ಮನ-ಗಗನದಲಿ ತ್ರಿವರ್ಣ ವೈಭವ


Team Udayavani, Aug 16, 2017, 12:57 PM IST

hub5.jpg

ನವಲಗುಂದ: ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಉನ್ನತ ಹುದ್ದೆ ಪಡೆಯಲು ವಿದ್ಯಾರ್ಥಿಗಳು ಕಠಿಣ ಪರಿಶ್ರಮ ವಹಿಸಿದರೆ ಮಾತ್ರ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಲು ಸಾಧ್ಯ ಎಂದು ಶಾಸಕ ಎನ್‌.ಎಚ್‌. ಕೋನರಡ್ಡಿ ಹೇಳಿದರು. ಇಲ್ಲಿನ ಮಾಡಲ್‌ ಹೈಸ್ಕೂಲಿನ ಆವರಣದಲ್ಲಿ ತಾಲೂಕಾಡಳಿತ ಏರ್ಪಡಿಸಿದ್ದ 71ನೇ ಸ್ವಾತಂತ್ರೊತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಹೆಚ್ಚಿನ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡಲ್ಪಟ್ಟ ಲ್ಯಾಪ್‌ಟಾಪ್‌ ವಿತರಿಸಲಾಯಿತು. ತಿರ್ಲಾಪುರ ಗ್ರಾಮದ ಅಂಗವಾಡಿ ಕಾರ್ಯಕರ್ತೆ ಕವಿತಾ ಈರಡ್ಡಿ ಅವರನ್ನು ಉತ್ತಮ ಕಾರ್ಯಕರ್ತೆ ಎಂಬ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಅಳಗವಾಡಿ ಗ್ರಾಮದ ನಾರಾಯಣ ಕನಕರಡ್ಡಿ ಹಾಗೂ ಪುರಸಭೆ ನೂತನ ಅಧ್ಯಕ್ಷೆ ಅನಸೂಯಾ ಭೋವಿ ಅವರನ್ನು ಗೌರವಿಸಲಾಯಿತು. ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದವರಿಗೆ ಆರೋಗ್ಯ ಸುರಕ್ಷಾ ಕಾರ್ಡ್‌, ರೈತ ಕುಟುಂಬಗಳಿಗೆ ಮಾಸಾಶನ ಪ್ರಮಾಣಪತ್ರ ವಿತರಿಸಲಾಯಿತು. ಶಂಕರ ಕಾಲೇಜಿನ ಪ್ರೊ| ಎಸ್‌. ಎಸ್‌. ಕಾಡಮ್ಮನವರ ಉಪನ್ಯಾಸ ನೀಡಿದರು. 

ಇದಕ್ಕೂ ಮುನ್ನ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ತಹಶೀಲ್ದಾರ ನವೀನ ಹುಲ್ಲೂರ ಧ್ವಜಾರೋಹಣ ನೆರವೇರಿಸಿದರು. ಕ್ಷೇತ್ರ ಶಿಕ್ಷಣಾ ಧಿಕಾರಿ ಅಶೋಕ ಭಜಂತ್ರಿ ಸ್ವಾಗತಿಸಿದರು. ತಾಪಂ ಉಪಾಧ್ಯಕ್ಷ ಯೋಗಪ್ಪ ಗೊಲ್ಲನಾಯಕರ, ಪುರಸಭೆ ಸದಸ್ಯರಾದ ಮಂಜುನಾಥ ಜಾಧವ, ಪ್ರಕಾಶ ಶಿಗ್ಲಿ, ಜೀವನ ಪವಾರ, ಹನಮಂತಪ್ಪ ಇಬ್ರಾಹಿಂಪುರ್‌, ನಾಗರಾಜ ಭಜಂತ್ರಿ ಇತರರಿದ್ದರು. 

