ಅಭಿವೃದ್ಧಿಯತ್ತ ಹೆಜ್ಜೆ ಸವಾಲು: ನಿಂಬಣ್ಣವರ

•ಕಲಘಟಗಿ ವಿದಾನಸಭಾ ಕ್ಷೇತ್ರದಲ್ಲಿ 180ಕ್ಕೂ ಹೆಚ್ಚು ಶಾಲಾ ಕೊಠಡಿ ಜಖಂ

Team Udayavani, Aug 19, 2019, 10:29 AM IST

huballi-tdy-03

ಕಲಘಟಗಿ: ಅತಿವೃಷ್ಟಿ ಮತ್ತು ನೆರೆ ಹಾವಳಿಯಿಂದಾಗಿ ಮತಕ್ಷೇತ್ರದಾದ್ಯಂತ ಸುಮಾರು ನೂರು ಕೋಟಿಗೂ ಮಿಕ್ಕಿದ ಹಾನಿಯುಂಟಾಗಿದ್ದು, ಅದನ್ನು ಸರಿಪಡಿಸಿ ಅಭಿವೃದ್ಧಿಯತ್ತ ಕೊಂಡೊಯ್ಯುವುದೇ ಸವಾಲಾಗಿದೆ ಎಂದು ಶಾಸಕ ಸಿ.ಎಂ. ನಿಂಬಣ್ಣವರ ಹೇಳಿದರು.

ಪಟ್ಟಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅತಿವೃಷ್ಟಿಯಿಂದ ಕ್ಷೇತ್ರದಲ್ಲಾದ ಹಾನಿ ವಿವರ ನೀಡಿ ಮಾತನಾಡಿದ ಅವರು, ಅಳ್ನಾವರ ಭಾಗದ ಹುಲಿಕೇರಿಯ ಇಂದಿರಮ್ಮನ ಕೆರೆ ತಡೆಗೋಡೆಯುದ್ದಕ್ಕೂ ಸೋರುವಿಕೆ ಪ್ರಾರಂಭವಾಗಿದೆ. ಪಕ್ಕದ ಗುಡ್ಡದ ಭಾಗ ಬಹಳಷ್ಟು ಕೊರೆತಕ್ಕೆ ಈಡಾಗಿದೆ. ಕಾಲುವೆ ಮಾರ್ಗ ಮಧ್ಯದ ಜಮೀನುಗಳಿಗೆಲ್ಲ ಹಾನಿಯುಂಟಾಗಿದೆ. ಈ ಕುರಿತು ಅಧಿಕಾರಿ ವರ್ಗಕ್ಕೆ ಮಾರ್ಗದರ್ಶನ ಮಾಡಿದ್ದು, ಸೂಕ್ತ ಕ್ರಮ ಜರುಗಿಸಲು ಮುಂದಾಗಿದ್ದಾರೆ ಎಂದು ತಿಳಿಸಿದರು.

ಮತಕ್ಷೇತ್ರದಾದ್ಯಂತ ಸುಮಾರು 180ಕ್ಕೂ ಹೆಚ್ಚು ಶಾಲಾ ಕೊಠಡಿಗಳು ಜಖಂಗೊಂಡಿವೆ. ಅಳ್ನಾವರ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಡೌಗಿನಾಲಾದ ಹರಿವಿನಿಂದಾಗಿ ಅಕ್ಕಪಕ್ಕದ ಜಮೀನುಗಳು ಕೊರೆತಕ್ಕೆ ಈಡಾಗಿವೆ. ಅಲ್ಲಿನ ಹೊನ್ನಾಪುರ, ಕುಂಬಾರಕೊಪ್ಪ, ಕೋಗಿಲಗೇರಿ, ಕಡಬಗಟ್ಟಿ, ಬೆಣಚಿ ಭಾಗದ ಜನರ ದುಸ್ಥಿತಿ ಹೇಳತೀರದು. ವೀರಾಪುರ ಗ್ರಾಮದ ಕೆರೆ ಒಡೆದಿರುವುದರಿಂದ ನೀರಿನ ರಭಸಕ್ಕೆ 10 ವರ್ಷದ ಮಾವಿನ ಗಿಡಗಳು ಹಾಗೂ ರೈತರು ಬೆಳೆದ ಕಬ್ಬು, ಜೋಳ ಮುಂತಾದ ಬೆಳೆಗಳೆಲ್ಲ ಬೇರು ಸಹಿತ ಕಿತ್ತು ಹೋಗಿವೆ. ಕಂಬಾರಗಣವಿ-ಹೊನ್ನಾಪುರ ರಸ್ತೆ ಮಧ್ಯದ ಸೇತುವೆ ಕೊಚ್ಚಿ ಹೋಗಿ ಜನ ಸಂಕಷ್ಟದಲ್ಲಿದ್ದಾರೆ ಎಂದು ವಿವರಿಸಿದರು.

