ನಾಳೆ ಎಸ್ಡಿಎಂ ಘಟಿಕೋತ್ಸವ
ರಾಜಶ್ರೀ ಭಟ್ಗೆ ಡಾ| ವೀರೇಂದ್ರ ಹೆಗ್ಗಡೆ ಚಿನ್ನದ ಪದಕ
Team Udayavani, Jun 7, 2019, 10:45 AM IST
ಧಾರವಾಡ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ 9ನೇ ಪದವಿ ಪ್ರದಾನ ಸಮಾರಂಭ ಜೂ. 8ರಂದು ಬೆಳಗ್ಗೆ 11 ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ನಡೆಯಲಿದೆ ಎಂದು ಪ್ರಾಚಾರ್ಯ ಡಾ|ಎಸ್.ಬಿ. ವಣಕುದರೆ ಸುದ್ದಿಗೋಷ್ಠಿಯಲ್ಲಿ ಹೇಳಿದರು. ಮುಖ್ಯ ಅತಿಥಿಯಾಗಿ ಜೈಪುರ ರಾಷ್ಟ್ರೀಯ ತಂತ್ರಜ್ಞಾನ ಸಂಸ್ಥೆಯ ನಿರ್ದೇಶಕ ಡಾ| ಉದಯ ಯರಗಟ್ಟಿ ಆಗಮಿಸಲಿದ್ದು, ಎಸ್ಡಿಎಂ ಸೊಸೈಟಿ ಅಧ್ಯಕ್ಷ ಡಾ|ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ಕಾಲೇಜಿನ 543 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುವುದು ಎಂದರು. ಕಾಲೇಜಿನಲ್ಲಿ ಒಟ್ಟು ಏಳು ವಿಭಾಗಗಳಿದ್ದು, ಪ್ರತಿ ವಿಭಾಗದಲ್ಲಿ ಹೆಚ್ಚಿಗೆ ಅಂಕ ಗಳಿಸಿದ ಮೂರು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿ ರ್ಯಾಂಕ್ ನೀಡಲಾಗುತ್ತದೆ. ಅತಿ ಹೆಚ್ಚು ಅಂಕ ಗಳಿಸಿದ (ಸಿಜಿಪಿಎ 9.70) ಇನ್ಫಾರ್ಮೇಶನ್ ಸೈನ್ಸ್ ವಿಭಾಗದ ವಿದ್ಯಾರ್ಥಿನಿ ಶಿರಸಿಯ ರಾಜಶ್ರೀ ಭಟ್ ಈ ಬಾರಿ ಡಾ| ವೀರೇಂದ್ರ ಹೆಗ್ಗಡೆ ಅವರ ಚಿನ್ನದ ಪದಕ ಪಡೆದಿದ್ದಾಳೆ ಎಂದು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ವಿದ್ಯಾರ್ಥಿ ಕಲ್ಯಾಣಾಧಿಕಾರಿ ಕೆ. ಗೋಪಿನಾಥ, ಡಾ| ಜಿ.ಡಿ. ಕಮಲಾಪುರ, ಪ್ರೊ| ವಿ.ಕೆ. ಪರ್ವತಿ, ಎಂ.ಬಿ. ದೊಡ್ಡಮನಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
H. D. Kumaraswamy ನನ್ನ ಬಳಿ ಇರುವುದು ಡಿಕೆಶಿ ಭ್ರಷ್ಟಾಚಾರದ ಮಾಹಿತಿ
ಪ್ರಜ್ವಲ್ ಪ್ರಕರಣವನ್ನು ವೈಯಕ್ತಿಕ ಎಂದ ಅಮಿತ್ ಶಾ ಕ್ಷಮೆ ಕೇಳಬೇಕು: ಸುಪ್ರಿಯಾ ಶ್ರಿನೇಟ್
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು