ಗಬ್ಬು ನಾರುತ್ತಿದೆ ಬಿಆರ್ಟಿಎಸ್ ಬಸ್
|ಕಸ ಮುಟ್ಟದ ಪಾಲಿಕೆ ಸಿಬ್ಬಂದಿ |ಸ್ವಚ್ಛತೆಗೂ ನೀರಿನ ಬರ |ಚಿಗರಿ ಬಸ್ನಲ್ಲೇ ಕಸ ಸಾಗಾಟ |ಅಧಿಕಾರಿಗಳು ಮೌನ
Team Udayavani, Jun 28, 2019, 9:31 AM IST
ಹುಬ್ಬಳ್ಳಿ: ಚಿಗರಿ ಬಸ್ನಲ್ಲಿ ಕಸ ಸಾಗಿಸುತ್ತಿರುವುದು.
ಹುಬ್ಬಳ್ಳಿ: ಹು-ಧಾ ಬಿಆರ್ಟಿಎಸ್ ಬಸ್ ನಿಲ್ದಾಣಗಳಲ್ಲಿ ನೀರಿನ ವ್ಯವಸ್ಥೆಯಿಲ್ಲದ ಪರಿಣಾಮ ಸ್ವಚ್ಛತೆಗೆ ದೊಡ್ಡ ಸಮಸ್ಯೆ ಎದುರಾಗಿದ್ದು, ಚಿಗರಿ ಬಸ್ನಲ್ಲೇ ನೀರು ಹಾಗೂ ಕಸ ಸಾಗಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಬಸ್ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಮುಖವಾಗಿ ಕೆಲ ಮೂಲ ಸೌಲಭ್ಯಗಳನ್ನು ಕಲ್ಪಿಸುವಲ್ಲಿ ಅಧಿಕಾರಿಗಳು ಸಂಪೂರ್ಣ ವಿಫಲವಾಗಿರುವುದು ಪ್ರಾಯೋಗಿಕ ಹಂತದಲ್ಲಿ ಬೆಳಕಿಗೆ ಬಂದಿದ್ದವು. ಇದರಲ್ಲಿ ಕೆಲವು ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲಾಗಿದೆ. ಆದರೆ ಇದೀಗ ಬಸ್ ನಿಲ್ದಾಣ ಸ್ವಚ್ಛತೆಗೂ ನೀರಿನ ತೊಂದರೆ ಎದುರಾಗಿದ್ದು, ಅಕ್ಕಪಕ್ಕದ ಹೊಟೇಲ್, ಪಾರ್ಕ್, ಸಾರ್ವಜನಿಕ ನಲ್ಲಿಗಳಿಂದ ನೀರು ತಂದು ಬಸ್ ನಿಲ್ದಾಣಗಳನ್ನು ಸ್ವಚ್ಛ ಮಾಡುವಂತಾಗಿದೆ. ನಿತ್ಯ ಸಾವಿರಾರು ಪ್ರಯಾಣಿಕರು ಓಡಾಡುವ ಬಸ್ ನಿಲ್ದಾಣ ದಿನಕ್ಕೊಮ್ಮೆ ಮಾತ್ರ ಸ್ವಚ್ಛವಾಗುತ್ತಿದೆ.
ಹು-ಧಾ ನಗರದ ಮಧ್ಯೆ ಇರುವ 33 ಬಸ್ ನಿಲ್ದಾಣಗಳ ಪೈಕಿ ಸುಮಾರು 30 ಬಸ್ ನಿಲ್ದಾಣಗಳ ಸ್ವಚ್ಛತೆಗೆ ನೀರಿನ ಕೊರತೆಯಿದೆ. ಏಜೆನ್ಸಿಯ ಸ್ವಚ್ಛತಾ ಸಿಬ್ಬಂದಿಯೇ ಅಲ್ಲಲ್ಲಿ ಕಾಡಿ ಬೇಡಿ ನೀರು ತಂದು ನಿಲ್ದಾಣ ಸ್ವಚ್ಛ ಮಾಡುತ್ತಿದ್ದಾರೆ. ಬೇರೆಡೆಯಿಂದ ನೀರು ಹೊತ್ತು ಬರುವ ಪರಿಸ್ಥಿತಿ ಇರುವುದರಿಂದ ನಿತ್ಯ ಒಂದೇ ಕೊಡ ನೀರಿನಲ್ಲಿ ಇಡೀ ಬಸ್ ನಿಲ್ದಾಣ ಸ್ವಚ್ಛಗೊಳಿಸುವಂತಾಗಿದೆ. ಸ್ವಚ್ಛತೆಗೆ ಬೇಕಾದ ನೀರನ್ನು ಕೂಡ ಚಿಗರಿ ಬಸ್ಸಿನಲ್ಲೇ ತಂದೆ ಸಿಬ್ಬಂದಿ ಸ್ವಚ್ಛಗೊಳಿಸುತ್ತಿದ್ದಾರೆ.
