ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸೈಕಲ್ ಸವಾರಿ-ಚಿತ್ರಕ್ಕೆ ಬಣ್ಣ
Team Udayavani, Jun 3, 2019, 11:51 AM IST
ಹುಬ್ಬಳ್ಳಿ: ಮಕ್ಕಳು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸೈಕಲ್ ಸವಾರಿ ಮಾಡಿದರು.
ಹುಬ್ಬಳ್ಳಿ: ವಿಕಾಸ ನಗರ ಸಿದ್ಧಲಿಂಗೇಶ್ವರ ಕಾಲೋನಿಯ ಸೂಪರ್ ಬ್ರೇನ್ ಸಂಸ್ಥೆ ಆಶ್ರಯದಲ್ಲಿ ಮಕ್ಕಳಿಂದ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಸೈಕಲ್ ಸವಾರಿ ಹಾಗೂ ಬಸವೇಶ್ವರ ಚಿತ್ರಕ್ಕೆ ಬಣ್ಣ ತುಂಬುವ ಕಾರ್ಯಕ್ರಮ ರವಿವಾರ ನಡೆಯಿತು.
ಸಂಗೊಳ್ಳಿ ರಾಯಣ್ಣ ಪ್ರತಿಮೆ ಮುಂಭಾಗದಿಂದ ನಡೆದ ಸೈಕಲ್ ಸವಾರಿಯಲ್ಲಿ ಹಲವು ಮಕ್ಕಳು ಪಾಲ್ಗೊಂಡು ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಮೂರುಸಾವಿರ ಮಠದವರೆಗೆ ಸೈಕಲ್ ಜಾಥಾ ನಡೆಸಿದರು. ನಂತರ ಮೂರುಸಾವಿರ ಮಠದ ಆವರಣದಲ್ಲಿ ಶ್ರೀ ಬಸವೇಶ್ವರ ಭಾವಚಿತ್ರಕ್ಕೆ ಕಣ್ಣು ಮುಚ್ಚಿಕೊಂಡೇ ಬಣ್ಣ ತುಂಬಿದರು.
ಸಭೆಯ ಅಧ್ಯಕ್ಷತೆ ವಹಿಸಿದ್ದ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಮಾತನಾಡಿ, ವೈಜ್ಞಾನಿಕ ತರಬೇತಿ ನೀಡುತ್ತಿರುವ ಅನುಷಾ ಕೊರವಿ ಅವರ ಕಾರ್ಯ ಶ್ಲಾಘನೀಯ. ಇಂದಿನ ದಿನಗಳಲ್ಲಿ ಮಕ್ಕಳಿಗೆ ಇಂತಹ ತರಬೇತಿಯ ಅವಶ್ಯಕತೆ ಇದೆ. ಮಕ್ಕಳ ಬೌದ್ಧಿಕ ತರಬೇತಿ ಬಗ್ಗೆ ನಾವೆಲ್ಲ ಒತ್ತು ಕೊಡಬೇಕೆಂದರು.
ಸಾನ್ನಿಧ್ಯ ವಹಿಸಿದ್ದ ಮೂರುಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ, ಡಾ| ಸತೀಶ್ ಛಬ್ಬಿ ಮಾತನಾಡಿದರು. ಮಹಾಂತೇಶ ಗೋಂಗಡಶೆಟ್ಟಿ, ರುದ್ರಪ್ಪ ಹಲಗತ್ತಿ, ರಾಜಣ್ಣ ಕೊರವಿ, ನಂದಾ ಆನೆಗುಂದಿ, ಡಾ| ವಿಶ್ವನಾಥ ಕೊರವಿ, ಪ್ರಭು ಶೆಟ್ಟರ, ಪಟ್ಟಣಶೆಟ್ಟಿ, ಜೋಡಳ್ಳಿ, ಅರುಣ ಪಾಟೀಲ, ಈರಣ್ಣ ಎಮ್ಮಿ, ತರಬೇತಿದಾರೆ ಅನುಷಾ ಕೊರವಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ
Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ
Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ
Hubli; ಖರ್ಗೆ ಬ್ಲಾಕ್ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