ಉಪಸಮರ ಫ‌ಲಿತಾಂಶ ರಾಜ್ಯರಾಜಕೀಯ ದಿಕ್ಸೂಚಿ: ಶೆಟ್ಟರ್‌


Team Udayavani, Apr 30, 2019, 11:33 AM IST

hub-2

ಹುಬ್ಬಳ್ಳಿ: ಕುಂದಗೋಳ ಹಾಗೂ ಚಿಂಚೋಳಿ ಉಪ ಚುನಾವಣೆ ಮುಂದಿನ ರಾಜ್ಯ ರಾಜಕೀಯದ ದಿಕ್ಸೂಚಿಯಾಗಿದ್ದು, ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ತಿಳಿಸಿದರು.

ಸೋಮವಾರ ಬಿಜೆಪಿ ಅಭ್ಯರ್ಥಿ ಚಿಕ್ಕನಗೌಡ ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಬೂತ್‌ ಮಟ್ಟದವರೆಗೆ ಬೆಳೆದಿರುವ ಕೇಡರ್‌ ಬೇಸ್ಡ್ ಪಕ್ಷ. ಈ ಹಂತದವರಿಗೆ ತಲುಪಲು ಯಾವ ಪಕ್ಷದಿಂದಲೂ ಸಾಧ್ಯವಿಲ್ಲ. ಹಣ ಹಾಗೂ ಅಧಿಕಾರ ಬಲ ನಡೆಯುವುದಿಲ್ಲ. ಎರಡು ಕ್ಷೇತ್ರದಲ್ಲಿ ನಮ್ಮ ಪಕ್ಷದ ಸಂಘಟನೆ ಪ್ರಬಲವಾಗಿದ್ದು, ಎರಡು ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ. ಲೋಕಸಭೆ ಫ‌ಲಿತಾಂಶದ ನಂತರ ರಾಜ್ಯ ರಾಜಕೀಯದಲ್ಲಿ ದೊಡ್ಡ ಬದಲಾವಣೆಯಾಗಲಿದೆ. ಹಾಸನ, ಮಂಡ್ಯ ಹಾಗೂ ತುಮಕೂರು ಕ್ಷೇತ್ರದಲ್ಲಿ ಜೆಡಿಎಸ್‌ ಸೋಲನುಭವಿಸಲಿದ್ದು, ಇದರಿಂದ ಮೈತ್ರಿ ಸರ್ಕಾರ ಬೀಳಲಿದೆ. ಕುಂದಗೋಳ ಉಪಚುನಾವಣೆಗೆ ಸಂಬಂಧಿಸಿದಂತೆ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಆರ್‌.ಪಾಟೀಲ ಈ ಚುನಾವಣೆ ಪ್ರಾಮಾಣಿಕತೆಯಿಂದ ಮಾಡಲಿದ್ದಾರೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಎಂ.ಆರ್‌. ಪಾಟೀಲ ಒಂದಿಷ್ಟು ಬೇಸರಗೊಂಡಿದ್ದರು. ಇದೀಗ ಅದೆಲ್ಲವು ಮುಗಿದ ಅಧ್ಯಾಯ. ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ ಎಂದರು.

ಅಸಮಾಧಾನ ಸಹಜ: ಎಂ.ಆರ್‌. ಪಾಟೀಲ
ಚುನಾವಣಾ ರಾಜಕೀಯದಲ್ಲಿ ಟಿಕೆಟ್ ಕೈ ತಪ್ಪಿದಾಗ ಅಸಮಧಾನ ಸಹಜ. ಹಾಗಂತ ಪಕ್ಷಕ್ಕಿಂತ ನಾನು ದೊಡ್ಡವನಲ್ಲ. ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯ ಗೆಲುವಿಗೆ ಹೆಗಲು ಕೊಟ್ಟು ದುಡಿಯುದಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಎಂ.ಆರ್‌.ಪಾಟೀಲ ತಿಳಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಪ್ರಾಮಾಣಿಕವಾಗಿ ಚುನಾವಣೆ ಮಾಡುವುದಾಗಿ ಮುಖಂಡರಿಗೆ ಹಾಗೂ ಕ್ಷೇತ್ರದ ಮತದಾರರಿಗೆ ಭರವಸೆ ನೀಡಿದ್ದೇನೆ. ನನ್ನ ಬೆಂಬಲಿಗರಲ್ಲೂ ಕೂಡ ಯಾವುದೇ ಅಸಮಾಧಾನವಿಲ್ಲ. ಬೇಸರಗೊಂಡಿರುವ ಬೆಂಬಲಿಗರನ್ನು ಒಗ್ಗೂಡಿಸಿ ಬಿಜೆಪಿ ಗೆಲವುಗೆ ಶ್ರಮಿಸುವಂತೆ ಮನವೊಲಿಸುತ್ತೇನೆ ಎಂದರು.
ಇನ್ನೇನಿದ್ದರೂ ಆಪರೇಷನ್‌ ಸಿದ್ದರಾಮಯ್ಯ

ಇನ್ನ ಮುಂದೆ ಆಪರೇಶನ್‌ ಕಮಲ ನಡೆಯೋದಿಲ್ಲ, ಇನ್ನೇನಿದ್ದರೂ ಆಪರೇಶನ್‌ ಸಿದ್ದರಾಮಯ್ಯ ಮಾತ್ರ. ಮೈತ್ರಿ ಸರ್ಕಾರ ಬೀಳಲಿಕ್ಕೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರೇ ಕಾರಣ ಆಗಲಿದ್ದಾರೆ ಎಂದು ಶಾಸಕ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಸುದ್ದಿಗಾರರ ಜತೆ ಮಾತನಾಡಿದ ಅವರು, ಮೈಸೂರು ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಅಭ್ಯರ್ಥಿ ಸೋತರೆ ಸರ್ಕಾರಕ್ಕೆ ಉಳಿಗಾಲವಿಲ್ಲ ಎಂದು ಸಿದ್ದರಾಮಯ್ಯ ಅವರು ಬಹಿರಂಗವಾಗಿ ಹೇಳಿದ್ದಾರೆ. ಮೈಸೂರು ಸೇರಿದಂತೆ ಹಾಸನ, ಮಂಡ್ಯ ಹಾಗೂ ತುಮಕೂರ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿಗಳು ಸೋಲುವುದು ನಿಶ್ಚಿತ ಎಂದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.