ಬಣಜಿಗ ಸಮಾಜ ನಾಡಿನ ಪರಂಪರೆ ಬಸವ ತತ್ವ ಅಳವಡಿಕೊಂಡಿರುವ ಸಮಾಜ : ವಿಜಯೇಂದ್ರ

ಒಬ್ಬ ಸ್ವಾಮೀಜಿ ತಪ್ಪು ಮಾಡಿದರೆ ಎಲ್ಲರೂ ಹಾಗೆಯೇ ಇರುವುದಿಲ್ಲ : ಜಗದೀಶ್ ಶೆಟ್ಟರ್

Team Udayavani, Dec 10, 2022, 7:28 PM IST

1-sadasdasd

ನವಲಗುಂದ : ಬಣಜಿಗ ಸಮಾಜ ನಾಡಿನ ಪರಂಪರೆ ಬಸವ ತತ್ವವನ್ನು ಜೀವನದಲ್ಲಿ ಅಳವಡಿಕೊಂಡಿರುವ ಸಮಾಜ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ವಿ.ವೈ.ವಿಜಯೇಂದ್ರ ಅವರು ಹೇಳಿದರು.

ಶಂಕರ ಮಹಾವಿದ್ಯಾಲಯದ ಆವರಣದಲ್ಲಿ ಲಿಂಗೈಕ್ಯ ಈಶ್ವರಪ್ಪ ಪರುತಪ್ಪ ಅಂಗಡಿ ವೇದಿಕೆಯಲ್ಲಿ ಕರ್ನಾಟಕ ರಾಜ್ಯ ಬಣಜಿಗ ಸಮಾಜದ ಕ್ಷೇಮಾಭಿವೃದ್ದಿ ಸಂಘ ತಾಲೂಕ ಘಟಕ ನವಲಗುಂದ ಇವರ ನೂತನ ಬಣಜಿಗ ಭವನ ಉದ್ಟಾಟನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಟಾಟಿಸಿ ಮಾತನಾಡಿ ”ಬಣಜಿಗ ಸಮಾಜ ಒಗ್ಗಟ್ಟಿನಿಂದ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವುದು ಮಕ್ಕಳಿಗೆ ಮುಂದಿನ ಶಿಕ್ಷಣಕ್ಕೆ ಹುಮ್ಮಸು ನೀಡಿದಂತಾಗುತ್ತದೆ ಎಂದರು.

ಬಣಜಿಗ ಸಮಾಜ ಎಲ್ಲ ಒಳಪಂಗಡಗಳನ್ನು ಸಮನ್ವಯತೆಯಿಂದ ಬಂಧುತ್ವ ಭಾವನೆಯಿಂದ ನೋಡಿಕೊಂಡು ಹೋಗುತ್ತದೆ. ಕೃಷಿ, ವಾಣಿಜ್ಯ,ಶೈಕ್ಷಣಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿಯೂ ತನ್ನ ಛಾಪನ್ನು ಮೂಡಿಸಿದೆ. ಸಮಾಜದಲ್ಲಿ ಮಕ್ಕಳಿಗೆ ಒಳ್ಳೆಯ ಶಿಕ್ಷಣದ ಜೊತೆಗೆ ಜೀವನದಲ್ಲಿ ಬರುವಂತಹ ಸಮಸ್ಯೆಯನ್ನು ಎದುರಿಸುವ ಶಕ್ತಿ, ದೈರ್ಯವನ್ನು ಪಾಲಕರು ನೀಡಬೇಕಾಗಿದೆ ಎಂದರು.

