ಆರ್ಥಿಕತೆಯಲ್ಲಿ ಸಹಕಾರಿಗಳ ಪಾತ್ರ ಮಹತ್ವದ್ದು
Team Udayavani, Aug 28, 2019, 10:17 AM IST
ಹುಬ್ಬಳ್ಳಿ: ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆ ಸ್ಥಳೀಯ ಶಾಖೆಯಲ್ಲಿ ವಿಚಾರ ಸಂಕಿರಣ ನಡೆಯಿತು.
ಹುಬ್ಬಳ್ಳಿ: ದೇಶದಲ್ಲಿ ಸಹಕಾರ ಸಂಸ್ಥೆಗಳು ಹಾಗೂ ಸಹಕಾರಿ ಬ್ಯಾಂಕ್ಗಳು ಕಳೆದ ನೂರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದು ದೇಶದ ಆರ್ಥಿಕ ವ್ಯವಸ್ಥೆಯಲ್ಲಿ ಮಹತ್ತರ ಪಾತ್ರ ನಿರ್ವಹಿಸುತ್ತಿವೆ ಎಂದು ರಾಜ್ಯ ಸಹಕಾರಿ ಇಲಾಖೆ ಬೆಂಗಳೂರು ವಲಯದ ಸಹಕಾರಿ ಸಂಸ್ಥೆಗಳ ಆಡಿಟ್ ವಿಭಾಗದ ಜಂಟಿ ನಿರ್ದೇಶಕ ಮಂಜುನಾಥ ಹೆಗಡೆ ಹೇಳಿದರು.
ಭಾರತೀಯ ಲೆಕ್ಕಪರಿಶೋಧಕ ಸಂಸ್ಥೆ ಹುಬ್ಬಳ್ಳಿ ಶಾಖೆಯಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಮೂಲ ಧ್ಯೇಯ ಜನರ ಕಲ್ಯಾಣವಾಗಿದ್ದು, ಅದನ್ನು ಸಹಕಾರ ಸಂಸ್ಥೆಗಳು ಯಶಸ್ವಿಯಾಗಿ ಸಾಧಿಸಿವೆ. ಸಮಾನಾಂತರ ಆರ್ಥಿಕ ವ್ಯವಸ್ಥೆಯನ್ನು ಮುಂದುವರಿಸಿ ಸಮಾಜದ ಎಲ್ಲ ವರ್ಗದ ಜನರಿಗೆ ಸಾಲ ಸೌಲಭ್ಯಗಳನ್ನು ನೀಡಿ ಅವರ ಆರ್ಥಿಕ ಸ್ಥಿತಿ ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿವೆ ಎಂದರು.
ಕರ್ನಾಟಕ ರಾಜ್ಯದ ಸಹಕಾರ ಕಾಯ್ದೆಯಲ್ಲಿ 2012ರಲ್ಲಿ ಆಮೂಲಾಗ್ರ ತಿದ್ದುಪಡಿಗಳನ್ನು ಮಾಡಲಾಗಿದ್ದು, 97ನೇ ಸಂವಿಧಾನ ತಿದ್ದುಪಡಿಗೆ ಪೂರಕವಾಗುವಂತೆ ಸಹಕಾರ ಕ್ಷೇತ್ರದ ಸದಸ್ಯರಿಗೆ ಹೆಚ್ಚಿನ ಅಧಿಕಾರ ನೀಡಲಾಗಿದೆ. ಈ ಕ್ಷೇತ್ರದಲ್ಲಿ ಸರಕಾರದ ಹಸ್ತಕ್ಷೇಪವನ್ನು ಕಡಿಮೆ ಮಾಡಿ ಇದರಲ್ಲಿ ಕಾರ್ಯ ನಿರ್ವಹಿಸುತ್ತಿರುವ ವ್ಯಕ್ತಿಗಳಿಗೆ ಹಾಗೂ ಫಲಾನುಭವಿಗಳಿಗೆ ಮತ್ತು ನೌಕರರ ಕಲ್ಯಾಣಕ್ಕಾಗಿ ಅನೇಕ ಕಲಂಗಳನ್ನು ಕಾಯ್ದೆಯಲ್ಲಿ ಸೇರಿಸಲಾಗಿದೆ ಎಂದು ಹೇಳಿದರು.
ಲೆಕ್ಕಪರಿಶೋಧಕ ಪ್ರಕಾಶ ಹೆಗಡೆ, ಸಹಕಾರ ಸಂಸ್ಥೆಗಳ ಆದಾಯ ತೆರಿಗೆ ವಿಷಯಗಳ ಕುರಿತು ಉಪನ್ಯಾಸ ನೀಡಿದರು. ಭಾಷಣ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುವ ಶ್ರೀದೇವಿ ಭಟ್ ಅವರನ್ನು ಸನ್ಮಾನಿಸಲಾಯಿತು. ಲೆಕ್ಕಪರಿಶೋಧಕ ಸಂಸ್ಥೆಯ ಅಧ್ಯಕ್ಷ ಕೆ.ವಿ. ದೇಶಪಾಂಡೆ ಸ್ವಾಗತಿಸಿದರು. ಸಂಜೀವಕುಮಾರ ಹಾದಿಮನಿ ನಿರೂಪಿಸಿದರು. ಕಾರ್ಯದರ್ಶಿ ಎಚ್.ಎನ್. ಆಡಿನ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!