ಬಡ ವಿದ್ಯಾರ್ಥಿಗಳ ದೇವಾಲಯ ಈ ಗ್ರಂಥಾಲಯ


Team Udayavani, Oct 25, 2019, 12:55 PM IST

HUBALLI-TDY-2

ಕುಂದಗೋಳ: ತಾಲೂಕಿನ ಸಂಶಿ ಗ್ರಾಮದ ಸಾರ್ವಜನಿಕ ಗ್ರಂಥಾಲಯವು ವಿಶಿಷ್ಟ ರೀತಿಯಿಂದ ಗಮನ ಸೆಳೆಯುತ್ತಿದ್ದು, ಮಾದರಿ ಗ್ರಂಥಾಲಯವಾಗಿ ರೂಪುಗೊಂಡಿದೆ.

ಸೌಲಭ್ಯಗಳಿಲ್ಲ, ಪುಸ್ತಕಗಳಿಲ್ಲ, ಓದುಗರಿಲ್ಲ ಎಂಬಿತ್ಯಾದಿ ಬೇಡಿಕೆಗಳಿಗೆ ಸಡ್ಡು ಹೊಡೆದು ಇಚ್ಛಾಶಕ್ತಿಯ ಪ್ರತೀಕವಾಗಿ ಅಭಿವೃದ್ಧಿ ಕಂಡಿದೆ. ಗ್ರಾಮದ ಬಸ್‌ನಿಲ್ದಾಣದಿಂದ ಅನತಿ ದೂರದಲ್ಲಿರುವ ಈ ಗ್ರಂಥಾಲಯ 2016ರಲ್ಲಿ ಸ್ವಂತ ಕಟ್ಟಡ ಹೊಂದಿದ್ದು, ಓದುಗರನ್ನು ಕೈಬೀಸಿ ಕರೆಯುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಾಗಿ ಬೇಕಾಗುವ ಬೆಲೆಬಾಳುವ ಪುಸ್ತಕಗಳು ಈ ಗ್ರಂಥಾಲಯದಲ್ಲಿ ದೊರೆಯುತ್ತಿದ್ದು, ಗ್ರಾಮೀಣ ಪ್ರದೇಶದ ನಿರುದ್ಯೋಗಿಗಳಿಗೆ ಉದ್ಯೋಗ ನೀಡುವ ಗ್ರಂಥಾಲಯವಾಗಿದೆ.

ವಿಶಿಷ್ಟತೆ ಹಾದಿ: ವಿವಿಧ ಕಾದಂಬರಿ, ಕಥೆ-ಕಾವ್ಯ ಸೇರಿದಂತೆ 4,650 ಪುಸ್ತಕಗಳನ್ನು ಸರ್ಕಾರದಿಂದ ನೀಡಲಾಗಿದೆ. ಆದರೆ ಇವೆಲ್ಲವೂ ಸಾಹಿತ್ಯದ ಓದಿಗೆ ಪೂರಕವಾದ ಪುಸ್ತಕಗಳಾಗಿದ್ದು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಗೊಳ್ಳುವ ವಿದ್ಯಾರ್ಥಿಗಳು ಕೇವಲ ದೈನಂದಿನ ಪತ್ರಿಕೆಗಳನ್ನು ಓದುತ್ತಿದ್ದರು.

ಗ್ರಾಮದ ಕೆಎಲ್‌ಇ ಕಾಲೇಜಿನ ಪ್ರೊ| ರಮೇಶ ಅತ್ತಿಗೇರಿಯವರು ಈ ಗ್ರಂಥಾಲಯದಲ್ಲಿ ಕುಳಿತು ಓದುತ್ತಿರುವಾಗ ಬಡ ವಿದ್ಯಾರ್ಥಿಗಳಿಗೆ ಉಪಯುಕ್ತ ಪುಸ್ತಕಗಳು ದೊರೆತರೆ ಇನ್ನಷ್ಟು ಅನುಕೂಲವಾಗುತ್ತದೆ ಎಂಬ ಚಿಂತನೆ ಮೊಳಕೆಯೊಡೆಯಿತು. ಕೂಡಲೇ ಬಡ ವಿದ್ಯಾರ್ಥಿಗಳಿಗಾಗಿ 2017ರಲ್ಲಿ ಏಳು ಜನರನ್ನೊಳಗೊಂಡ ಸ್ಪರ್ಧಾತ್ಮಕ ಪರೀಕ್ಷೆಯ ಮಾರ್ಗದರ್ಶಿ ಪುಸ್ತಕ ಸಂಗ್ರಹಣಾ ಸಮಿತಿಯೊಂದನ್ನು ಕಟ್ಟಿದರು. ಗ್ರಂಥಾಲಯದ ಗ್ರಂಥಪಾಲಕರಾದ ಸಕ್ರಮ್ಮ ಕಾಳೆ ಅವರನ್ನು ಸಮಿತಿಯ ಕಾರ್ಯದರ್ಶಿಯನ್ನಾಗಿ ಆಯ್ಕೆ ಮಾಡಿದಾಗ ಅವರೂ ಕೂಡ ಅತ್ತಿಗೇರಿ ಅವರ ತುಡಿತಕ್ಕೆ ಸ್ಪಂದಿಸಿದರು.

