ಅಂತರಂಗದಲ್ಲಿ ಸದಾ ಇರುತ್ತೆ ಬೆಳಕಿನ ಮಿಡಿತ


Team Udayavani, Apr 10, 2017, 1:29 PM IST

hub4.jpg

ಧಾರವಾಡ: ತಲೆಮಾರು ಹಾಗೂ ಕಾಲಮಾನ ಬದಲಾದಂತೆ, ನೋಟಗಳು ಬದಲಾದಂತೆ ವಿಚಾರಗಳೂ ಬದಲಾಗುತ್ತವೆ. ಆದರೆ ಅಂತರಂಗದಲ್ಲಿ ಬೆಳಕಿನ ಮಿಡಿತ ಸದಾ ಇರುತ್ತದೆ ಎಂದು ಹಿರಿಯ ಸಾಹಿತಿ ಪ್ರೊ| ಚಂದ್ರಶೇಖರ ಪಾಟೀಲ ಹೇಳಿದರು. 

ನಗರದ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುತ್ಛಯದಲ್ಲಿ ರಂಗಧ್ವನಿ-17ರ ಪ್ರಯುಕ್ತ ಹಮ್ಮಿಕೊಂಡಿದ್ದ ರಾಷ್ಟ್ರೀಯ ನಾಟಕೋತ್ಸವ ವಿಚಾರ ಸಂಕಿರಣ “ರಂಗಾಭಿನಯ: ಮಾತುಕತೆ, ಮಾಟ, ಮನನ’ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಇಂದಿನ ಪೀಳಿಗೆಗೆ ತಲೆ ಕೆಡೆಸುವಂತ ಮನ ಕುಲುಕುವಂತಹ ವಿಷಯಗಳ ಬಗ್ಗೆ ತಿಳಿಯುವಲ್ಲಿ ಶ್ರಮಿಸಬೇಕಿದೆ ಎಂದರು. 

ಕಾಲ ಬದಲಾದಂತೆ ಜನರ ನಿರೀಕ್ಷೆ, ಸಂಸ್ಕೃತಿ ಸಹಜವಾಗಿ ಬದಲಾಗುತ್ತದೆ. ಅದೇ ರೀತಿ ಕಲಾವಿದರ ನಟನೆ ಬದಲಾಗುತ್ತಿವೆ. ಜೊತೆಗೆ ರಂಗಭೂಮಿ ಬದುಕಿನ ಧ್ವನಿಯಾಗುತ್ತಿದೆ. ರಂಗಭೂಮಿಯಲ್ಲಿ ನಟಿಸುವ ಕಲಾವಿದನಿಗೆ ಬದ್ಧತೆ, ಶ್ರದ್ಧೆ ಹಾಗೂ ಕಾಯಕದ ಮನೋಭಾವ ಇರಬೇಕು. ಒಬ್ಬ ರಂಗಭೂಮಿ ಕಲಾವಿದ ಸಮಾಜದ ವಿವಿಧ ಪಾತ್ರಗಳನ್ನು ಮಾಡಬಲ್ಲ. ಅದಕ್ಕೆ ಸಾಕಷ್ಟು ಅನುಭವ ಇರುವ ರಂಗಭೂಮಿ ತಜ್ಞರ ಮಾರ್ಗದರ್ಶನ ಪಡೆದುಕೊಳ್ಳಬೇಕು. 

ಆಗ ಕಲಾವಿದ ಯಶಸ್ವಿ ಹೊಂದಲು ಸಾಧ್ಯವಿದೆ ಎಂದರು. ಜಗತ್ತಿನ ಚಲನಶೀಲತೆ ಸ್ಥಗಿತಗೊಂಡಿದೆ ಎಂದು ಕೆಲವರು ಹೇಳುತ್ತಾರೆ. ಆದರೆ ಇಂದಿನ ಯುವ ಪೀಳಿಗೆಯ ತಲೆ ಕೆಡಿಸಿದಂತ ಹಾಗೂ ಹೃದಯ ಕದ್ದಿರುವ ವಿಷಯ ಗಮನಿಸಿದರೆ ಭವಿಷ್ಯ ಕುರಿತು ನಿರಾಶರಾಗಬೇಕಿಲ್ಲ ಎಂದೆನಿಸುತ್ತದೆ.

ಶಿವಮೊಗ್ಗದಲ್ಲಿ ಈಚೆಗೆ ನಡೆದ ದಕ್ಷಿಣಾಯಣ ಹಾಗೂ ಇಲ್ಲಿನ ರಂಗಾಯಣದಲ್ಲಿ ನಡೆಯುತ್ತಿರುವ ರಾಷ್ಟ್ರೀಯ ನಾಟಕೋತ್ಸವದಲ್ಲಿ ಯುವಕರ ಪಾಲುದಾರಿಕೆ ಆಶಾಭಾವ ಮೂಡಿಸುವಂತಿದೆ ಎಂದು ಅಭಿಪ್ರಾಯಪಟ್ಟರು. ರಂಗ ಸಮಾಜದ ಸದಸ್ಯ ಡಾ| ಕೆ.ವೈ. ನಾರಾಯಣಸ್ವಾಮಿ ಮಾತನಾಡಿ, ಆಧುನಿಕ ಜಗತ್ತಿನಲ್ಲಿ ರಂಗ ಚಟುವಟಿಕೆ ಹೆಚ್ಚಾಗಿದ್ದರೂ, ರಂಗ ಸಂಸ್ಕೃತಿ ಮರೆಯಾಗುತ್ತಿರುವ ಆತಂಕ ಎದುರಾಗಿದೆ.

