ಕೇಂದ್ರ ವಿತ್ತ ಸಚಿವರಿಗೆ ಪ್ರತಿಭಟನೆಯ ಸ್ವಾಗತ
Team Udayavani, Oct 6, 2019, 11:24 AM IST
ಹುಬ್ಬಳ್ಳಿ: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಪ್ರತಿಭಟನೆಯ ಸ್ವಾಗತ ದೊರೆಯಿತು.
ಕೇಂದ್ರ ಸರಕಾರ ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಮಹಿಳಾ ಕಾರ್ಯಕರ್ತರು ವಿಮಾನ ನಿಲ್ದಾಣ ಮುಂಭಾಗ ಪ್ರತಿಭಟನೆ ನಡೆಸಿ ಘೇರಾವ್ ಹಾಕಲು ಯತ್ನಿಸಿದರು. ಕೇಂದ್ರ ಸರಕಾರ, ಪ್ರಧಾನಿ ಹಾಗೂ ಹಣಕಾಸು ಸಚಿವರ ವಿರುದ್ಧ ಘೋಷಣೆ ಕೂಗಿದರು. ಪೊಲೀಸರು ಅವರನ್ನು ವಶಕ್ಕೆ ಪಡೆದು, ನಂತರ ಬಿಡುಗಡೆ ಮಾಡಿದರು.
ರಾಜ್ಯಕ್ಕೆ ನೆರೆ ಪರಿಹಾರ ನೀಡುವಲ್ಲಿ ಕೇಂದ್ರ ಸರಕಾರ ವಿಳಂಬ ಮಾಡುತ್ತಿದೆ. 1,200 ಕೋಟಿ ರೂ. ಮಧ್ಯಂತರ ಪರಿಹಾರ ಕಡಿಮೆಯಾಗಿದ್ದು, ನೆರೆ ಸಂತ್ರಸ್ತರ ಜೀವನ ರೂಪಿಸುವಲ್ಲಿ ಉದ್ದೇಶಪೂರ್ವಕವಾಗಿ ಕೇಂದ್ರ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಿದರು. ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ನೆರೆ ಸಂತ್ರಸ್ತರ ಬಗ್ಗೆ ಯಾವುದೇ ಕಾಳಜಿಯಿಲ್ಲ. ಸ್ವತಃ ವೈಮಾನಿಕ ಸಮೀಕ್ಷೆ ನಡೆಸಿ ಇಲ್ಲಿನ ಗಂಭೀರತೆ ಕಣ್ಣಾರೆ ಕಂಡಿದ್ದರೂ ಹೆಚ್ಚು ಪರಿಹಾರ ನೀಡುವಲ್ಲಿ ವಿಫಲರಾಗಿದ್ದಾರೆಂದು ಪ್ರತಿಭಟನಾಕಾರರು ಆರೋಪಿಸಿದರು. ಮಹಿಳಾ ಕಾಂಗ್ರೆಸ್ನ ದೀಪಾ ಗೌರಿ, ಅಕ್ಕಮ್ಮ ಕಂಬಳಿ, ಕವಿತಾ ಪವಾರ, ಜಗದೇವಿ ಇನ್ನಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು