ರೈತರ ನಿದ್ದೆಗೆಡಿಸಿದ ಸೈನಿಕ


Team Udayavani, Oct 11, 2017, 12:11 PM IST

6hu.jpg

ಹುಬ್ಬಳ್ಳಿ: ಸುಮಾರು 29 ವರ್ಷಗಳ ನಂತರ ಹೊಲಗಳಿಗೆ ಸಾಮೂಹಿಕ ರೀತಿಯಲ್ಲಿ ಲಗ್ಗೆಯಿಟ್ಟಿರುವ ಸೈನಿಕ ಹುಳು ಅಥವಾ ಲದ್ದಿ ಹುಳುಗಳು ಉತ್ತರ ಹಾಗೂ ಮಧ್ಯ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ರೈತರ ನಿದ್ದೆಗೆಡಿಸಿವೆ. ಹುಳುಗಳ ನಿಯಂತ್ರಣಕ್ಕೆ ವಿಷಪಾಷಾಣ, ಕ್ರಿಮಿನಾಶಗಳ ಬಳಕೆ ಕುರಿತಾಗಿ ಕೀಟ ತಜ್ಞರು ಸಲಹೆ ನೀಡಿದ್ದಾರೆ. 

ಉತ್ತರ ಕರ್ನಾಟಕದ ಹಾವೇರಿ, ಧಾರವಾಡ, ಕೊಪ್ಪಳ, ರಾಯಚೂರು, ಬಳ್ಳಾರಿ, ಉತ್ತರ ಕನ್ನಡ ಹಾಗೂ ಮಧ್ಯ ಕರ್ನಾಟಕದ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸೈನಿಕ ಹುಳುಗಳು ಸಾಮೂಹಿಕ ರೀತಿ ಬೆಳೆಗಳಿಗೆ ಲಗ್ಗೆ ಇರಿಸಿವೆ. ಎರಡ್ಮೂರು ವರ್ಷಗಳ ಬರ, ಈ ಬಾರಿಯ ಮುಂಗಾರು ವೈಫ‌ಲ್ಯದಿಂದ ಕಂಗೆಟ್ಟಿದ್ದ ರೈತರಿಗೆ ಬೆಳೆದು ನಿಂತ ಅಷ್ಟಿಷ್ಟು ಬೆಳೆ ಹುಳುಗಳ ಪಾಲಾಗುತ್ತಿರುವುದು ರೈತರನ್ನು ಕೆಂಗೆಡಿಸಿದೆ. 

ಸೈನಿಕ ಅಥವಾ ಲದ್ದಿ ಹುಳ ಉತ್ತರ ಕರ್ನಾಟಕದಲ್ಲಿ 1988-89ರಲ್ಲಿ ಹೆಚ್ಚಿನ ರೀತಿ ದಾಳಿ ಮಾಡಿ ಬೆಳೆ ಹಾನಿ ಮಾಡಿದ್ದವು. ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಕೊಪ್ಪಳ ಜಿಲ್ಲೆಯಲ್ಲಿ ಕಾಣಿಸಿಕೊಂಡಿದ್ದ ಸೈನಿಕ ಹುಳಗಳು ಆ ಜಿಲ್ಲೆಗೆ ಸೀಮಿತವಾಗಿ ಹೆಚ್ಚಿನ ಬೆಳೆ ಹಾನಿ ಮಾಡಿದ್ದವು. 

ಇದೀಗ ಉತ್ತರ ಹಾಗೂ ಮಧ್ಯ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಸಾಮೂಹಿಕ ರೀತಿಯಲ್ಲಿ ಕಾಣಿಸಿಕೊಂಡಿವೆ. ಕೀಟಶಾಸ್ತ್ರಜ್ಞರ ಪ್ರಕಾರ ಸಾಮಾನ್ಯವಾಗಿ ಸತತ ಬರದ ನಂತರದಲ್ಲಿ ಬಿದ್ದ ಹೆಚ್ಚಿನ ಮಳೆ, ಮಣ್ಣಿನಲ್ಲಿ ಹೆಚ್ಚಾದ ತೇವಾಂಶ ಹಾಗೂ ಪ್ರತಿಕೂಲ ಹವಾಮಾನದಿಂದ ಸೈನಿಕ ಹುಳುಗಳ ಬಾಧೆ ತೀವ್ರವಾಗಲಿದೆ.

