ಮಹಿಳೆಯನ್ನು ಇಂದಿಗೂ ಕೀಳಾಗಿ ಕಾಣಲಾಗುತ್ತಿದೆ: ವಿಷಾದ


Team Udayavani, Jun 25, 2017, 2:25 PM IST

hub2.jpg

ಹುಬ್ಬಳ್ಳಿ: ಪುರುಷ ಪ್ರಧಾನ ಸಮಾಜದಲ್ಲಿ ಮಹಿಳೆಯರು ಎಲ್ಲ ರಂಗದಲ್ಲಿ ಕಾರ್ಯನಿರ್ವಹಿಸಲು ಸಮರ್ಥರಾಗಿದ್ದರೂ ಅವರನ್ನು ಇಂದಿಗೂ ಕೀಳಾಗಿಯೇ ಕಾಣಲಾಗುತ್ತಿದೆ ಎಂದು ಧಾರವಾಡ ಕೃಷಿ ವಿವಿಯ ವಿಸ್ತರಣೆ ಮತ್ತು ಸಂವಹನ ವಿಭಾಗದ ಮುಖ್ಯಸ್ಥೆ ಡಾ| ಶೋಭಾ ನಾಗನೂರ ವಿಷಾದ ವ್ಯಕ್ತಪಡಿಸಿದರು. 

ಇಲ್ಲಿನ ಗೋಕುಲ ರಸ್ತೆಯ ಗೋಕುಲ ಗಾರ್ಡನ್‌ದಲ್ಲಿ ಅಖೀಲ ಕರ್ನಾಟಕ ಗ್ರಾಮೀಣ ಬ್ಯಾಂಕ್‌ ನೌಕರರ ಒಕ್ಕೂಟ ಶನಿವಾರ ಆಯೋಜಿಸಿದ್ದ 10ನೇ ತ್ತೈವಾರ್ಷಿಕ ಮಹಾಧಿವೇಶನದ ಮಹಿಳಾ ಉದ್ಯೋಗಿಗಳ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆ ಯಾವುದೇ ಫಲಾಪೇಕ್ಷೆ, ಸಂಬಳವಿಲ್ಲದೆ ಮನೆಗೆಲಸ ಮಾಡುತ್ತಾಳೆ.

ಅಲ್ಲಿಂದಲೇ ಅವಳ ಪ್ರಾಥಮಿಕ ಕೆಲಸ ಆರಂಭವಾಗುತ್ತದೆ. ಅವಳು ಎಂತಹ ಹುದ್ದೆ, ಸ್ಥಾನಮಾನ ಹೊಂದಿದ್ದರೂ ಮನೆಗೆಲಸ ಮಾಡುತ್ತಾಳೆ. ತನಗೆ ವಹಿಸಿದ ಕಾರ್ಯವನ್ನು ಸಮರ್ಥವಾಗಿ ನಿಭಾಯಿಸಬಲ್ಲಳು. ಪುರುಷರಿಗಿಂತ ಹೆಚ್ಚಿನ ಬದ್ಧತೆ ಹೊಂದಿದ್ದಾಳೆ. ಮಹಿಳೆಯರು ತಮಗಿಂತಲೂ ಉತ್ತಮ ಕಾರ್ಯಮಾಡಬಲ್ಲರು ಎಂಬುದನ್ನು ಪುರುಷರು ಒಪ್ಪಿಕೊಳ್ಳುವುದಿಲ್ಲ. ಅಲ್ಲದೆ ಅವಳಿಗೆ ಅವಕಾಶ ಕೊಡುವುದಿಲ್ಲ. 

ಭಾರತ ಮಾತ್ರವಲ್ಲ ಅಮೆರಿಕೆಯಂತಹ ಮುಂದುವರಿದ ದೇಶಗಳಲ್ಲೂ ಮಹಿಳೆಗೆ ದುಡಿಮೆಗೆ ತಕ್ಕ ಮನ್ನಣೆ ಸಿಗುತ್ತಿಲ್ಲ. ಅವಳಿಗೆ ಹೆಚ್ಚಿನ ಜವಾಬ್ದಾರಿ, ಸ್ಥಾನಮಾನ ನೀಡುವಾಗ ತಾರತಮ್ಯ ಮಾಡಲಾಗುತ್ತಿದೆ ಎಂದರು. ಭಾರತೀಯ ಜೀವವಿಮಾ ನಿಗಮದ ಕಾರ್ಮಿಕ ಸಂಘಟನೆಯ ಬೆಂಗಳೂರಿನ ವಿಭಾಗೀಯ ಕಾರ್ಯದರ್ಶಿ ಎಸ್‌.ಕೆ. ಗೀತಾ ಮಾತನಾಡಿ, ಮಹಿಳೆಯರಿಗೆ ದುಡಿಮೆ ಜೊತೆ ಅವರನ್ನು ಗುರುತಿಸುವಂತಾದಾಗ ಮಾತ್ರ ಅವರಿಗೆ ಗೌರವ ಸಿಗುತ್ತದೆ.