ನಮ್ಮ ತಂದೆಯವರಾದ ಬಿ.ಎಸ್.ಯಡಿಯೂರಪ್ಪನವರ ನಾಲ್ಕು ಬಾರಿ ಮುಖ್ಯಮಂತ್ರಿಯಾಗಿ ಎಲ್ಲ ಕಷ್ಟ ನೋವುಗಳನ್ನು ಅನುಭವಿಸಿದ್ದಾರೆ ಅವುಗಳನ್ನೆಲ್ಲ ನಾವು ಕಂಡಿರುತ್ತೇವೆ. ಅವರ ರಾಜಕೀಯ ಹಾದಿಯಲ್ಲಿ ನಾವು ನಡೆಯುತ್ತಿದ್ದೇವೆ. ಮಕ್ಕಳ ಶಿಕ್ಷಣದಲ್ಲಿ ಗುರಿ ಮುಟ್ಟಿ ಒಳ್ಳೆಯ ಹೆಸರು ಪಡೆದುಕೊಳ್ಳಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಿರಂತರವಾಗಿರಲಿ ಆಧುನಿಕ ತಂತ್ರಜ್ಞಾನದಲ್ಲಿ ಮಕ್ಕಳು ಪರಂಪರೆ, ಸಂಬಂಧಗಳಿಗೂ ಬೆಲೆ ಕೊಡಬೇಕೆಂದು ಕಿವಿಮಾತು ಹೇಳಿದರು.

ಬಣಜಿಗ ಸಮಾಜದ ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರೆಸಲು ಹಾಸ್ಟೆಲ್ ಶಿಕ್ಷಣದ ಅನೇಕ ತೊಂದರೆಗಳು ಸಮಾಜದ ಅಭಿವೃದ್ದಿಗಾಗಿ ನಿಮ್ಮ ಮನೆಯ ಮಗನಾಗಿ ಹೆಗಲಿಗೆ ಹೆಗಲು ಕೊಟ್ಟು ದುಡಿಯುತ್ತೇನೆಂದು ಹೇಳಿದರು.

ಎಲ್ಲರೂ ಹಾಗೆಯೇ ಇರುವುದಿಲ್ಲ

ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಮಾತನಾಡಿ, ಬಣಜಿಗ ಸಮಾಜ ಸಮಾನತೆಗೆ ಸಾಕ್ಷಿಯಾದ ಸಮಾಜ ಎಲ್ಲ ಒಳ ಪಂಗಡಗಳನ್ನು ಒಳಗೊಂಡ ಸಮಾಜ ವಿದ್ಯಾರ್ಥಿಗಳ ಪ್ರತಿಭೆಯನ್ನು ಗುರ್ತಿಸಿ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ. ಸಮಾಜಕ್ಕೆ ಗುರುಗಳ ಅಶೀರ್ವಾದ ಅವಶ್ಯ. ಎಲ್ಲಿಯೂ ಒಬ್ಬ ಸ್ವಾಮೀಜಿ ತಪ್ಪು ಮಾಡಿದ ಪರಿಣಾಮ ಎಲ್ಲರೂ ಹಾಗೆಯೇ ಇರುವುದಿಲ್ಲವೆಂದು ಹೇಳಿದರು.

ಕೈಮಗ್ಗ ಜವಳಿ ಮತ್ತು ಸಕ್ಕರೆ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಮಾತನಾಡಿ, ಬಣಜಿಗ ಸಮಾಜದ ಶ್ರೇಯೋಭಿವೃದ್ದಿಗೆ ನಾನು ಸದಾ ಸಿದ್ದ. ಬಣಜಿಗ ಸಮಾಜ ಪಟ್ಟಣದ ವಿವಿಧ ಯೋಜನೆಗಳಿಗೆ ಮುಂದಿನ ದಿನಗಳಲ್ಲಿ ಸರಕಾರದಿಂದ ಸಹಾಯ ಸಹಕಾರ ಮಾಡುವುದಾಗಿ ಭರವಸೆ ನೀಡಿದರು.

