ಮತಕ್ಕಾಗಿ ಕಣ್ಣೀರು ನನ್ನ ರಕ್ತದಲ್ಲಿಯೇ ಇಲ್ಲ: ಡಿಕೆಶಿ

•ಶಿವಳ್ಳಿ ಜತೆಗಿನ ಬಾಂಧವ್ಯ ನೆನೆದು ಭಾವುಕ ಆಗಿದ್ದೆ

Team Udayavani, May 11, 2019, 9:39 AM IST

hubali-tdy-2..

ಹುಬ್ಬಳ್ಳಿ: ಸಚಿವ ಡಿಕೆಶಿ ವರೂರಿನ ಜೈನ ಮುನಿ ಭೇಟಿ ಮಾಡಿ ಆಶೀರ್ವಾದ ಪಡೆದರು.

ಹುಬ್ಬಳ್ಳಿ: ದಿ| ಸಿ.ಎಸ್‌.ಶಿವಳ್ಳಿ ಅವರೊಂದಿಗಿನ ಬಾಂಧವ್ಯ ಸ್ಮರಿಸಿಕೊಂಡು ಕಣ್ಣೀರು ಹಾಕಿದ್ದೇನೆ ವಿನಃ ಮತಗಳಿಕೆಗಾಗಿ ಅಲ್ಲವೇ ಅಲ್ಲ. ನನ್ನ ಮೇಲೆ 84 ಬಾರಿ ಐಟಿ ದಾಳಿ ನಡೆದಾಗಲೂ ಹನಿ ಕಣ್ಣೀರು ಹಾಕಿಲ್ಲ. ಅದು ನನ್ನ ರಕ್ತದಲ್ಲಿಯೇ ಇಲ್ಲ ಎಂದು ಸಚಿವ ಡಿ.ಕೆ.ಶಿವಕುಮಾರ ತಿಳಿಸಿದರು.

ಇಲ್ಲಿನ ಕಾಟನ್‌ ಕೌಂಟಿ ಕ್ಲಬ್‌ನಲ್ಲಿ ಹಾಲಿ-ಮಾಜಿ ಸಚಿವರು, ಶಾಸಕರು, ಕೆಪಿಸಿಸಿ ಪದಾಧಿಕಾರಿಗಳ ಹಾಗೂ ಪ್ರಮುಖರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ.ಎಸ್‌.ಶಿವಳ್ಳಿ ಕ್ಷೇತ್ರದಲ್ಲಿ ಇಷ್ಟೊಂದು ಪ್ರೀತಿ ಗಳಿಸಿದ್ದಾನೆಂದು ಆತನನ್ನು ನೆನಪಿಸಿಕೊಂಡು ಮನುಷ್ಯತ್ವದ ನೆಲೆಯಲ್ಲಿ ಭಾವುಕನಾಗಿದ್ದೇ ಹೊರತು, ಬಿಜೆಪಿಯವರು ಆರೋಪಿಸುವಂತೆ ಮತಕ್ಕಾಗಿ ಕಣ್ಣೀರು ಹಾಕುವ ಜಾಯಮಾನ ನನ್ನದು ಅಲ್ಲವೇ ಅಲ್ಲ ಎಂದರು.

ಶಾಸಕರ ಖರೀದಿ ಸ್ಪಷ್ಟಪಡಿಸಲಿ: ಸಚಿವ ಡಿ.ಕೆ.ಶಿವಕುಮಾರ ಅವರು ಕುಂದಗೋಳ ಕ್ಷೇತ್ರದಲ್ಲಿ ನಮ್ಮ ಕಾರ್ಯಕರ್ತರ ಸೆಳೆಯಲು ಮುಂದಾದರೆ ಪರಿಸ್ಥಿತಿ ನೆಟ್ಟಗಿರದು ಎಂಬ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರು ನಮ್ಮ ಶಾಸಕರನ್ನೇ ಸೆಳೆಯಲು ಮುಂದಾಗಿದ್ದಾರಲ್ಲ. 104 ಶಾಸಕರನ್ನು ಹೊಂದಿದ ಬಿಜೆಪಿಯವರು 118 ಶಾಸಕರನ್ನಾಗಿಸಲು ಯತ್ನಿಸುತ್ತಿರುವುದ್ಯಾಕೆ ಹಾಗೂ ಹೇಗೆ ಎಂಬುದನ್ನು ಶೆಟ್ಟರ ಮೊದಲು ಸ್ಪಷ್ಟಪಡಿಸಲಿ ಎಂದು ತಿರುಗೇಟು ನೀಡಿದರು.

