ದೇವೇಗೌಡರನ್ನು ಭೇಟಿ ಮಾಡಿದ್ದರಲ್ಲಿ ಯಾವುದೇ ರಾಜಕೀಯವಿಲ್ಲ: ಸಿಎಂ ಬೊಮ್ಮಾಯಿ
Team Udayavani, Aug 7, 2021, 5:23 PM IST
ಹುಬ್ಬಳ್ಳಿ: ಸಚಿವ ಆನಂದ ಸಿಂಗ್ ನನ್ನ ಹಳೆಯ ಸ್ನೇಹಿತ. ಖಾತೆ ಅಸಮಾಧಾನ ಬಗ್ಗೆ ಮಾತನಾಡುವೆ, ಅವರು ಯಾವ ಖಾತೆ ಕೇಳಿದ್ದರು ಎನ್ನುವುದನ್ನು ಬಹಿರಂಗ ಪಡಿಸಲು ಆಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶನಿವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟ ರಚನೆ ಆದಾಗ ಅಸಮಾಧಾನ ಸಹಜ. ಪ್ರೀತಂ ಗೌಡ ಯುವ ಉತ್ಸಾಹಿ ಶಾಸಕ. ಅವರು ಕೂಡ ನನ್ನ ಯುವ ಸ್ನೇಹಿತ. ಅವರು ಯಾವುದೇ ರೀತಿ ತಿಳಿದುಕೊಳ್ಳೋದು ಬೇಡ. ಉತ್ಸಾಹದಲ್ಲಿ ಹೇಳಿಕೆ ನೀಡಿದ್ದಾರೆ. ಮಾಜಿ ಪ್ರಧಾನಿ ದೇವೆಗೌಡರನ್ನು ಭೇಟಿ ಮಾಡಿದ್ದರಲ್ಲಿ ಯಾವುದೇ ರಾಜಕೀಯವಿಲ್ಲ. ಅಲ್ಲಿ ಯಾವುದೇ ರಾಜಕೀಯ ಚರ್ಚೆಯಾಗಿಲ್ಲ ಎಂದರು.
ಇದನ್ನೂ ಓದಿ:ಹೊಂದಾಣಿಕೆ ಮಾಡಿಕೊಂಡಿದ್ದರೆ ಸರ್ಕಾರನೇ ಉರುಳಿಸಬಹುದಿತ್ತು: ಪ್ರೀತಂ ಗೌಡಗೆ HDK ತಿರುಗೇಟು
ಕಳೆದ 15 ವರ್ಷದಿಂದ ಬಿಜೆಪಿಯಲ್ಲಿದ್ದೇನೆ. ನಾನು ಬಿಜೆಪಿಯ ಅಪ್ಪಟ ಕಾರ್ಯಕರ್ತನು ಹೌದು. ಬಿಜೆಪಿಯ ಸಿಎಂ ಕೂಡಾ ಹೌದು. ಬೊಮ್ಮಾಯಿ ಸರ್ಕಾರ ಜನತ ಪರಿವಾರ ಸರಕಾರದಂತಿದೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆ ರೀತಿ ಅಸಂಬದ್ಧ ಹೇಳಿಕೆ ನೀಡಬಾರದು ಎಂದರು.
ಮಾಜಿ ಶಾಸಕ ರಾಜಶೇಖರ ಸಿಂಧೂರ ಸಾವಿನಿಂದ ಬಹಳ ದುಖಃವಾಗಿದೆ. ನಾನು ಓರ್ವ ಆತ್ಮೀಯ ಗೆಳೆಯನನ್ನು ಕಳೆದುಕೊಂಡಿದ್ದೇನೆ. ವೈಯಕ್ತಿವಾಗಿಯೂ ನನಗೆ ಬಹಳ ನಷ್ಟವಾಗಿದೆ. ಶಿಗ್ಗಾವಿ-ಸವಣೂರು ಕ್ಷೇತ್ರದ ಅಭಿವೃದ್ಧಿ ಬಗ್ಗೆ ಕನಸು ಕಂಡಿದ್ದರು. ಅವರ ಅಂತ್ಯಕ್ರಿಯೆಗೆ ಹೋಗುತ್ತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
MUST WATCH
ಹೊಸ ಸೇರ್ಪಡೆ
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು