ಕೃಷಿ ವಿವಿಯಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ


Team Udayavani, Apr 25, 2019, 11:34 AM IST

hub-1

ಧಾರವಾಡ : ಧಾರವಾಡ ಲೋಕಸಭಾ ಕ್ಷೇತ್ರದ ಎಲ್ಲಾ 1872 ಮತಗಟ್ಟೆಗಳ ಮತಯಂತ್ರಗಳು ಬುಧವಾರ ಬೆಳಗಿನ ಜಾವದವರೆಗೂ ಕೃಷಿ ವಿವಿಯ ಮತ ಎಣಿಕೆ ಕೇಂದ್ರಕ್ಕೆ ತಲುಪಿದವು.

ಬಳಿಕ ಮಧ್ಯಾಹ್ನದವರೆಗೂ ಅವುಗಳನ್ನು ಭದ್ರತಾ ಕೊಠಡಿಯಲ್ಲಿರಿಸಿ ಬೀಗಮುದ್ರೆ ಹಾಕುವ ಕಾರ್ಯ ಕೇಂದ್ರ ಚುನಾವಣಾ ಆಯೋಗದ ವೀಕ್ಷಕ ಭಾನುಪ್ರಕಾಶ ಏಟೂರು ಹಾಗೂ ಅಭ್ಯರ್ಥಿಗಳು ಮತ್ತು ಅವರ ಏಜೆಂಟರ್‌ಗಳ ಸಮ್ಮುಖದಲ್ಲಿ ಜರುಗಿತು. ಲೋಕಸಭಾ ಕ್ಷೇತ್ರವ್ಯಾಪ್ತಿ ಎಂಟೂ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಪ್ರತ್ಯೇಕವಾಗಿ ಭದ್ರತಾ ಕೊಠಡಿಯಲ್ಲಿರಿಸಲಾಗಿದೆ. ಈ ಕೊಠಡಿಗಳ ಪಕ್ಕದಲ್ಲಿಯೇ

ಆಯಾ ಕ್ಷೇತ್ರಗಳ ಮತ ಎಣಿಕೆ ಕೊಠಡಿಗಳನ್ನು ಗುರುತಿಸಲಾಗಿದೆ. ಚುನಾವಣೆ ಕಾರ್ಯಕ್ಕೆ ಒಟ್ಟು 2208 ಕಂಟ್ರೋಲ್ ಯೂನಿಟ್‌ಗಳು, 2820 ವಿವಿಪ್ಯಾಟ್‌ಗಳು, 4408 ಬ್ಯಾಲೆಟ್ ಯೂನಿಟ್‌ಗಳನ್ನು ಬಳಸಿಕೊಳ್ಳಲಾಗಿದ್ದು, ಮತದಾನ ನಂತರ ಕರ್ತವ್ಯನಿರತ ಸಿಬ್ಬಂದಿ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಾಪಿಸಲಾಗಿದ್ದ ಡಿಮಸ್ಟರಿಂಗ್‌ ಕೇಂದ್ರಗಳಿಗೆ ಮತಯಂತ್ರಗಳನ್ನು ತಲುಪಿಸಿದರು. ಡಿಮಸ್ಟರಿಂಗ್‌ ಕೇಂದ್ರಗಳಿಂದ ಕೃಷಿ ವಿವಿಯ ಮತಎಣಿಕಾ ಕೇಂದ್ರಕ್ಕೆ ಸೂಕ್ತ ಭದ್ರತೆಯೊಂದಿಗೆ ಮತಯಂತ್ರಗಳನ್ನು ಕಳುಹಿಸಿ ಕೊಡಲಾಯಿತು. ಬುಧವಾರ ಬೆಳಗಿನ ಜಾವ 3:00 ಗಂಟೆಯಿಂದ 6:00 ಗಂಟೆಯವರೆಗೂ ಕೃಷಿ ವಿಶ್ವವಿದ್ಯಾಲಯಕ್ಕೆ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಬಂದ ಮತಯಂತ್ರಗಳನ್ನು ಸ್ವೀಕರಿಸುವ ಕಾರ್ಯ ನಡೆಯಿತು. ಮತಯಂತ್ರಗಳನ್ನು ಭದ್ರತಾ ಕೊಠಡಿಗಳಲ್ಲಿರಿಸಿ ಬೀಗಮುದ್ರೆ ಹಾಕಲಾಯಿತು. ಮೇ 23ರಂದು ಮತಎಣಿಕೆ ಕಾರ್ಯ ನಡೆಯಲಿದೆ. ಅಲ್ಲಿಯವರೆಗೂ ಭದ್ರತಾ ಕೊಠಡಿಗಳಿಗೆ ಬಿಗಿಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.

