ಸಂಪ್ರದಾಯ-ಆಚರಣೆ ಅರಿತಾಗ ಜೀವನ ಸಾರ್ಥಕ: ವಿಶ್ವಪ್ರಸನ್ನ ಶ್ರೀ

•ಸಂದೇಹಗಳಿಗೆ ಉತ್ತರ ಪಡೆಯುವುದು ಜಾಣತನ•ಮಧ್ವ ಸಿದ್ಧಾಂತದಲ್ಲಿದೆ ಎಲ್ಲ ಪ್ರಶ್ನೆಗೂ ಉತ್ತರ

Team Udayavani, Apr 29, 2019, 12:37 PM IST

hubali-7-tdy-…

ಹುಬ್ಬಳ್ಳಿ: ನಗರದ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಆಯೋಜಿಸಿದ 'ಮಧ್ವ ಸಿದ್ಧಾಂತ ಒಂದು ಜಿಜ್ಞಾಸೆ' ವಿಚಾರ ಸಂಕಿರಣವನ್ನು ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಉದ್ಘಾಟಿಸಿದರು.

ಹುಬ್ಬಳ್ಳಿ: ನಮ್ಮ ಸಂಪ್ರದಾಯ ಹಾಗೂ ಆಚರಣೆ ಹಿನ್ನೆಲೆ ಅರಿತಾಗ ಜೀವನದಲ್ಲಿ ಸಾರ್ಥಕತೆ ಬರುತ್ತದೆ ಎಂದು ಉಡುಪಿ ಪೇಜಾವರ ಅಧೋಕ್ಷಜ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥರು ಹೇಳಿದರು.

ನಗರದ ಸವಾಯಿ ಗಂಧರ್ವ ಕಲಾ ಮಂದಿರದಲ್ಲಿ ರವಿವಾರ ಆಯೋಜಿಸಿದ ‘ಮಧ್ವ ಸಿದ್ಧಾಂತ ಒಂದು ಜಿಜ್ಞಾಸೆ’ ವಿಚಾರ ಸಂಕಿರಣಕ್ಕೆ ಚಾಲನೆ ನೀಡಿ ಅವರು ಆಶೀರ್ವಚನ ನೀಡಿದರು. ಆಚರಣೆ ಕುರಿತು ನಮ್ಮಲ್ಲಿ ನೂರಾರು ಪ್ರಶ್ನೆಗಳು ಉದ್ಭವಿಸುತ್ತವೆ. ಸಂಪ್ರದಾಯ ಯಾಕೆ ಪಾಲನೆ ಮಾಡಬೇಕೆಂಬ ಪ್ರಶ್ನೆಗಳು ಮೂಡುತ್ತವೆ. ಆದರೆ ಮಧ್ವ ಸಿದ್ಧಾಂತದಲ್ಲಿ ಎಲ್ಲ ಪ್ರಶ್ನೆಗಳಿಗೂ ಉತ್ತರವಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದರು.

ಮಧ್ವಾಚಾರ್ಯರದು ದ್ವೈತ ಸಿದ್ಧಾಂತ. ಅಚರಣೆ ತತ್ವದ ಅನುಭಾವವೇ ಹೊರತು ಅದೇ ತತ್ವವಲ್ಲ. ತತ್ವ ಅಥವಾ ತರ್ಕಭಾಗದ ಅರಿವಿಲ್ಲದೇ ಮಾಡುವ ಆಚರಣೆ ಕಾಲ ಕ್ರಮೇಣ ಅತಾರ್ಕಿಕ ಎನಿಸಲಾರಂಭಿಸುತ್ತದೆ. ಇದೇ ರೀತಿ ಮುಂದುವರಿದರೆ ತತ್ವ ಹಾಗೂ ಆಚರಣೆ ಎರಡೂ ಲುಪ್ತವಾಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.

ಗಂಗಾಸ್ನಾನದ ಮಹತ್ವವನ್ನು ಅರಿಯದೇ ಗಂಗೆಯಲ್ಲಿ ಮುಳುಗು ಹಾಕಿದರೆ ಯಾವುದೇ ಫಲವಿಲ್ಲ. ಗಂಗೆಯಲ್ಲಿ ಸಹಸ್ರಾರು ಜಲಚರಗಳು ಹುಟ್ಟಿ ಅಲ್ಲಿಯೇ ಬದುಕಿ ಸಾಯುತ್ತವೆ. ಅವುಗಳಿಗೆ ಗಂಗೆಯ ಮಹತ್ವ ಏನೆಂಬುದು ಗೊತ್ತಿರುವುದಿಲ್ಲ. ಭಗವಂತ ಇಲ್ಲಿ ನೀರಾಗಿ ಹರಿದಿದ್ದಾನೆ ಎಂಬ ನಂಬಿಕೆ ನಮಗಿರಬೇಕು. ನಾವು ಆಚರಣೆಯ ಪ್ರಯೋಜನ ಅರಿಯುವುದು ಮುಖ್ಯ ಎಂದರು.

