ಸರ್ಕಾರಿ ಶಾಲಾ-ಕಾಲೇಜುಗಳ ದಾಖಲಾತಿ ಹೆಚ್ಚಿಸಲು ಚಿಂತನೆ
Team Udayavani, Apr 27, 2019, 11:48 AM IST
ಬೆಂಗಳೂರು: ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ದಾಖಲಾತಿ ಪ್ರಮಾಣ ಹೆಚ್ಚಿಸಲು ಹಲವು ಕಾರ್ಯಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದ್ದರೂ, ನಿರೀಕ್ಷಿತ ಪ್ರಮಾಣದಲ್ಲಿ ಫಲ ಕೊಟ್ಟಿಲ್ಲ. ಹೀಗಾಗಿ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮುಖ್ಯಶಿಕ್ಷಕರು ಮತ್ತು ಪದವಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರ ಸಮನ್ವಯದ ಮೂಲಕ ವಿದ್ಯಾರ್ಥಿಗಳ ದಾಖಲಾತಿ ಹೆಚ್ಚಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ.
ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿದ ವಿದ್ಯಾರ್ಥಿಗಳು ನೇರವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜು ಸೇರಿಕೊಳ್ಳುವಂತೆ ಅಥವಾ ಸರ್ಕಾರಿ ಪಿಯು ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಗಿಸಿದ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಸೇರಿಕೊಳ್ಳದಿರುವ ಸಂದರ್ಭದಲ್ಲಿ ಸರ್ಕಾರಿ ಪದವಿ ಕಾಲೇಜು ಸೇರಿಕೊಳ್ಳುವಂತೆ ಅವರನ್ನು ಸಂಪರ್ಕಿಸಿ ಮನವೊಲಿಸಲು ಶಿಕ್ಷಣ ಇಲಾಖೆ ಮುಂದಾಗಿದೆ.
ಪ್ರಾಂಶುಪಾಲರ ನಡುವೆ ಸಮನ್ವಯ ಸಾಧಿಸುವ ಮೂಲಕ ವಿದ್ಯಾರ್ಥಿಗಳು ಅರ್ಧಕ್ಕೆ ಶಾಲಾ-ಕಾಲೇಜು ಬಿಡುವುದನ್ನು ತಪ್ಪಿಸಲು ಸಾಧ್ಯ. ಗ್ರಾಮೀಣ ಭಾಗದಲ್ಲಿ ಎಸ್ಸೆಸ್ಸೆಲ್ಸಿ ಅಥವಾ ಪಿಯುಸಿಗೆ ವಿದ್ಯಾಭ್ಯಾಸ ಮೊಟಕುಗೊಳಿಸುವ ಸಾಧ್ಯತೆ ಹೆಚ್ಚಿದೆ. ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳ ಮಾಹಿತಿ ಆ ಭಾಗದ ಪಿಯುಸಿ ವಿಭಾಗದ ಪ್ರಾಂಶುಪಾಲರಿಗೆ ನೀಡಿದರೆ, ಎಸ್ಸೆಸ್ಸೆಲ್ಸಿ ಮುಗಿಸಿದ ವಿದ್ಯಾರ್ಥಿಗಳು ಯಾವ ಕಾಲೇಜು ಸೇರಿದ್ದಾರೆ ಅಥವಾ ಸೇರಿಲ್ಲ ಎಂಬುದರ ಮಾಹಿತಿಯೂ ಸುಲಭವಾಗಿ ಸಿಗಲಿದೆ. ದಾಖಲಾತಿ ಆಂದೋಲನಗಳು ವ್ಯಾಪಕವಾಗಿ ನಡೆಯುತ್ತಿರುವುದರಿಂದ 2019-20ನೇ ಸಾಲಿನಲ್ಲಿ ಸರ್ಕಾರಿ ಶಾಲಾ, ಕಾಲೇಜಿನ ದಾಖಲಾತಿ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಹಳ್ಳಿಗಳಲ್ಲಿ ಒಂದನೇ ತರಗತಿ ಸೇರಲಿರುವ ಮಕ್ಕಳ ಮಾಹಿತಿಯನ್ನು ಸಂಗ್ರಹಿಸುವ ಕಾರ್ಯವೂ ನಡೆಯುತ್ತಿದೆ. ಸರ್ಕಾರದ ವಿವಿಧ ಯೋಜನೆಗಳನ್ನು ಪಾಲರಿಗೆ ಮನವರಿಕೆ ಮಾಡುವ ಮೂಲಕ ಮತ್ತು ಪೂರ್ವ ಪ್ರಾಥಮಿಕ ತರಗತಿ, ಆಂಗ್ಲಮಾಧ್ಯಮ ಇತ್ಯಾದಿಗಳ ಮಾಹಿತಿ ನೀಡುವ ಮೂಲಕ ಸರ್ಕಾರಿ ಶಾಲೆಗೆ ಮಕ್ಕಳನ್ನುಬ ಸೆಳೆಯುವ ಯತ್ನವು ರಾಜ್ಯಾದ್ಯಂತ ನಡೆಯುತ್ತಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್
Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ
Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್ ಸಲ್ಲಿಸಿಲ್ಲ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