ಸಂಚಾರವೇ ದುಸ್ತರ

•ಕೊಚ್ಚಿ ಹೋದ ಬ್ರಿಡ್ಜ್-ಚೆಕ್‌ ಡ್ಯಾಂ•ಹೊಲ, ಪರ ಊರಿಗೆ ಹೋಗಲು ತಾಪತ್ರಯ

Team Udayavani, Aug 18, 2019, 9:44 AM IST

huballi-tdy-1

ಹುಬ್ಬಳ್ಳಿ-ನರಗುಂದ ರಸ್ತೆ ಅಳಗವಾಡಿ ಬ್ರಿಡ್ಜ್ ಕುಸಿದಿದ್ದರಿಂದ ಹಳ್ಳ ದಾಟಲು ಜನರ ಹರಸಾಹಸ

ಹುಬ್ಬಳ್ಳಿ: ಮಳೆ ನಿಂತರೂ ಮರದ ಹನಿ ನಿಲ್ಲಲಿಲ್ಲ ಎಂಬಂತೆ ಸತತ ಮಳೆಯಿಂದಾಗಿ ಬೆಳೆ ನಾಶವಾಗಿ, ಮನೆಗಳಿಗೆ ನೀರು ನುಗ್ಗಿ ಹಾನಿಯಾಯಿತು. ನೆರೆಯಿಂದಾಗಿ ನವಲಗುಂದ ತಾಲೂಕಿನಲ್ಲಿ ಸಾಕಷ್ಟು ಕಡೆ ರಸ್ತೆ, ಬ್ರಿಡ್ಜ್ಗಳು ಕೊಚ್ಚಿ ಹೋಗಿದ್ದು, ಜನರಿಗೆ ಸಂಚಾರವೇ ದುಸ್ತರವಾಗಿದೆ.

ನಿರಂತರ ಮಳೆಯಿಂದಾಗಿ ಬೆಣ್ಣೆ ಹಳ್ಳ ಹಾಗೂ ತುಪರಿ ಹಳ್ಳಗಳು ಸಾಕಷ್ಟು ಆಸ್ತಿ ಪಾಸ್ತಿ ಹಾನಿ ಉಂಟು ಮಾಡಿವೆ. ಹಳ್ಳದ ದಡದಲ್ಲಿನ ದಡದಲ್ಲಿರುವ ಗ್ರಾಮಗಳು ಹೆಚ್ಚು ತೊಂದರೆ ಅನುಭವಿಸುವಂತಾಗಿದೆ. ಬ್ರಿಡ್ಜ್ಗಳು, ಚೆಕ್‌ಡ್ಯಾಂಗಳು ಮಳೆಗೆ ಕೊಚ್ಚಿ ಹೋಗಿದ್ದರಿಂದ ಜನರಿಗೆ ಸಂಚಾರಕ್ಕೆ ತಾತ್ಕಾಲಿಕ ಪರ್ಯಾಯ ವ್ಯವಸ್ಥೆ ಮಾಡುವುದು ಅವಶ್ಯಕವಾಗಿದೆ.

ಕೆಲವೆಡೆ ಹಳ್ಳದ ನಾಲಾಗಳಲ್ಲಿ ನೀರು ಹರಿಯುತ್ತಿದ್ದರೆ, ಇನ್ನು ಕೆಲವೆಡೆ ನೀರು ಪ್ರವಾಹ ಕಡಿಮೆಯಾಗಿದೆ. ಇಂಥ ಕಡೆಗಳಲ್ಲಿ ಗ್ರಾಮಗಳ ಜನರೇ ಕಲ್ಲುಗಳನ್ನು ಜೋಡಿಸಿ ಕಾಲುದಾರಿ ಮಾಡಿಕೊಂಡಿದ್ದಾರೆ. ಇನ್ನು ಕೆಲವೆಡೆ ದ್ವಿಚಕ್ರವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಆದರೆ ಇದು ಸುರಕ್ಷಿತವಾಗಿಲ್ಲ. ಕಲ್ಲು ಜಾರಿದರೆ, ಇಲ್ಲವೇ ಮಣ್ಣು ಕುಸಿದರೆ ಅನಾಹುತಗಳಾಗುವ ಸಾಧ್ಯತೆ ಇರುವುದರಿಂದ ತ್ವರಿತಗತಿಯಲ್ಲಿ ಪರ್ಯಾಯ ರಸ್ತೆಗಳನ್ನು ನಿರ್ಮಿಸಿಕೊಡುವುದು ಮುಖ್ಯವಾಗಿದೆ.

