ಶೌಚಾಲಯ ಇದ್ರೆ ಜೈಕಾರ.. ಇಲ್ಲಾಂದ್ರೆ ಧಿಕ್ಕಾರ!


Team Udayavani, Aug 2, 2017, 12:13 PM IST

hub5.jpg

ಧಾರವಾಡ: ಶೌಚಾಲಯ ನಿರ್ಮಿಸಿ ಬಳಸುವವರ ಮನೆ ಮುಂದೆ ಜೈಕಾರ, ಶೌಚಾಲಯ ಕಟ್ಟಿಸದಿರುವವರ ಮನೆ ಮುಂದೆ ಧಿಕ್ಕಾರ ಕೂಗುವ ಅಭಿಯಾನ ಆರಂಭಿಸಿರುವುದಾಗಿ ಜಿಪಂ ಸಿಇಒ ಸ್ನೇಹಲ್‌ ರಾಯಮಾನೆ ಹೇಳಿದರು. ತಾಲೂಕಿನ ಅಮ್ಮಿನಬಾವಿಯಲ್ಲಿ ಮಂಗಳವಾರ ರಾತ್ರಿ ಶೌಚಾಲಯ ನಿರ್ಮಾಣ ಜಾಗೃತಿಗಾಗಿ ಗ್ರಾಮವ್ಯಾಸ್ತವ್ಯ ಮಾಡಿರುವ ಅವರು ಈ ಕುರಿತು “ಉದಯವಾಣಿ’ಯೊಂದಿಗೆ ಮಾತನಾಡಿದರು. 

ಈ ಅಭಿಯಾನದಿಂದ ಸ್ವಾಭಿಮಾನಕ್ಕಾದರೂ ಶೌಚಾಲಯ ಕಟ್ಟಿಸುವ ಭರವಸೆ ಇದೆ ಎಂದರು. ಜಿಲ್ಲೆಯನ್ನು ಅ. 2ರೊಳಗಾಗಿ ಬಯಲು ಶೌಚಮುಕ್ತ ಜಿಲ್ಲೆಯನ್ನಾಗಿಸುವ ಗುರಿ ಹೊಂದಿದ್ದೇವೆ. ಅದಕ್ಕಾಗಿ ಎಲ್ಲರೂ ಶ್ರಮಿಸುತ್ತೇವೆ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದಕ್ಕಾಗಿ ಗ್ರಾಮವ್ಯಾಸ್ತವ್ಯ ಆರಂಭಿಸಿದ್ದು, ಅಮ್ಮಿನಬಾವಿ ಗ್ರಾಮವನ್ನು ಆ. 31 ರೊಳಗಾಗಿ ಬಯಲು ಶೌಚ ಮುಕ್ತ ಗ್ರಾಮವನ್ನಾಗಿ ಮಾಡಲಾಗುವುದು ಎಂದು ತಿಳಿಸಿದರು. 

ಆ. 31ರೊಳಗಾಗಿ ಅಮ್ಮಿನಭಾವಿ ಗ್ರಾಮವನ್ನು ಬಯಲು ಬಹಿರ್ದೆಸೆ ಮುಕ್ತವಾಗಿಸಲು ಮಂಗಳವಾರವೇ ಪಣತೊಡಲಾಗಿದೆ. ಗ್ರಾಮದಲ್ಲಿ ಸುಮಾರು 1700 ಮನೆಗಳಿವೆ. ಈವರೆಗೂ ಶೌಚಾಲಯ ಕಟ್ಟಿಸದ ಸುಮಾರು 200 ಮನೆಗಳಿವೆ. ಅವರಲ್ಲಿ ಹಲವರಿಗೆ ಜಾಗದ ಸಮಸ್ಯೆ ಇದೆ.

ಇನ್ನೂ ಕೆಲವರಿಗೆ ಹಣವಿಲ್ಲ. ಉಳಿದ ಒಂದಷ್ಟು ಜನರಿಗೆ ಶೌಚಾಲಯ ಇದ್ದರೂ ಬಳಸುತ್ತಿಲ್ಲ. ಇಂತಹ ಸಂದರ್ಭದಲ್ಲಿ ಅವರ ಮನವೊಲಿಸುವ ಕೆಲಸವಾಗಬೇಕಿದೆ. ಹೀಗಾಗಿ ಜನರೊಂದಿಗೆ ಬೆರೆತು ಅವರ ಮನವೊಲಿಸಲು ಗ್ರಾಮ ವಾಸ್ತವ್ಯ ಮಾಡಲಾಗುತ್ತಿದೆ ಎಂದು ವಿವರಿಸಿದರು. 