ಕಸ ಮುಟ್ಟದ ಪಾಲಿಕೆ, ಬಸ್ಸಿನಲ್ಲಿ ಸಾಗಾಟ: ಬಸ್ ನಿಲ್ದಾಣದ ಕಸವನ್ನು ಮಹಾನಗರ ಪಾಲಿಕೆ ಸಿಬ್ಬಂದಿ ಮುಟ್ಟುತ್ತಿಲ್ಲ. ಬೆಳಗಿನ ಜಾವ ಕಸದ ಚೀಲವನ್ನು ನಿಲ್ದಾಣದ ಮುಂದಿಟ್ಟರೆ ತೆಗೆದುಕೊಂಡು ಹೋಗುತ್ತಿಲ್ಲ. ಹೀಗಾಗಿ ಕಸ ಗೂಡಿಸುವ ಸಿಬ್ಬಂದಿ ಕಸವನ್ನು ಬಸ್ನಲ್ಲಿ ಹಾಕಿಕೊಂಡು ದೂರ ಖಾಲಿ ನಿವೇಶನಗಳಲ್ಲಿ ಕಸ ಬೀಸಾಡುತ್ತಿದ್ದಾರೆ. ಕಸ ತೆಗೆದುಕೊಂಡು ಹೋಗುವ ಕುರಿತು ಪಾಲಿಕೆ ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂಬುದು ಸ್ವಚ್ಛತಾ ಸಿಬ್ಬಂದಿ ಅಳಲಾಗಿದೆ.
ಕ್ಷೀಣಿಸಿದ ಸಿಬ್ಬಂದಿ ಸಂಖ್ಯೆ: ಸ್ವಚ್ಛತಾ ಕಾರ್ಯವನ್ನು 2 ಏಜೆನ್ಸಿಗಳಿಗೆ ನೀಡಲಾಗಿದ್ದು, ಪ್ರಾಯೋಗಿಕವಾಗಿ ಆರಂಭವಾದ ಸಂದರ್ಭದಲ್ಲಿ ನಿಲ್ದಾಣಕ್ಕೆ ಒಬ್ಬರಂತೆ ನಿಯೋಜಿಸಲಾಗಿತ್ತು. ಆದರೆ ಇದೀಗ ಎರಡು ನಿಲ್ದಾಣಗಳಿಗೆ ಓರ್ವ ಸ್ವಚ್ಛತಾ ಸಿಬ್ಬಂದಿಯನ್ನು ನೇಮಿಸಲಾಗಿದೆ. ಎರಡೂ ನಿಲ್ದಾಣಗಳನ್ನು ಸ್ವಚ್ಛಗೊಳಿಸಿ ತೆರಳಿದ ನಂತರ ನಿಲ್ದಾಣದ ಸ್ವಚ್ಛತೆ ಕೇಳ್ಳೋರಿಲ್ಲದಂತಾಗುತ್ತಿದೆ. ಮಳೆಗಾಲದಲ್ಲಿ ಸಾಕಷ್ಟು ರಾಡಿಯಾಗುವುದರಿಂದ ಇಂದಿನ ಕಸ ಮಾರನೇ ದಿನ ಸ್ವಚ್ಛಗೊಳಿಸಲಾಗುತ್ತದೆ. ಹೀಗಾಗಿ ಕೆಲ ನಿಲ್ದಾಣಗಳಲ್ಲಿ ಸಾವಿರಾರು ಪ್ರಯಾಣಿಕರು ಓಡಾಡುವ ನಿಲ್ದಾಣಗಳು ಕಸದ ತೊಟ್ಟಿಯಾಗಿ ಮಾರ್ಪಟ್ಟಿರುತ್ತವೆ. ಇನ್ನೂ ಪ್ಲಾಟ್ಫಾರ್ಮ್ಗಳ ಸ್ವಚ್ಛತೆ ಯಾರದೋ ಎನ್ನುವ ಗೊಂದಲದಿಂದ ತಿಪ್ಪೆಯಾಗಿ ಪರಿಣಮಿಸಿದೆ.
ಆಗುತ್ತಿಲ್ಲ ಕಸ ವಿಲೇವಾರಿ: ನಿಲ್ದಾಣದಲ್ಲಿರುವ ಡಬ್ಬಿಗಳ ಕಸ ಮೂರ್ನಾಲ್ಕು ದಿನಗಳಿಗೊಮ್ಮೆ ವಿಲೇವಾರಿಯಾಗುತ್ತಿದೆ. ಈ ಕಸದ ಡಬ್ಬಿಗಳಿಗೆ ಹೊದಿಸುವ ಪ್ಲಾಸ್ಟಿಕ್ ಬ್ಯಾಗ್ವೊಂದನ್ನು ಮೂರ್ನಾಲ್ಕು ದಿನ ಬಳಕೆ ಮಾಡುವಂತೆ ಗುತ್ತಿಗೆದಾರರು ಸಿಬ್ಬಂದಿಗೆ ಸೂಚಿಸಿದ ಪರಿಣಾಮ ಡಬ್ಬಿ ಕಸ ನಿತ್ಯ ವಿಲೇವಾರಿಯಾಗುತ್ತಿಲ್ಲ. ಎಲೆ ಅಡಕೆ, ಗುಟ್ಕಾ ಉಗುಳಿರುವುದು ಸೇರಿದಂತೆ ಕಸ ಮೂರ್ನಾಲ್ಕು ದಿನಗಳಿಗೊಮ್ಮೆ ವಿಲೇವಾರಿಯಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
MUST WATCH
ಹೊಸ ಸೇರ್ಪಡೆ
Yugadi: ಯುಗಾದಿ
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