ಧಾರಾಕಾರ ಮಳೆ ಸುರಿದ ನಂತರ ಸಂಪರ್ಕ ರಸ್ತೆಗಳಿಲ್ಲದಿದ್ದರಿಂದ ರೈತರಿಗೆ ಹೊಲ, ಗದ್ದೆಗಳಿಗೆ ಹೋಗಲು ಸಾಧ್ಯವಾಗುತ್ತಿಲ್ಲ. ತಾಲೂಕಿನಲ್ಲಿ ಹಲವೆಡೆ ರಸ್ತೆಗಳ ಮಧ್ಯೆ ಬಿರುಕು ಕಾಣಿಸಿಕೊಂಡಿದ್ದು, ಇಲ್ಲಿ ಸಂಚಾರ ದುಸ್ತರವಾಗಿದೆ. ಚೆಕ್‌ ಡ್ಯಾಂ ಬಳಿ ಇಂಥ ರಸ್ತೆಗಳು ಹೆಚ್ಚಾಗಿ ಕಂಡುಬರುತ್ತಿವೆ. ಚತುಶ್ಚಕ್ರ, ಷಟ್ಚಕ್ರ ವಾಹನಗಳು ಹೆಚ್ಚಾಗಿ ಈ ರಸ್ತೆಗಳಲ್ಲಿ ಸಂಚರಿಸುವುದರಿಂದ ರಸ್ತೆಗಳು ಕುಸಿದು ಬೀಳುವ ಸಾಧ್ಯತೆ ಹೆಚ್ಚಾಗಿದೆ.

ಹಲವು ಗ್ರಾಮಗಳಿಗೆ ಬಸ್‌ಗಳ ಸಂಚಾರ ಕಲ್ಪಿಸಲು ಸಾಧ್ಯವಾಗುತ್ತಿಲ್ಲ. ಮೊರಬದಿಂದ ನವಲಗುಂದವರೆಗೆ ಸಂಪರ್ಕ ಕಲ್ಪಿಸುವ ರಸ್ತೆ ತಿರ್ಲಾಪುರದವರೆಗೆ ಹಾಳಾಗಿದೆ. ಹುಬ್ಬಳ್ಳಿ, ಧಾರವಾಡ, ನವಲಗುಂದಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗಳೇ ಹಾಳಾಗಿದ್ದರಿಂದ ಅಗತ್ಯ ಸಾಮಗ್ರಿಗಳನ್ನು ತರಲು ಜನರು ಕಷ್ಟಪಡಬೇಕಿದೆ. ಕೃಷಿ ಸಲಕರಣೆಗಳು, ರಸಗೊಬ್ಬರ ತರುವುದು ಹಲವರಿಗೆ ದುಸ್ತರವಾಗಿದೆ. ಇದರಿಂದ ಕೃಷಿ ಕಾರ್ಯಗಳು ಸ್ಥಗಿತಗೊಳ್ಳುವಂತಾಗಿದೆ.

ಹಳ್ಳಗಳು ಹರಿದ ಮಾರ್ಗದಲ್ಲಿ ಹಲವೆಡೆ ಬ್ರಿಡ್ಜ್ಗಳು ಕುಸಿದಿದ್ದರಿಂದ ಸಂಚಾರಕ್ಕೆ ವ್ಯತ್ಯಯವಾಗಿದೆ. ಜನರಿಗೆ ಹೊಲ, ಮನೆಗೆ ಹೋಗಲು ಅಗತ್ಯ ರಸ್ತೆಗಳನ್ನು ನಿರ್ಮಿಸಬೇಕಿದೆ. ಬ್ರಿಡ್ಜ್ಗಳ ಪಕ್ಕದಲ್ಲಿ ತಾತ್ಕಾಲಿಕವಾಗಿ ರಸ್ತೆಗಳನ್ನು ನಿರ್ಮಿಸಿಕೊಟ್ಟರೆ ಅನುಕೂಲವಾಗುತ್ತದೆ. ಜನರಿಗೆ ತಾತ್ಕಾಲಿಕ ಆಶ್ರಯ ಕಲ್ಪಿಸಲಾಗಿದ್ದು, ಈಗ ಜನರು ಪುನರ್ವಸತಿ ಕೇಂದ್ರಗಳಿಂದ ತಮ್ಮ ಮನೆಗಳಿಗೆ ಮರಳುತ್ತಿದ್ದಾರೆ. ಬಸ್‌ಗಳು ಸಂಚರಿಸುವಂತಾದರೆ ಜನಜೀವನ ಸಾಮಾನ್ಯ ಸ್ಥಿತಿಗೆ ಬರುತ್ತದೆ.•ಬಸಣ್ಣ ಬೆಳವಣಕಿ, ಅಳಗವಾಡಿ ಗ್ರಾಮದ ಮುಖಂಡ

 

•ವಿಶ್ವನಾಥ ಕೋಟಿ

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.