ಬೀದಿ ನಾಟಕ, ಹಾಸ್ಯದ ಮೂಲಕ ಜಾಗೃತಿ: ಜಿಪಂ ಸಿಇಒ ಅವರ ಗ್ರಾಮ ವಾಸ್ತವ್ಯ ಹಿನ್ನೆಲೆಯಲ್ಲಿ ಗ್ರಾಪಂ ಕಾರ್ಯಾಲಯದಲ್ಲಿ ಆಯೋಜಿಸಲಾಗಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಶಂಭಯ್ಯ ಹಿರೇಮಠ ಹಾಗೂ ತಂಡದವರು ಶೌಚಾಲಯ ಜಾಗೃತಿ ಕುರಿತು ಬೀದಿ ನಾಟಕ, ಜನಪದ ಹಾಡುಗಳ ಮೂಲಕ ಗಮನ ಸೆಳೆಯಲಾಯಿತು.

ಮಹಾದೇವಿ ಸತ್ತಿಗೇರಿ ಅವರು ಹಾಸ್ಯದ ಮೂಲಕ ಶೌಚಾಲಯದ ಅಗತ್ಯ ತಿಳಿಸಿದರು. ಸರ್ಕಾರದ ಕಾರ್ಯಕ್ರಮಗಳ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು. ಜಿಪಂ ಸದಸ್ಯ ಚನ್ನಬಸಪ್ಪ ಮಟ್ಟಿ ಮಾತನಾಡಿ, ಶೌಚಾಲಯ ಇರುವ ಅಭಿಮಾನ ಎಲ್ಲರಿಗೂ ಇರಬೇಕು. ಶೌಚಾಲಯ ಕಟ್ಟಿಸುವವರನ್ನು ಅಭಿನಂದಿಸಲಾಗುವುದು ಎಂದರು. 

ಇದೇ ಸಂದರ್ಭದಲ್ಲಿ ಕೆಲ ಗ್ರಾಮಸ್ಥರು ಬಿಪಿಎಲ್‌ ಪಡಿತರ ಚೀಟಿದಾರರಿಗೆ ಮಾತ್ರವಲ್ಲ, ಎಪಿಎಲ್‌ ಕಾರ್ಡ್‌ ಹೊಂದಿರುವವರಿಗೂ ಶೌಚಾಲಯ ಕಟ್ಟಿಸಲು ಅನುದಾನ ನೀಡಬೇಕು ಎಂಬ ಬೇಡಿಕೆ ಇಟ್ಟರು. ಇವರನ್ನು ಸಮಾಧಾನ ಪಡಿಸಿದ ಅ ಧಿಕಾರಿಗಳು ಇದನ್ನು ಸರ್ಕಾರದ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು. 

ಗ್ರಾಪಂ ಅಧ್ಯಕ್ಷೆ ನೀಲವ್ವಾ ಗಾಡದ್‌, ತಾಪಂ ಅಧ್ಯಕ್ಷ ಅಧ್ಯಕ್ಷ ಮಲ್ಲಪ್ಪ ಭಾವಿಕಟ್ಟಿ, ತಾಪಂ ಸದಸ್ಯ ಸುಭಾಸ ದೇಸಾಯಿ, ಉಪ ಕಾರ್ಯದರ್ಶಿ ಎಸ್‌.ಜಿ. ಕೊರವರ, ತಾಪಂ ಇಒ ಎಸ್‌.ಎಂ. ರುದ್ರಸ್ವಾಮಿ, ಯೋಜನಾಧಿ ಕಾರಿ ಭೀಮಪ್ಪ, ಎಇಇ ಎಸ್‌.ಎನ್‌. ಗೌಡರ್‌, ಬಿಇಒ ಶ್ರೀಶೈಲ ಕರೀಕಟ್ಟಿ ಇತರರಿದ್ದರು.  

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

bs yediyurappa

Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ

1-dasdas

Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ

1-wqewqewq

Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.