ಲಸಿಕೆ ಬಗ್ಗೆ ಅನಗತ್ಯ ಭಯ ಬೇಡ
Team Udayavani, Jan 4, 2022, 8:05 PM IST
ಹುಬ್ಬಳ್ಳಿ: ಇಲ್ಲಿನ ಗೋಕುಲ ರಸ್ತೆಯಲ್ಲಿನ ಡಾ|ಆರ್ .ಬಿ.ಪಾಟೀಲ ಮಹೇಶ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ 15-18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಕಾರ್ಯ ಕೈಗೊಳ್ಳಲಾಯಿತು.
ಪಾಲಿಕೆ ವಲಯ ಕಚೇರಿ ಸಹಾಯಕ ಆಯುಕ್ತ ಎಸ್.ಸಿ.ಬೇವೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳು ಭಯ ಪಡದೆ ಲಸಿಕೆ ಪಡೆಯುವ ಮೂಲಕ ದೇಶವನ್ನು ಕೊರೊನಾ ಮುಕ್ತಗೊಳಿಸುವಲ್ಲಿ ಭಾಗಿಯಾಗಬೇಕು. ಲಸಿಕೆ ಬಗ್ಗೆ ಅನಗತ್ಯ ಭಯ ಬೇಡ ಎಂದರು.
ಹೆಗ್ಗೇರಿ ಆಸ್ಪತ್ರೆಯ ವೈದ್ಯಾಧಿಕಾರಿ ಡಾ| ಎಂ.ವಿಜಯಲಕ್ಷ್ಮೀ ಮಾತನಾಡಿ, ಲಸಿಕೆಯಿಂದ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಯಾವುದೇ ಭಯ ಪಡದೆ ಲಸಿಕೆ ಪಡೆಯಬೇಕೆಂದರು. ಕಾಲೇಜಿನ ಸುಮಾರು 711 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಯಿತು. ಆಡಳಿತ ಮಂಡಳಿಯ ರಾಜಾ ದೇಸಾಯಿ, ಧಾರವಾಡ ಜಿಲ್ಲಾ ಮುಖ್ಯ ವೈದ್ಯಾಧಿಕಾರಿ ಡಾ|ಪ್ರವೀಣ ಗೌರಿ, ಉಪ ಪ್ರಾಂಶುಪಾಲ ರಮೇಶ ಹೊಂಬಾಳೆ ಇನ್ನಿತರರು ಇದ್ದರು. ಪ್ರಾಂಶುಪಾಲ ಎಚ್.ಕೆ.ರಾಮ ಮೋಹನ ಸ್ವಾಗತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