ಮಹಿಳೆ ಮತ್ತು ಪುರುಷರ ನಡುವಿನ ಭೇದ ಜೈವಿಕವಾಗಿ ಅಲ್ಲ. ಸಾಮಾಜಿಕವಾಗಿಯೂ ಇದೆ. ಮಹಿಳೆಯರ ಸಮಸ್ಯೆಗಳನ್ನು ವೈಯಕ್ತಿಕವಾಗಿ ಪರಿಗಣಿಸಲಾಗುತ್ತಿದೆ ವಿನಃ ಸಮುದಾಯವಾಗಿ ಕಾಣುತ್ತಿಲ್ಲ. ಉದಾರೀಕರಣದ ನಂತರ ಮಹಿಳೆಯರಿಗೆ ಉದ್ಯೋಗ ಸೃಷ್ಟಿ ಆಯಿತು. ಜೊತೆಗೆ ಅವಳು ಉದ್ಯೋಗ ಮಾಡದಷ್ಟು ಸಮಸ್ಯೆಗಳು ಹುಟ್ಟಿಕೊಂಡಿವೆ ಎಂದರು. 

ಮಹಿಳೆಯ ಸೌಂದರ್ಯವನ್ನೆ ಪ್ರಧಾನವಾಗಿಟ್ಟುಕೊಂಡು ಮಾರುಕಟ್ಟೆ ಶಕ್ತಿಗಳು ಅವಳ ಬೌದ್ಧಿಕ ಚಿಂತನೆ ಕಡೆಗಣಿಸುತ್ತಿವೆ. ಮಾರುಕಟ್ಟೆಗಳು ನಮ್ಮನ್ನು ಗ್ರಾಹಕರನ್ನಾಗಿ ಮಾತ್ರ ಮಾಡಿವೆ ವಿನಃ ಜವಾಬ್ದಾರಿಯುತ ಪ್ರಜೆಗಳನ್ನಾಗಿ ಬೆಳೆಸಲು ಬಿಡುತ್ತಿಲ್ಲ. ಮಹಿಳೆಯರು ಸಾಮರಸ್ಯವಾಗಿ ಇಲ್ಲ, ವ್ಯಕ್ತಿತ್ವ ಹೊಂದಿಲ್ಲವೆಂದು ಬಿಂಬಿಸಲಾಗುತ್ತಿದೆ. 

ಗರ್ಭಿಣಿ ಸಹೋದ್ಯೋಗಿಗಳನ್ನು ಪುರುಷರು ಬಲು ತಾತ್ಸಾರದಿಂದ ನೋಡುತ್ತಾರೆ. ಹೆಣ್ಣಿನ ತಾಯ್ತನವೇ ಮುಂದಿನ ಪೀಳಿಗೆ, ಸಮಾಜ ಸೃಷ್ಟಿಸುವುದಾಗಿದೆ ಎಂಬುದನ್ನು ಸಮಾಜ ಏಕೆ ತಿಳಿದುಕೊಳ್ಳುತ್ತಿಲ್ಲವೆಂದು ಕಳವಳ ವ್ಯಕ್ತಪಡಿಸಿದರು. ಎಕೆಜಿಬಿಇಎಫ್ ಅಧ್ಯಕ್ಷ ಎಚ್‌. ನಾಗಭೂಷಣರಾವ್‌ ಅಧ್ಯಕ್ಷತೆ ವಹಿಸಿದ್ದರು.

ಉಪ ಮಹಾಪೌರ ಲಕ್ಷ್ಮೀಬಾಯಿ ಬಿಜವಾಡ, ಎಐಆರ್‌ಆರ್‌ಬಿಇಎ ಮಹಾ ಪ್ರಧಾನ ಕಾರ್ಯದರ್ಶಿ ಅಬ್ದುಲ್‌ ಸಯೀದ್‌ ಖಾನ್‌, ಎನ್‌ಎಫ್‌ಆರ್‌ಆರ್‌ಬಿಓಎ ಅಧ್ಯಕ್ಷ ಶಗುನ್‌ ಶುಕ್ಲಾ, ಸ್ವಾಗತ ಸಮಿತಿ ಸಂಚಾಲಕ ವಸಂತ ಬನ್ನಿಗೋಳ, ಎಕೆಜಿಬಿಇಎಫ್‌ ಪ್ರಧಾನ ಕಾರ್ಯದರ್ಶಿ ಗಣಪತಿ ಹೆಗಡೆ ಮೊದಲಾದವರಿದ್ದರು. ಕೆವಿಜಿ ಬ್ಯಾಂಕ್‌ ಹಿರಿಯ ವ್ಯವಸ್ಥಾಪಕಿ ಎಸ್‌.ಎಸ್‌. ಮಣ್ಣೂರ ಸ್ವಾಗತಿಸಿದರು. ಮಂಜುಳಾ ಡಿ. ಪ್ರಾರ್ಥಿಸಿದರು. ಅಶ್ವಿ‌ನಿ ಬಡಿಗೇರ ನಿರೂಪಿಸಿದರು.  

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.