ಬಿಗಿಭದ್ರತೆ

ಕೃಷಿ ವಿವಿಯಲ್ಲಿ ಇರಿಸಲಾಗಿರುವ ಮತಯಂತ್ರಗಳಿಗೆ ವಿಧಾನಸಭಾ ಕ್ಷೇತ್ರವಾರು ಪ್ರತ್ಯೇಕ ಭದ್ರತಾ ಕೊಠಡಿಗಳನ್ನು ಸ್ಥಾಪಿಸಲಾಗಿದೆ. ಬರುವ ಮೇ 23ರವರೆಗೆ ಇವುಗಳ ಪಹರೆಗೆ ಹಿರಿಯ ಅಧಿಕಾರಿಗಳು, ಪೊಲೀಸ್‌, ಅರೆಸೇನಾಪಡೆ ಸಿಬ್ಬಂದಿ ನಿಯೋಜಿಸಲಾಗಿದೆ. ಪ್ರತಿ ದಿನ ಮೂರು ಸರದಿಗಳಲ್ಲಿ ಇವರು ಕಾರ್ಯ ನಿರ್ವಹಿಸಲಿದ್ದಾರೆ. ಅಭ್ಯರ್ಥಿಗಳು-ಏಜೆಂಟರು ಕೂಡಾ ಮತ ಎಣಿಕೆ ಕೇಂದ್ರಕ್ಕೆ ನಿರಂತರ ಭೇಟಿ ನೀಡಿ ಭದ್ರತಾ ವ್ಯವಸ್ಥೆ ವೀಕ್ಷಿಸಬಹುದು. ಭದ್ರತಾ ಕಾರ್ಯ ಸಂಪೂರ್ಣ ಪಾರದರ್ಶಕವಾಗಿ ನಡೆಯಲಿದೆ ಎಂದು ಪೊಲೀಸ್‌ ಆಯುಕ್ತ ಎಂ.ಎನ್‌. ನಾಗರಾಜ ತಿಳಿಸಿದರು.

ಟಾಪ್ ನ್ಯೂಸ್

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-wqweqeqweqweqeeqeqwe

ILO ವರದಿ; ಭಾರತದಲ್ಲಿ ನಿರುದ್ಯೋಗ ಉಲ್ಬಣ

Anant KUmar Hegde

Uttara Kannada BJP; ಅನಂತ್‌ ಕುಮಾರ ಹೆಗಡೆ ತಟಸ್ಥ?: ಪ್ರಚಾರದಿಂದಲೂ ದೂರ

1-wqeweeqwqewq

MGNREGA; ಉದ್ಯೋಗ ಖಾತ್ರಿ ಯೋಜನೆ: ಕಾರ್ಮಿಕರ ವೇತನ ಹೆಚ್ಚಳ

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

rape

Sullia;ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ: ರಾಜಸ್ಥಾನಿ ಮಹಿಳೆ !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Sullia: ಕೂಜಿಮಲೆ ಪ್ರದೇಶದಲ್ಲಿ ಕಾಣಿಸಿಕೊಂಡಾಕೆ ನಕ್ಸಲ್‌ ಅಲ್ಲ

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

Lok Sabha polls: ಇಂದು ಸುಮಲತಾ ಬೆಂಬಲಿಗರ ಸಭೆ 

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.