ಸಾಹಿತ್ಯದ ಹಾಗೂ ರಂಗಭೂಮಿಯ ವಸ್ತುಗಳಿಂದ ಬದುಕಿಗೆ ಯಾವುದೇ ಅರ್ಥವಿಲ್ಲ ಎಂಬ ಸಂದೇಶವನ್ನು ರಾಜಕೀಯ ವ್ಯಕ್ತಿಗಳು, ಮಾಧ್ಯಮಗಳನ್ನು ನಿಯಂತ್ರಿಸುತ್ತಿರುವ ಧಣಿಗಳು ಸಾರುತ್ತಿದ್ದಾರೆ. ಹೀಗಾಗಿ ಸುಮಾರು ಮೂರು ದಶಕಗಳ ಹಿಂದೆ ಇದ್ದ ರಂಗ ಸಂಸ್ಕೃತಿ ಇಂದು ಮರೆಯಾಗುತ್ತಿದೆ ಎಂದು ವಿಷಾದಿಸಿದರು. 

ಲವಕುಮಾರ, ಟಿ.ಎಚ್‌. ಸಂಧ್ಯಾರಾಣಿ, ಬಸವರಾಜ ಹೂಗಾರ ಹಾಗೂ ರಜನಿ ಗರುಡ ಇದ್ದರು. ವಿಚಾರ ಸಂಕಿರಣದ ಕೊನೆಯ ದಿನವಾದ ರವಿವಾರ ಪುದುಚೇರಿಯ ವಿಶ್ವವಿದ್ಯಾಲಯದ ವಿದ್ಯಾರ್ಥಿನಿ ಸವಿತಾ ರಾಣಿ ಅವರು ಪ್ರಸ್ತುತಪಡಿಸಿದ ರೆಸ್ಟ್‌ನೆಸ್‌ ಇನ್‌ ಪೀಸ್‌ (ರಿಪ್‌) ಎಂಬ ಏಕವ್ಯಕ್ತಿ ರಂಗಪ್ರಯೋಗದಲ್ಲಿ ಮಹಿಳೆಯರ ಜೀವನ ಚೂರಾಗಿ ಚಡಪಡಿಸುವುದನ್ನು ರಂಗದ ಮೇಲೆ ಪ್ರಾತ್ಯಕ್ಷಿಕೆ ರೂಪದಲ್ಲಿ ಪ್ರಸ್ತುತಪಡಿಸಿದರು.

ಚಂಪಾ ಶೆಟ್ಟಿ ಮತ್ತು ತಂಡದವರು “ಅಕ್ಕು ಕಥಾಭಿನಯ’ ಎಂಬ ಮೂರು ಕಥೆಗಳನ್ನು ಒಳಗೊಂಡ ನಾಟಕವನ್ನು ಸಾದರ ಪಡಿಸಿದರು. ಇದರೊಂದಿಗೆ ಚಂಪಾ ಶೆಟ್ಟಿ ಅವರು ಅದರ ಪ್ರಾತ್ಯಕ್ಷಿಕೆ ನೀಡಿದರು. ಇದಾದ ನಂತರ ಹೆಗ್ಗೊàಡಿನ ನೀನಾಸಂ ತಂಡದಿಂದ “ಬಾಬುಗಿರಿ, ತಂಡ’ ಎಂಬ ಟ್ಯಾಗೋರರ “ಬಾಬೂಸ್‌ ಆಫ್‌ ನಯಂಜೂರ್‌ ಮತ್ತು ಮೈ ಲಾಡ್‌ ದ ಬೇಬಿ’ ಎಂಬ ಎರಡು ಕಥೆಗಳ ರಂಗರೂಪವನ್ನು ಪ್ರಸ್ತುಪಡಿಸಿದರು. ಇದಕ್ಕೂ ಮೊದಲು “ಕಾಯದ ಸತ್ಯ’ ವಿಷಯ ಕುರಿತು ಪುತ್ತೂರಿನ ಲಕ್ಷಿಶ ತೋಳ್ಪಾಡಿ ತಮ್ಮ ಅನಿಸಿಕೆ ಹಂಚಿಕೊಂಡರು.  

ಟಾಪ್ ನ್ಯೂಸ್

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

Heavy Rain 10 ಜಿಲ್ಲೆಗಳ 11 ನದಿಗಳಲ್ಲಿ  ಪ್ರವಾಹ ಭೀತಿ

rain 21

Heavy Rain; ಬೆಳಗಾವಿ, ಧಾರವಾಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಶನಿವಾರ ರಜೆ

Hubli: ಬಂಧಿತ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ… ಆರೋಪಿ ಕಾಲಿಗೆ ಗುಂಡೇಟು

Hubballi: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ… ಆರೋಪಿ ಕಾಲಿಗೆ ಗುಂಡೇಟು

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Uttara Karnataka; ನದಿಗಳ ಅಬ್ಬರಕ್ಕೆ ಉತ್ತರದಲ್ಲಿ “ನೆರೆ’ ಹೊರೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

Hubli; ಕರ್ತವ್ಯ ಬಹಿಷ್ಕರಿಸಿ ಪಾಲಿಕೆ ಕಚೇರಿ ಸಿಬ್ಬಂದಿ ಪ್ರತಿಭಟನೆ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.