ಕಿರಾಣಿ ಖರೀದಿಗೆ ಮೂರು ದಿನ ಅವಕಾಶ
|27, 28, 29ರಂದು ಬೆಳಗ್ಗೆ 6ರಿಂದ 12ರವ ರೆಗೆ ಅಂಗಡಿ ಓಪನ್ | ಬಳಿಕ ಜೂ.7ರವರೆಗೂ ಬಂದ್
Team Udayavani, May 26, 2021, 6:26 PM IST
ಧಾರವಾಡ: ಕೊರೊನಾ ನಿಯಂತ್ರಿಸಲು ಕಠಿಣ ಲಾಕ್ ಡೌನ್ ಜಾರಿಗೊಳಿಸಿರುವ ಹಿನ್ನೆಲೆಯಲ್ಲಿ ಜನತೆಗೆ ಕಿರಾಣಿ, ಮಾಂಸದ ಪದಾರ್ಥಗಳನ್ನು ಪೂರೈಸಲು ಮೇ 27 ಗುರುವಾರ, ಮೇ 28 ಶುಕ್ರವಾರ ಹಾಗೂ ಮೇ 29 ಶನಿವಾರ ಬೆಳಗ್ಗೆ 6ರಿಂದ ಮಧ್ಯಾಹ್ನ 12 ಗಂಟೆವರೆಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ.
ಹೆಚ್ಚು ಜನದಟ್ಟಣೆಯಾಗಬಾರದು ಎಂಬ ಉದ್ದೇಶದಿಂದ ಕಿರಾಣಿ ಹಾಗೂ ಮಾಂಸ ಮಾರಾಟದ ಸಮಯದ ಅವ ಧಿ ವಿಸ್ತರಿಸಲಾಗಿದೆ. ಹುಬ್ಬಳ್ಳಿ ಹಾಗೂ ಧಾರವಾಡದ ಕಿರಾಣಿ ವರ್ತಕರೊಂದಿಗೆ ಚರ್ಚಿಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಜನರು ಏಕಕಾಲಕ್ಕೆ ಅಂಗಡಿಗಳ ಮುಂದೆ ಜನಸಂದಣಿ ಉಂಟು ಮಾಡದೇ ಪ್ರತ್ಯೇಕವಾಗಿ ಬಂದು ಕೋವಿಡ್ ಸುರಕ್ಷತಾ ಕ್ರಮಗಳೊಂದಿಗೆ ಕಿರಾಣಿ, ಮಾಂಸದ ಪದಾರ್ಥಗಳನ್ನು ಖರೀದಿಸಬೇಕು.
ಈ ಮೂರು ದಿನಗಳ ಅವಕಾಶದ ನಂತರ ಕಠಿಣ ಲಾಕ್ಡೌನ್ ಅವ ಧಿ ಪೂರ್ಣಗೊಂಡ ಬಳಿಕ ಅಂದರೆ ಜೂ. 7ರ ನಂತರವೇ ಈ ವಸ್ತುಗಳು ದೊರೆಯಲಿವೆ. ತರಕಾರಿ ಮತ್ತು ಹಾಲು ಮಾರಾಟಕ್ಕೆ ಪ್ರತಿದಿನ ಬೆಳಗ್ಗೆ 6ರಿಂದ 8ರ ವರೆಗೆ ಅವಕಾಶ ಇರುವುದರಿಂದ ಇವುಗಳ ಪೂರೈಕೆ ಎಂದಿನಂತೆಯೇ ಇರುತ್ತದೆ. ಇವುಗಳ ಸಮಯದಲ್ಲಿ ಬದಲಾವಣೆಯಿಲ್ಲ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಮುನ್ನ ಜಿಲ್ಲೆಯಲ್ಲಿ ಕಿರಾಣಿ, ಮಾಂಸ ಖರೀದಿಗೆ ಮೇ 27 ಗುರುವಾರ ಮತ್ತು ಮೇ 28 ಶುಕ್ರವಾರ ಮಾತ್ರ ಅದೂ ಬೆಳಗ್ಗೆ 6ರಿಂದ 10 ಗಂಟೆವರೆಗೆ ಅವಕಾಶ ನೀಡಲಾಗಿತ್ತು. ಇದೀಗ ಜಿಲ್ಲಾಧಿಕಾರಿಗಳು ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
MUST WATCH
ಹೊಸ ಸೇರ್ಪಡೆ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