ಬಿಜೆಪಿ ಕಾರ್ಯಕರ್ತರಿಗೆ ನಾನು ಆಮಿಷವೊಡ್ಡಿದ್ದೇನೆ ಎಂಬುದು ಬಿಜೆಪಿ ನಾಯಕರಿಗೆ ಖಚಿತವಾಗಿದ್ದರೆ, ಸಾಕ್ಷ್ಯಗಳನ್ನು ಬಹಿರಂಗ ಪಡಿಸಲಿ, ಚುನಾವಣಾ ಆಯೋಗಕ್ಕೆ ದೂರು ನೀಡಲಿ. ಎಲ್ಲರನ್ನು ಮತ ಕೇಳುವ ಹಕ್ಕು ನಮಗಿದೆ. ಜೆಡಿಎಸ್‌-ಬಿಜೆಪಿಯವರಿಗೂ ಮತಯಾಚಿಸುತ್ತೇವೆ. ಅಷ್ಟೇ ಯಾಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರು ಕುಂದಗೋಳ ಕ್ಷೇತ್ರದ ಮತದಾರರಾಗಿದ್ದರೆ ಅವರನ್ನು ಸಹ ಕಾಂಗ್ರೆಸ್‌ಗೆ ಮತ ಹಾಕಿ ಎಂದು ಕೇಳುತ್ತಿದ್ದೆ ಎಂದರು.

ನಮ್ಮ ಪರ ಉತ್ತಮ ವಾತಾವರಣ: ಪಕ್ಷದ ಪ್ರಮುಖರು ಹಾಗೂ ಕೆಪಿಸಿಸಿ ಪದಾಧಿಕಾರಿಗಳು ಕುಂದಗೋಳ ಕ್ಷೇತ್ರದ ಕುರಿತಾದ ವರದಿ ನೀಡಿದ್ದು. ಕ್ಷೇತ್ರದಲ್ಲಿ ನಮ್ಮ ಪರ ಉತ್ತಮ ವಾತಾವರಣ ಇದೆ ಎಂಬುದು ಸ್ಪಷ್ಟವಾಗಿದೆ. ಇದೊಂದು ಸಿಹಿ ಸುದ್ದಿಯಾಗಿದೆ ಎಂದರು.

ಕುಂದಗೋಳ ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿ ಕುಸುಮಾವತಿ ಶಿವಳ್ಳಿ ಅವರ ಪರ ಜೆಡಿಎಸ್‌ ನಾಯಕರು ಕೆಲಸ ಮಾಡುತ್ತಿದ್ದಾರೆ. ಕಾರ್ಯತಂತ್ರ ಕುರಿತು ಎರಡು ಪಕ್ಷಗಳವರು ಸೇರಿಯೇ ಚರ್ಚಿಸುತ್ತೇವೆ. ಕೆಲವರಿಗೆ ಅಸಮಾಧಾನ ಇರಬಹುದು ಅದನ್ನು ಸರಿಪಡಿಸುತ್ತೇವೆ ಎಂದರು.

ಪಕ್ಷ-ಸರಕಾರದ ಮೇಲೆ ಕೊಲೆ ಆರೋಪ: ಸಿ.ಎಸ್‌.ಶಿವಳ್ಳಿ ಅವರು ಕಾಂಗ್ರೆಸ್‌ ಹಾಗೂ ಸಮ್ಮಿಶ್ರ ಸರಕಾರದ ಕಿರುಕುಳದಿಂದಲೇ ಮೃತಪಟ್ಟಿದ್ದಾರೆ ಎಂದು ಶ್ರೀರಾಮುಲು ಅವರು ಪಕ್ಷ ಹಾಗೂ ಸಮ್ಮಿಶ್ರ ಸರಕಾರ ಮೇಲೆ ಕೊಲೆ ಆರೋಪ ಮಾಡಿದ್ದಾರೆ. ಇಂತಹ ಗಂಭೀರ ಆರೋಪ ಮಾಡಿ ಇದೀಗ ಆ ರೀತಿ ಹೇಳಿಲ್ಲ ಎಂದು ಸ್ಪಷ್ಟನೆ ನೀಡಿದರೆ ಏನು ಪ್ರಯೋಜನ ಎಂದು ಶಿವಕುಮಾರ ಪ್ರಶ್ನಿಸಿದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Electric shock: ಯುವಕನ ಸಾವು

Electric shock: ಯುವಕನ ಸಾವು

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.