ಶಾಸ್ತ್ರಗಳನ್ನು ಪರಾಮರ್ಷಿಸಿ, ಗುರುಗಳನ್ನು ಸಂಪರ್ಕಿಸಿ ಆಚರಣೆ ಕುರಿತ ನಮ್ಮ ಸಂದೇಹಗಳನ್ನು ನಿವಾರಿಸಿಕೊಳ್ಳಬೇಕು. ಸಂದೇಹಗಳನ್ನು ನಮ್ಮಲ್ಲಿಯೇ ಉಳಿಸಿಕೊಳ್ಳದೇ ಅವುಗಳಿಗೆ ಉತ್ತರ ಪಡೆದುಕೊಳ್ಳುವುದು ಜಾಣತನವಾಗಿದೆ. ಸಂಪ್ರದಾಯ, ಆಚರಣೆಗಳ ಬಗ್ಗೆ ಅರಿಯದೇ ಅದನ್ನು ಗೊಡ್ಡು ಎನ್ನುವುದು ಸರಿಯಲ್ಲ. ಮಕ್ಕಳಿಗೆ ಆಚರಣೆಗಳ ಬಗ್ಗೆ ತಪ್ಪು ಮಾಹಿತಿ ನೀಡುವುದು ಮಹಾಪಾಪವಾಗಿದೆ ಎಂದು ಹೇಳಿದರು.

ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ಆಚರಣೆಯನ್ನು ತತ್ವಭಾಗಕ್ಕೆ ಸದಾಚಾರ ಸಮನ್ವಯ ಮಾಡಿಕೊಳ್ಳಬೇಕು. ಈ ದಿಸೆಯಲ್ಲಿ ತತ್ವ, ಆಚರಣೆ, ಆಪದ್ಧರ್ಮ, ಸಂದೇಶ ಕುರಿತು ವಿಚಾರ ಗೋಷ್ಠಿಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು.

 

ಕಪ್ಪು ಗೌನ್‌ ಯಾಕೆ?:

ಸಂಪ್ರದಾಯ, ಆಚರಣೆ ಗೊಡ್ಡು ಎಂದು ಹೇಳುವ ಹಲವರು ವಿಶ್ವವಿದ್ಯಾಲಯದ ಘಟಿಕೋತ್ಸವಗಳಲ್ಲಿ ವಿದ್ಯಾರ್ಥಿಗಳಿಗೆ ಕಪ್ಪು ಗೌನ್‌ ಯಾಕೆ ಹಾಕುತ್ತಾರೆ ಎಂಬುದಕ್ಕೆ ಉತ್ತರ ನೀಡಲು ವಿಫಲರಾಗುತ್ತಾರೆ. ಕಪ್ಪು ಬಣ್ಣ ಋಣಾತ್ಮಕತೆ ಸೂಚಿಸುತ್ತದೆ. ಪದವಿ ಪಡೆದ ಸಂಭ್ರಮದಲ್ಲಿ ಸೂತಕ ಭಾವ ಬಿಂಬಿಸುವ ಕಪ್ಪು ಗೌನ್‌ ಧರಿಸುವ ಔಚಿತ್ಯವೇನು ಎಂಬುದನ್ನು ತಿಳಿಸಬೇಕು

ಅಧ್ಯಕ್ಷತೆ ವಹಿಸಿದ್ದ ಪದ್ಮಶ್ರೀ ಡಾ| ಎಂ.ಎಂ. ಜೋಶಿ ಮಾತನಾಡಿ, ವಿಚಾರ ಸಂಕಿರಣದಲ್ಲಿ ಎಲ್ಲರೂ ಸಕ್ರಿಯರಾಗಿ ಪಾಲ್ಗೊಳ್ಳಬೇಕು. ಪ್ರತಿ ಗೋಷ್ಠಿಯ ನಂತರ ಸಂವಾದಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಮಧ್ವ ಸಿದ್ಧಾಂತ ಕುರಿತಾದ ತಮ್ಮ ಸಂದೇಹಗಳನ್ನು ನಿವಾರಣೆ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.