ವಿವಿಧೆಡೆ: ಪುರಸಭೆ ಆವರಣದಲ್ಲಿ ನೂತನ ಅಧ್ಯಕ್ಷೆ ಅನುಸೂಯಾ ಭೋವಿ ಧ್ವಜಾರೋಹಣ ನೆರವೇರಿಸಿದರು. ಮುಖ್ಯಾ ಧಿಕಾರಿ ಉಮಾ ಪಾಳೇಗಾರ, ಉಪಾಧ್ಯಕ್ಷೆ ಶೋಭಾ ಗುಡರಾದ, ಮಾಜಿ ಅಧ್ಯಕ್ಷ ರಹಿಮಾನಸಾಬ ಧಾರವಾಡ, ಮಂಜುನಾಥ ಜಾಧವ, ನಾಗರಾಜ ಭಜಂತ್ರಿ, ಜೀವನ ಪವಾರ, ರಿಯಾಜ ಪೀರಜಾದೆ ಇತರರಿದ್ದರು. 

ಪಟ್ಟಣದ ಬಸವೇಶ್ವರ ನಗರದ ಸರ್ಕಾರಿ ಹಿಪ್ರಾ ಶಾಲೆಯಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ರಾಜೇಸಾಬ ಕಿರೇಸೂರ ಧ್ವಜಾರೋಹಣ ನೆರವೇರಿಸಿದರು. ಪುರಸಭೆ ಸದಸ್ಯ ನಾಗರಾಜ ಭಜಂತ್ರಿ, ಮುಖ್ಯಾಧ್ಯಾಪಕ ಎಸ್‌.ಎಂ. ಬೆಂಚಿಗೇರಿ, ಬಸನಗೌಡ ಪಾಟೀಲ, ಬಸವರಾಜ ಹರ್ಲಾಪುರ, ಲಕ್ಷ್ಮೀ ತಿರಕೋಡಿ ಇತರರಿದ್ದರು.

ಸಹಕಾರಿ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯಾಲಯದಲ್ಲಿ ಸಂಘದ ಅಧ್ಯಕ್ಷ ಸುರೇಶ ಅಣ್ಣಿಗೇರಿ ಧ್ವಜಾರೋಹಣ ನೆರವೇರಿಸಿದರು. ಸದಸ್ಯರಾದ ಅಡಿವೆಪ್ಪ ಶಿರಸಂಗಿ, ನಾಗಪ್ಪ ಭೋವಿ, ಫಕ್ಕಿರಪ್ಪ ಶೆಲ್ಲೆಣವರ, ಮಹಾತೇಶ ಹುಬ್ಬಳ್ಳಿ ಇದ್ದರು. ವಿವೇಕಾನಂದ ಕಾನ್ವೆಂಟ್‌ ಶಾಲೆಯಲ್ಲಿ ನರಗುಂದ ಶಾಸಕ ಬಿ.ಆರ್‌.  ಯಾವಗಲ್‌ ಧ್ವಜಾರೋಹಣ ನೆರವೇರಿಸಿದರು. ಸಲೀಮ ಕಾಲಾರಿ ಇತರರಿದ್ದರು. 

ಮಧ್ಯರಾತ್ರಿ ಧ್ವಜಾರೋಹಣ: ಪಟ್ಟಣದ ನೀಲಮ್ಮ ಕೆರೆ ಮುಂಭಾಗದಲ್ಲಿ ಸೋಮವಾರ ಮಧ್ಯರಾತ್ರಿ ಯುವ ಸಂಘಟನೆ ವತಿಯಿಂದ ಧ್ವಜಾರೋಹಣ ನಡೆಯಿತು. ಪುಂಡಲೀಕ ಮುದೋಳೆ ಧ್ವಜಾರೋಹಣ ನೆರವೇರಿಸಿದರು. ಪ್ರಭು ಇಬ್ರಾಹಿಂಪುರ, ಅಪ್ಪಣ್ಣ ಹಿರಗಣ್ಣವರ, ಬಸವರಾಜ ಮೀಸಿ, ಪ್ರಕಾಶ ಪಾಚಂಗಿ, ನಾರಾಯಣ ಕುರಹಟ್ಟಿ, ಮುನ್ನಾ ಬಿಜಾಪುರ, ಸುರೇಶ ಸಾಳಂಕಿ, ಬಸವರಾಜ ಮರಲಕ್ಕಣ್ಣವರ, ಮಹೇಶ ಬೆಳ್ಳಿ ಇತರರು ಇದ್ದರು.   

ಟಾಪ್ ನ್ಯೂಸ್

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.