ಒಂದು ಪತಂಗ ಸುಮಾರು 600-800 ಮೊಟ್ಟೆಗಳಿಡುತ್ತಿದ್ದು, ಇದು ಹುಳುಗಳ ಸಂಖ್ಯೆ ಹೆಚ್ಚಳಕ್ಕೆ ಕಾರಣವಾಗುತ್ತಿದೆ. ಸೈನಿಕ ಹುಳುಗಳು ಶೇಂಗಾ, ಜೋಳ, ಗೋವಿನಜೋಳ, ಭತ್ತ, ಕಬ್ಬು, ದ್ವಿದಳ ಧಾನ್ಯ ಹಾಗೂ ಸಿರಿಧಾನ್ಯಗಳ ಬೆಳೆಗಳ ಮೇಲೂ ದಾಳಿ ಮಾಡುತ್ತವೆ.

ಸಾಮೂಹಿಕ ಲಗ್ಗೆ: ಹಾವೇರಿ, ರಾಣೆಬೆನ್ನೂರು, ಮುಂಡಗೋಡ, ದಾವಣಗೆರೆ, ಚಿತ್ರದುರ್ಗ, ರಾಯಚೂರು, ಕೊಪ್ಪಳ, ಬಳ್ಳಾರಿ, ಹಗರಿಬೊಮ್ಮನಹಳ್ಳಿ ಇನ್ನಿತರ ಕಡೆಗಳಲ್ಲಿ ಗೋವಿನಜೋಳ, ಜೋಳ, ರಾಗಿ, ಭತ್ತ ಇನ್ನಿತರ ಬೆಳೆಗಳಿಗೆ ಸೈನಿಕ ಹುಳು ಬಾಧೆ ಕಾಣಿಸಿಕೊಂಡಿದೆ.

ಬೆಳಗಿನ ಜಾವ ಮಣ್ಣಿನ ಒಳಗಡೆ ಇರುವ ಹುಳುಗಳು, ಮಬ್ಬುಗತ್ತಲಲ್ಲಿ ಹೊರ ಬಂದು ಬೆಳೆಗಳನ್ನು ತಿನ್ನುತ್ತವೆ. ಒಂದು ಹೊಲದಲ್ಲಿ ಎಲೆಗಳನ್ನು ತಿಂದು ಮುಗಿಸಿದ ಬಳಿಕ ಸಾಮೂಹಿಕ ರೀತಿಯಲ್ಲಿ ಇನ್ನೊಂದು ಹೊಲಕ್ಕೆ ವಲಸೆ ಹೋಗುವುದರಿಂದ ಇವಕ್ಕೆ “ಸೈನಿಕ’ ಹುಳು ಎಂದು ಕರೆಯಲಾಗುತ್ತದೆ.

ನಿಯಂತ್ರಣ ಹೇಗೆ?: ಸೈನಿಕ ಹುಳುಗಳಿಗೆ ರೈತರು ಲದ್ದಿ ಹುಳು ಎಂದೇ ಕರೆಯುತ್ತಾರೆ. ಪತಂಗಗಳ ಲದ್ದಿ ರೂಪದಲ್ಲಿರುವ ಮೊಟ್ಟೆಗಳನ್ನು ರೈತರು ಗುರುತಿಸಿ ನಾಶಪಡಿಸಿದರೆ ಹುಳದ ಬಾಧೆಯ ತೀವ್ರತೆ ತಡೆಯಬಹುದು. ಇದಲ್ಲದೆ ವಿಷ ಪಾಷಾಣ ಹಾಗೂ ಕೆಲವೊಂದು ಕ್ರಿಮಿನಾಶಗಳ ಬಳಕೆ, ಇನ್ನಿತರ ವಿಧಾನಗಳಿಂದಲೂ ಹುಳುಗಳ ಬಾಧೆ ನಿಯಂತ್ರಿಸಬಹುದಾಗಿದೆ ಎಂಬುದು ಧಾರವಾಡ ಹಾಗೂ ರಾಯಚೂರು ಕೃಷಿ ವಿಶ್ವವಿದ್ಯಾಲಯಗಳ ಕೀಟಶಾಸ್ತ್ರ ತಜ್ಞರ ಅನಿಸಿಕೆ. 

