ಕೃಷಿ ವಿವಿಯಲ್ಲಿ ಅಭ್ಯರ್ಥಿಗಳ ಭವಿಷ್ಯ ಭದ್ರ
Team Udayavani, Apr 25, 2019, 11:34 AM IST
ಧಾರವಾಡ : ಧಾರವಾಡ ಲೋಕಸಭಾ ಕ್ಷೇತ್ರದ ಎಲ್ಲಾ 1872 ಮತಗಟ್ಟೆಗಳ ಮತಯಂತ್ರಗಳು ಬುಧವಾರ ಬೆಳಗಿನ ಜಾವದವರೆಗೂ ಕೃಷಿ ವಿವಿಯ ಮತ ಎಣಿಕೆ ಕೇಂದ್ರಕ್ಕೆ ತಲುಪಿದವು.
ಬಳಿಕ ಮಧ್ಯಾಹ್ನದವರೆಗೂ ಅವುಗಳನ್ನು ಭದ್ರತಾ ಕೊಠಡಿಯಲ್ಲಿರಿಸಿ ಬೀಗಮುದ್ರೆ ಹಾಕುವ ಕಾರ್ಯ ಕೇಂದ್ರ ಚುನಾವಣಾ ಆಯೋಗದ ವೀಕ್ಷಕ ಭಾನುಪ್ರಕಾಶ ಏಟೂರು ಹಾಗೂ ಅಭ್ಯರ್ಥಿಗಳು ಮತ್ತು ಅವರ ಏಜೆಂಟರ್ಗಳ ಸಮ್ಮುಖದಲ್ಲಿ ಜರುಗಿತು. ಲೋಕಸಭಾ ಕ್ಷೇತ್ರವ್ಯಾಪ್ತಿ ಎಂಟೂ ವಿಧಾನಸಭಾ ಕ್ಷೇತ್ರಗಳ ಮತಯಂತ್ರಗಳನ್ನು ಪ್ರತ್ಯೇಕವಾಗಿ ಭದ್ರತಾ ಕೊಠಡಿಯಲ್ಲಿರಿಸಲಾಗಿದೆ. ಈ ಕೊಠಡಿಗಳ ಪಕ್ಕದಲ್ಲಿಯೇ
ಆಯಾ ಕ್ಷೇತ್ರಗಳ ಮತ ಎಣಿಕೆ ಕೊಠಡಿಗಳನ್ನು ಗುರುತಿಸಲಾಗಿದೆ. ಚುನಾವಣೆ ಕಾರ್ಯಕ್ಕೆ ಒಟ್ಟು 2208 ಕಂಟ್ರೋಲ್ ಯೂನಿಟ್ಗಳು, 2820 ವಿವಿಪ್ಯಾಟ್ಗಳು, 4408 ಬ್ಯಾಲೆಟ್ ಯೂನಿಟ್ಗಳನ್ನು ಬಳಸಿಕೊಳ್ಳಲಾಗಿದ್ದು, ಮತದಾನ ನಂತರ ಕರ್ತವ್ಯನಿರತ ಸಿಬ್ಬಂದಿ ಆಯಾ ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಥಾಪಿಸಲಾಗಿದ್ದ ಡಿಮಸ್ಟರಿಂಗ್ ಕೇಂದ್ರಗಳಿಗೆ ಮತಯಂತ್ರಗಳನ್ನು ತಲುಪಿಸಿದರು. ಡಿಮಸ್ಟರಿಂಗ್ ಕೇಂದ್ರಗಳಿಂದ ಕೃಷಿ ವಿವಿಯ ಮತಎಣಿಕಾ ಕೇಂದ್ರಕ್ಕೆ ಸೂಕ್ತ ಭದ್ರತೆಯೊಂದಿಗೆ ಮತಯಂತ್ರಗಳನ್ನು ಕಳುಹಿಸಿ ಕೊಡಲಾಯಿತು. ಬುಧವಾರ ಬೆಳಗಿನ ಜಾವ 3:00 ಗಂಟೆಯಿಂದ 6:00 ಗಂಟೆಯವರೆಗೂ ಕೃಷಿ ವಿಶ್ವವಿದ್ಯಾಲಯಕ್ಕೆ ವಿವಿಧ ವಿಧಾನಸಭಾ ಕ್ಷೇತ್ರಗಳಿಂದ ಬಂದ ಮತಯಂತ್ರಗಳನ್ನು ಸ್ವೀಕರಿಸುವ ಕಾರ್ಯ ನಡೆಯಿತು. ಮತಯಂತ್ರಗಳನ್ನು ಭದ್ರತಾ ಕೊಠಡಿಗಳಲ್ಲಿರಿಸಿ ಬೀಗಮುದ್ರೆ ಹಾಕಲಾಯಿತು. ಮೇ 23ರಂದು ಮತಎಣಿಕೆ ಕಾರ್ಯ ನಡೆಯಲಿದೆ. ಅಲ್ಲಿಯವರೆಗೂ ಭದ್ರತಾ ಕೊಠಡಿಗಳಿಗೆ ಬಿಗಿಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