ಉಪಸಮರ ಫಲಿತಾಂಶ ರಾಜ್ಯರಾಜಕೀಯ ದಿಕ್ಸೂಚಿ: ಶೆಟ್ಟರ್
Team Udayavani, Apr 30, 2019, 11:33 AM IST
ಹುಬ್ಬಳ್ಳಿ: ಕುಂದಗೋಳ ಹಾಗೂ ಚಿಂಚೋಳಿ ಉಪ ಚುನಾವಣೆ ಮುಂದಿನ ರಾಜ್ಯ ರಾಜಕೀಯದ ದಿಕ್ಸೂಚಿಯಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.
ಸೋಮವಾರ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬೂತ್ ಮಟ್ಟದವರೆಗೆ ಬೆಳೆದಿರುವ ಕೇಡರ್ ಬೇಸ್ಡ್ ಪಕ್ಷ. ಈ ಹಂತದವರಿಗೆ ತಲುಪಲು ಯಾವ ಪಕ್ಷದಿಂದಲೂ ಸಾಧ್ಯವಿಲ್ಲ. ಹಣ ಹಾಗೂ ಅಧಿಕಾರ ಬಲ ನಡೆಯುವುದಿಲ್ಲ. ಎರಡು ಕ್ಷೇತ್ರದಲ್ಲಿ ನಮ್ಮ ಪಕ್ಷದ ಸಂಘಟನೆ ಪ್ರಬಲವಾಗಿದ್ದು, ಎರಡು ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಲೋಕಸಭೆ ಫಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆಯಾಗಲಿದೆ. ಹಾಸನ, ಮಂಡ್ಯ ಹಾಗೂ ತುಮಕೂರು ಕ್ಷೇತ್ರದಲ್ಲಿ ಜೆಡಿಎಸ್ ಸೋಲನುಭವಿಸಲಿದ್ದು, ಇದರಿಂದ ಮೈತ್ರಿ ಸರ್ಕಾರ ಬೀಳಲಿದೆ. ಕುಂದಗೋಳ ಉಪಚುನಾವಣೆಗೆ ಸಂಬಂಧಿಸಿದಂತೆ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಆರ್.ಪಾಟೀಲ ಈ ಚುನಾವಣೆ ಪ್ರಾಮಾಣಿಕತೆಯಿಂದ ಮಾಡಲಿದ್ದಾರೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಎಂ.ಆರ್. ಪಾಟೀಲ ಒಂದಿಷ್ಟು ಬೇಸರಗೊಂಡಿದ್ದರು. ಇದೀಗ ಅದೆಲ್ಲವು ಮುಗಿದ ಅಧ್ಯಾಯ. ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