* ಅಮರೇಗೌಡ ಗೋನವಾರ

ಟಾಪ್ ನ್ಯೂಸ್

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

5-sulya

Sulya: ಶಾಲಾ ಆವರಣದಲ್ಲಿ ಕೊಲೆಗೈದ ಸ್ಥಿತಿಯಲ್ಲಿ ಯುವಕನ ಮೃತದೇಹ ಪತ್ತೆ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ

Train Mishap: ಕಾಂಚನಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ಗೂಡ್ಸ್ ರೈಲು, ಹಲವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಹ್ಲಾದ ಜೋಶಿ

Hubli: ದಿವಾಳಿಯಾದ ಸರ್ಕಾರ ಜನರಿಗೆ ಬೆಲೆ ಏರಿಕೆಯ ಬರೆ ಹಾಕಿದೆ: ಪ್ರಹ್ಲಾದ ಜೋಶಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Hubli; ದರ್ಶನ್ ಅವರನ್ನು ರಾಯಭಾರಿಯಾಗಿ ನೇಮಿಸಿದ್ದು ಸರ್ಕಾರದ ತಪ್ಪು: ಪ್ರಹ್ಲಾದ ಜೋಶಿ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

Dharwad: ಗೋವು ರಕ್ಷಕರ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ… ಭಜರಂಗದಳ ಪ್ರತಿಭಟನೆ

prahlad-joshi

CM ಸಿದ್ದರಾಮಯ್ಯ ಬುಡಕ್ಕೆ ನೀರು ಬಂದಿದ್ದಕ್ಕೆ ಯಡಿಯೂರಪ್ಪ ಗುರಿ: ಕೇಂದ್ರ ಸಚಿವ ಜೋಶಿ

MUST WATCH

udayavani youtube

ಗಂಗೊಳ್ಳಿಯಲ್ಲಿ ಈದ್ ಅಲ್ ಅಝ್ಹಾ ಆಚರಣೆ

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

ಹೊಸ ಸೇರ್ಪಡೆ

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Renukaswamy Case; ಪಾರದರ್ಶಕ ವಿಚಾರಣೆಯಾಗಲಿ…: ದರ್ಶನ್ ಬಂಧನದ ಬಗ್ಗೆ ಉಪೇಂದ್ರ ಮಾತು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Jharkhand: ಪೊಲೀಸರ ಎನ್‌ ಕೌಂಟರ್‌ ಗೆ ಮಹಿಳೆ ಸೇರಿ ನಾಲ್ವರು ನಕ್ಸಲೀಯರು ಮೃತ್ಯು

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Mangaluru: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ವಿಭಿನ್ನ ಪ್ರತಿಭಟನೆ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

Gautam ಅದಾನಿ, ಭೂತಾನ್‌ ಪ್ರಧಾನಿ, ರಾಜ ಜಿಗ್ಮೆ ಭೇಟಿ; ಹೈಡ್ರೋ ಪ್ಲಾಂಟ್‌ ಒಪ್ಪಂದಕ್ಕೆ ಸಹಿ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

ICC T20 World Cup: ಇನ್ನು ಸೂಪರ್ 8 ಕದನ; ಇಲ್ಲಿದೆ ಭಾರತದ ಪಂದ್ಯಗಳ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.