ಕಲಘಟಗಿ-ತಡಸ ರಸ್ತೆಯಲ್ಲಿ ಹಿಂಡಸಗೇರಿ ಸೇತುವೆ ಕೊಚ್ಚಿ ಹೋಗಿ ವಾಹನ ಸಂಚಾರವೇ ಕಡಿತಗೊಂಡಿದೆ. ಇದರಿಂದಾಗಿ ತಾಲೂಕಿನ ಆ ಭಾಗದ 20-25 ಹಳ್ಳಿಗಳ ಜನರಿಗೆ ಸಾರಿಗೆ ಸಮಸ್ಯೆ ಉಂಟಾಗಿದೆ. ನೀರಸಾಗರ ಜಲಾಶಯ ಮತ್ತು ಕಲಘಟಗಿ ಪಟ್ಟಣಕ್ಕೆ ಕುಡಿಯುವ ನೀರು ಒದಗಿಸುವ ಬೆಣಚಿ ಕೆರೆ ತುಂಬಿ ಕೋಡಿ ಹರಿದಿರುವುದರಿಂದ ಕೆಳ ಭಾಗದ ರೈತರು ಆತಂಕಗೊಂಡಿದ್ದರು. ಯಾವುದೇ ಪ್ರಾಣ ಹಾನಿ ಜರುಗದಿದ್ದರೂ ಅಪಾರ ಬೆಳೆಹಾನಿಯಾಗಿದೆ.

ಬೇಡ್ತಿ ಹಾಗೂ ಶಾಲ್ಮಲಾ ಜಂಟಿಯಾಗಿ ಹರಿದಿರುವ ಪ್ರದೇಶಗಳಲ್ಲಿ ದಂಡೆಗಳಲ್ಲಿರುವ ರೈತರ ಪಂಪ್‌ಹೌಸ್‌ ಮತ್ತು ಪಂಪ್‌ಸೆಟ್‌ಗಳು ಕೊಚ್ಚಿ ಹೋಗಿವೆ. ವಿದ್ಯುತ್‌ ಕಂಬಗಳು ಮತ್ತು ಟಿಸಿಗಳು ಧರೆಗುರುಳಿದ್ದು, ಅನೇಕ ಗ್ರಾಮಗಳಲ್ಲಿ ಅಂಧಕಾರ ಮನೆ ಮಾಡಿದೆ. ಕುಡಿಯುವ ನೀರಿಗೆ ಕೊರತೆ ಉಂಟಾಗಿದೆ. ಅಧಿಕಾರಿಗಳು ಸಮರೋಪಾದಿಯಲ್ಲಿ ಪರಿಹಾರ ಕಾರ್ಯ ನಿರತರಾಗಿದ್ದಾರೆ ಎಂದು ತಿಳಿಸಿದರು.

ಕ್ಷೇತ್ರದಾದ್ಯಂತ ಅಂದಾಜು 28,813 ಹೆಕ್ಟೇರ್‌ ಬೆಳೆ ಹಾನಿಯಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಕಂದಾಯ, ಕೃಷಿ ಹಾಗೂ ತೋಟಗಾರಿಕಾ ಇಲಾಖೆ ಅಧಿಕಾರಿಗಳಿಗೆ ಜಂಟಿಯಾಗಿ ಸಮೀಕ್ಷೆ ನಡೆಸಿ ಬೆಳೆ ಹಾನಿ ಅಂದಾಜು ತಯಾರಿಸಲು ಸೂಚಿಸಲಾಗಿದೆ. ಸರ್ಕಾರ ತುರ್ತಾಗಿ 1 ಕೋಟಿ ಅನುದಾನ ನೀಡಿದೆ. ಸುಮಾರು 2500 ಮನೆಗಳು ಜಖಂಗೊಂಡಿದ್ದು ಬಹುತೇಕವಾಗಿ ಪರಿಹಾರ ಹಣವನ್ನು ನೇರವಾಗಿ ಅವರವರ ಖಾತೆಗೆ ಜಮೆ ಮಾಡಲಾಗುತ್ತಿದೆ. •ಸಿ.ಎಂ. ನಿಂಬಣ್ಣವರ, ಶಾಸಕ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.