ಗವಿಮಠದ ಶ್ರೀ ಬಸವಲಿಂಗ ಸ್ವಾಮೀಜಿ, ಅಣ್ಣಿಗೇರಿ ಸೀತಾಗಿರಿ ಆಶ್ರಮ ಡಾ.ಎ.ಸಿ.ವಾಲಿ ಗುರೂಜಿ ಮಾತನಾಡಿ ಬಣಜಿಗ ಸಮಾಜದ ಭವ್ಯವಾದ ಕಾರ್ಯಕ್ರಮವಾಗಿದೆ. ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಇದರಿಂದ ವಿದ್ಯಾರ್ಥಿಗಳ ಸಾಧನೆಯನ್ನು ಸಮಾಜ ಗುರ್ತಿಸಿ ಅವರನ್ನು ಪ್ರೋತ್ಸಾಹಿಸುವುದು ಶ್ಲಾಘನೀಯ ಬಣಜಿಗ ಸಮಾಜ ಇನ್ನು ಸಮಾಜ ಮುಖಿ ಕಾರ್ಯವನ್ನು ಮಾಡಲಿ ಎಂದು ಆಶೀರ್ವಾಚನ ನೀಡಿದರು.

ತಾಲೂಕಾ ಬಣಜಿಗ ಸಮಾಜದ ಅಧ್ಯಕ್ಷ ಅಣ್ಣಪ್ಪ ಬಾಗಿ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ರಾಜ್ಯ ಬಣಜಿಗ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಅಂದಪ್ಪ ಜವಳಿ, ಜಿಲ್ಲಾ ಹೈಕೋರ್ಟ ಜನರಲ್ ಹೆಚ್ಚುವರಿ ಅಡ್ವೋಕೇಟ್ ವಿದ್ಯಾವತಿ ಕೊಟೂರಶೆಟ್ಟರ ಬಣಜಿಗ ಸಮಾಜದ ಕುರಿತು ಮಾತನಾಡಿದರು.

ವೈಷ್ಣವಿ ಸಂಗಣ್ಣ ಹರಳಿ ಹಾಗೂ ತನುಶ್ರೀ ಮಹಾಂತೇಶ ನಾಗಾವಿ ವಿದ್ಯಾರ್ಥಿನಿಯರು ಭರತನಾಟ್ಯ ಪ್ರದರ್ಶಿಸಿದರು. ಪಲ್ಲವೆ ಶಿದ್ರಾಮಶೆಟ್ಟರ ಸಂಗಡಿಗರು ಪ್ರಾರ್ಥಿಸಿದರು.ಪ್ರಕಾಶ ಅಂಗಡಿ, ಎಸ್.ಎಮ್.ಪಟ್ಟಣಶೆಟ್ಟಿ, ಪ್ರಭಣ್ಣ ಬ್ಯಾಳಿ, ಶೇಖರ ಕವಳಿ, ಡಾ.ಬಿ.ವಿ.ಹೊಸಕೇರಿ, ರವಿ ಕಮಟಗಿ, ವೀರೇಶ ಸಂಗಳದ, ಬಸಣ್ಣ ಹೆಸರೂರ, ಈಶಣ್ಣ ಮುನವಳ್ಳಿ, ಅರುಣ ಶೀಲವಂತರ, ಫಕ್ಕೀರೇಶ ಕೋರಿ, ಬಸವರಾಜ ಮಹಾಜನಶೆಟ್ರ, ಎಸ್.ವಿ.ಅಂಗಡಿ, ವೀರಣ್ಣ ಮಳಗಿ, ಮಹೇಶ ಮುಂಡರಗಿ, ಶಂಭು ಶಿದ್ರಾಮಶೆಟ್ಟರ, ಚಂಬಣ್ಣ ಸುರಕೋಡ, ಜಗದೀಶ ಹುರಕಡ್ಲಿ, ವಿಜಯಮಹಾಂತೇಶ ನಾಗಾವಿ, ನಿಂಗಪ್ಪ ಶಿದ್ರಾಮಶೆಟ್ಟರ, ಬಾಬಣ್ಣ ಹುರಕಡ್ಲಿ ಇತರರು ಇದ್ದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

1-qeqwqwe

Kumta: ಮಾಜಿ ಶಾಸಕಿ ಶಾರದಾ ಮೋಹನ್ ಶೆಟ್ಟಿ ಮರಳಿ ಕಾಂಗ್ರೆಸ್ ಸೇರ್ಪಡೆ

4-udupi

Udupi: ರಮಾಬಾಯಿ ಕೊಚ್ಚಿಕಾರ್‌ ಪೈ ನಿಧನ

1-aaa

Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.