ಸಮಿತಿಯ ಮೂಲಕ ದಾನಿಗಳಿಂದ ಬಡ ವಿದ್ಯಾರ್ಥಿಗಳಿಗಾಗಿ ಉಪಯುಕ್ತ ಪುಸ್ತಕಗಳನ್ನು ದೇಣಿಗೆ ಪಡೆಯುವ ಕಾರ್ಯ ನಡೆಯಿತು. ಸುಮಾರು 45 ಸಾವಿರ ರೂ. ಬೆಲೆಬಾಳುವ ಕೆಎಎಸ್‌, ಐಎಎಸ್‌ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪೂರಕ ಪುಸ್ತಕಗಳನ್ನು ದಾನಿಗಳಿಂದ ಸಂಗ್ರಹಿಸಿ ಇಟ್ಟಿದ್ದು, ಗ್ರಂಥಾಲಯಕ್ಕೆ ಈಗ ಎಲ್ಲಿಲ್ಲದ ಬೇಡಿಕೆ ಬಂದಂತಾಗಿದೆ.

ಮನೆ ಮನೆಗೆ ತೆರಳಿ ಸಂಗ್ರಹ: ಪುಸ್ತಕ ಸಂಗ್ರಹಾ ಸಲಹಾ ಸಮಿತಿಯವರು ಮನೆ ಮನೆಗೆ ತೆರಳಿ ದಾನಿಗಳಿಂದ ಪುಸ್ತಕಗಳನ್ನು ತಂದು ಗ್ರಂಥಾಲಯದಲ್ಲಿ ಸಂಗ್ರಹಿಸುತ್ತಿದ್ದಾರೆ. ಸಂಘ-ಸಂಸ್ಥೆಗಳು ಹಾಗೂ ಗ್ರಾಪಂ ನೆರವಿನೊಂದಿಗೆ ಇದೀಗ ಬೆಲೆಬಾಳುವ ಪುಸ್ತಕಗಳನ್ನು ಸಂಗ್ರಹಿಸಿದ್ದಾರೆ. ಈಗಾಗಲೇ ಈ ಪುಸ್ತಕಗಳನ್ನು ಅಧ್ಯಯನ ಮಾಡಿದ 9 ಜನರು ಸರ್ಕಾರಿ ಉದ್ಯೋಗದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಮೂರು ತಿಂಗಳ ಹಿಂದಷ್ಟೆ ಪೊಲೀಸ್‌ ಇಲಾಖೆಗೆ ಸೇರಿದ ಶ್ರೀಧರ ಬಡಿಗೇರ ಅವರನ್ನು ಮಾತನಾಡಿಸಿದಾಗ, ಹುಬ್ಬಳ್ಳಿ-ಧಾರವಾಡದ ಗ್ರಂಥಾಲಯದಲ್ಲಷ್ಟೇ ದೊರೆಯುವ ಇಂತಹ ಬೆಲೆಬಾಳುವ ಪುಸ್ತಕಗಳು ನಮ್ಮ ಗ್ರಂಥಾಲಯದಲ್ಲಿ ದೊರೆಯುತ್ತಿರುವುದು ನಮ್ಮ ಭಾಗ್ಯ ಎಂದರು.

ಶಿಕ್ಷಣ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಕಾಶ ಮೂರಪಂತಣ್ಣವರ ಮಾತನಾಡಿ, ಈ ಗ್ರಂಥಾಲಯು ನಮ್ಮಂತವರಿಗೆ ದಾರಿದೀಪವಾಗಿದೆ. ಸಮಿತಿಯವರಿಗೆ ಚಿರಋಣಿ ಆಗಿರುತ್ತೇನೆ ಎಂದು ಹೇಳಿದರು. ಗ್ರಾಮೀಣ ಪ್ರದೇಶದಲ್ಲಿ ಇಲ್ಲಗಳ ಮಧ್ಯೆ ಗ್ರಾಮಸ್ಥರ ಸಹಕಾರದಿಂದಾಗಿ ಸಂಶಿ ಗ್ರಂಥಾಲಯ ಉತ್ತಮ ಗ್ರಂಥಾಲಯವಾಗಿ ಜ್ಞಾನ ಮಂದಿರವಾಗಿದೆ.

 

-ಶೀತಲ ಎಸ್‌. ಮುರಗಿ

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.