ಪಾಕ್ ಪರ ಘೋಷಣೆ; ಮೂವರು ವಿದ್ಯಾರ್ಥಿಗಳು ಮತ್ತೆ ಪೊಲೀಸ್ ವಶಕ್ಕೆ, ಮಾರ್ಚ್ 2ರವರೆಗೆ ಬಂಧನ
ಮೂವರು ವಿದ್ಯಾರ್ಥಿಗಳನ್ನು ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ
Team Udayavani, Feb 17, 2020, 12:51 PM IST
ಹುಬ್ಬಳ್ಳಿ:ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಗೋಕುಲ ರಸ್ತೆ ಪೊಲೀಸರು ಸೋಮವಾರ ಮೂವರು ಕಾಶ್ಮೀರಿ ಕಾಶ್ಮೀರಿ ವಿದ್ಯಾರ್ಥಿಗಳನ್ನು ಭಾನುವಾರ ತಡರಾತ್ರಿ ಮತ್ತೆ ಬಂಧಿಸಿದ್ದು, ಸೋಮವಾರ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಇಲ್ಲಿನ 3ನೇ ಜೆಎಂಎಫ್ ಸಿ ಕೋರ್ಟ್ ನ ನ್ಯಾಯಾಧೀಶೆ ಪುಷ್ಪಾ ಅವರು ಮೂವರು ವಿದ್ಯಾರ್ಥಿಗಳನ್ನು ಮಾರ್ಚ್ 2ರವರೆಗೆ ನ್ಯಾಯಾಂಗ ಬಂಧನಕ್ಕೊಪ್ಪಿಸಿದೆ ಎಂದು ವರದಿ ತಿಳಿಸಿದೆ.
ಹುಬ್ಬಳ್ಳಿ ತಾಲೂಕು ಕೊಟಗುಣಸಿಯಲ್ಲಿರುವ ಕೆಎಲ್ ಇ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್ ನಲ್ಲಿ ಪುಲ್ವಾಮಾ ದಾಳಿಯ ಕರಾಳ ದಿನಾಚರಣೆ ಸಂದರ್ಭದಲ್ಲೂ ಕಾಶ್ಮೀರಿ
ಸಂಭ್ರಮಾಚರಣೆ ಮಾಡಿದ್ದಾರೆ. ಅಲ್ಲದೆ ಪಾಕಿಸ್ತಾನ ಜಿಂದಾಬಾದ್, ಕಾಶ್ಮೀರಿ ಆಜಾದಿ ಕರೆಂಗೆ ಎಂಬ ಘೋಷಣೆಗಳನ್ನು ಕೂಗುತ್ತ ಅದನ್ನು ವಿಡಿಯೋ ಮಾಡಿ ಜಾಲತಾಣಗಳಲ್ಲಿ ಹಾಕಿಕೊಂಡಿ.
ಆ ವಿಡಿಯೋ ವೈರಲ್ ಆಗಿದ್ದು, ಈ ಕುರಿತು ಕಾಲೇಝಿನ ಪ್ರಾಂಶುಪಾಲರು ಗೋಕುಲ ರಸ್ತೆ ಠಾಣೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ್ದರು. ದೂರಿನ ಹಿನ್ನೆಲೆಯಲ್ಲಿ ಗೋಕುಲ ರಸ್ತೆ ಪೊಲೀಸರು ಶನಿವಾರ ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಸಿಆರ್ ಪಿಸಿ ಕಾಯ್ದೆ 169ರ ಅಡಿ ಸ್ಟೇಶನ್ ಜಾಮೀನು ನೀಡಿ ಬಿಡುಗಡೆಗೊಳಿಸಿದ್ದರು. ಆದರೆ ಈ ಪ್ರಕರಣದ ಬಗ್ಗೆ ಪೊಲೀಸರು ಸರಿಯಾದ ಮಾಹಿತಿ ನೀಡದೆ ಇದ್ದ ಪರಿಣಾಮ ಗೊಂದಲ ಉಂಟಾಗಿ, ಹಿಂದುಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