾಂಸ್ಕೃತಿಕ ಕಾರ್ಯ ಚಟುವಟಿಕೆಗಳ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಒಂದು ಸಣ್ಣ ಕೆಲಸ ಮಾಡಬೇಕೆಂದರೂ ಇಂದು ಸಂಘಟನೆ ಅವಶ್ಯ. ಸಂಘಟನೆ ಒಂದಿದ್ದರೆ ಎಂತಹ ಸಮಸ್ಯೆಗಳು ಬಂದರೂ ಧೈರ್ಯದಿಂದ ಮುನ್ನಡೆಯಬಹುದು ಎಂದರು. ಭಿಕ್ಷುಕರ ಸಂಘಟನೆ, ಹಮಾಲಿ ಕಾರ್ಮಿಕರ ಸಂಘಟನೆ, ಚಮ್ಮಾರ ಸಂಘಟನೆ, ಐಎಎಸ್‌ ಅಧಿಕಾರಿಗಳ ಸಂಘಟನೆ, ವಕೀಲರ ಸಂಘಟನೆ, ಪೊಲೀಸ್‌ ಅಧಿಕಾರಿಗಳ ಸಂಘಟನೆ ಹೀಗೆ ಎಲ್ಲರ ಸಂಘಟನೆಗಳಿದೆ. ಅದರೊಂದಿಗೆ ಇದೀಗ ವೃತ್ತಿ ರಂಗಭೂಮಿ ಕಲಾವಿದರ ಸಂಘಟನೆಯೂ ಆರಂಭವಾಗಿರುವುದು ಶ್ಲಾಘನೀಯ ಎಂದರು.

2015ರಲ್ಲಿ ಆರಂಭಗೊಂಡಿರುವ ವೃತ್ತಿ ರಂಗಭೂಮಿ ಕಲಾವಿದರ ಸಂಘಟನೆ ಕೆಲವು ಅಡೆತಡೆಗಳಿಂದ ನಿಂತು ಹೋಗಿದ್ದು, ಇದೀಗ ಮತ್ತೆ ಆರಂಭಗೊಂಡಿರುವುದು ಉತ್ತಮ ಕಾರ್ಯ. ಇನ್ನು ಮುಂದೆ ಸಂಘಟನೆ ಎಂದಿಗೂ ನಿಲ್ಲದೇ ಸದಾ ಕಾರ್ಯ ಚಟುವಟಿಕೆಗಳಿಂದ ಕೂಡಿರಲಿ ಎಂದರು.

ಮಾಜಿ ಸಂಸದ ಪ್ರೊ| ಐ.ಜಿ. ಸನದಿ ಮಾತನಾಡಿ, ವೃತ್ತಿ ರಂಗಭೂಮಿ ಕಲಾವಿದರು ಒಗ್ಗಟ್ಟು ಪ್ರದರ್ಶಿಸುವ ಮೂಲಕ ನಾವೆಲ್ಲರೂ ಒಂದು ಎಂದು ತೋರಿಸಿಕೊಡಬೇಕು. ಬೇರೆ ಬೇರೆಯಾದರೆ ತುಳಿದು ಬಿಡುತ್ತಾರೆ. ಆದ್ದರಿಂದ ಕಲಾವಿದರು ಒಗ್ಗಟ್ಟು ಪ್ರದರ್ಶಿಸುವ ಮೂಲಕ ಸಂಘಟನೆ ಮುನ್ನಡೆಸಬೇಕೆಂದರು.

ರಂಗಭೂಮಿ ಕಟ್ಟಲು ಹುಬ್ಬಳ್ಳಿಗೆ ಬಡತನ ಬಂದಿದ್ದು, ಬಸವರಾಜ ಹೊರಟ್ಟಿ ಅವರು ನೇತೃತ್ವ ವಹಿಸಿಕೊಳ್ಳುವ ಮೂಲಕ ಹುಬ್ಬಳ್ಳಿಯಲ್ಲಿ ಸುಸಜ್ಜಿತ ರಂಗಭೂಮಿ ನಿರ್ಮಾಣಕ್ಕೆ ಮುಂದಾಗಬೇಕು ಎಂದು ಹೇಳಿದರು.

ಡಾ| ಗೋವಿಂದ ಮಣ್ಣೂರ ಮಾತನಾಡಿ, ನಾಟಕ ಪ್ರದರ್ಶನ, ಕಲಾವಿದರ ಜೀವನ, ಸಂಘಟನೆ ಮಾಡುವುದು ಕಷ್ಟದ ಕೆಲಸಗಳು. ಈ ಹಿಂದೆ ನಮ್ಮಲ್ಲಿ ರಂಗಭೂಮಿ ಕಲಾವಿದರು ಇಲ್ಲದೇ ಇರುವುದರಿಂದ ಮಹಾರಾಷ್ಟ್ರದ ನಾಟಕ ಕಂಪನಿಗಳು ಇಲ್ಲಿಗೆ ಆಗಮಿಸಿ ನಾಟಕ ಪ್ರದರ್ಶನ ನೀಡುತ್ತಿದ್ದವು. ನಮ್ಮಲ್ಲಿ ನಾಟಕ ಕಂಪನಿಗಳು ಆರಂಭವಾದ ನಂತರ ಅವುಗಳ ಪ್ರದರ್ಶನ ನಿಂತಿತು. ಆದರೆ ಇಂದು ನಮ್ಮಲ್ಲಿರುವ ನಾಟಕ ಕಂಪನಿಗಳ ಸ್ಥಿತಿ ಚಿಂತಾಜನಕವಾಗಿದ್ದು, ಅವುಗಳನ್ನು ಮೇಲೆತ್ತುವ ಕೆಲಸ ಮಾಡಬೇಕಿದೆ ಎಂದರು.

ವೃತ್ತಿ ರಂಗಭೂಮಿ ಕಲಾವಿದರ ಸಂಘದ ಫೈಯಾಜ್‌ ಕರ್ಜಗಿ, ಉಪಾಧ್ಯಕ್ಷ ಮಾಲತಿ ಸುಧೀರ ಇನ್ನಿತರರು ಮಾತನಾಡಿದರು. ವೃತ್ತಿ ರಂಗಭೂಮಿ ಕಲಾವಿದರ ಸಂಘದ ಅಧ್ಯಕ್ಷ ಚಿಂದೋಡಿ ಶ್ರೀಕಂಠೇಶ ಅಧ್ಯಕ್ಷತೆ ವಹಿಸಿದ್ದರು. ಮಂಟೇಶ ದಂಡೀನ, ಮಲ್ಲಿಕಾರ್ಜುನ ಮಡ್ಡೆ, ಪ್ರವೀಣಕುಮಾರ, ನಾಗರತ್ನಮ್ಮಾ ಚಿಕ್ಕಮಠ ಮೊದಲಾದವರು ಇದ್ದರು. ರಾಜಣ್ಣ ಜೇವರ್ಗಿ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಚಿಂದೋಡಿ ಶಂಭುಲಿಂಗಪ್ಪ ನಿರೂಪಿಸಿದರು.

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.