ಎರಡು-ಮೂರು ತಿಂಗಳಲ್ಲಿ ಶಬರಿಮಲೈಗೆ ರೈಲು; ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌

ಪ್ಲಾಟ್‌ ಫಾರ್ಮ್ ನಂಬರ್‌ 1ರಲ್ಲಿ ಎಸ್ಕಲೇಟರ್‌ ಅಗತ್ಯವಾಗಿದೆ.

Team Udayavani, Oct 12, 2022, 4:50 PM IST

ಎರಡು-ಮೂರು ತಿಂಗಳಲ್ಲಿ ಶಬರಿಮಲೈಗೆ ರೈಲು; ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌

ಹುಬ್ಬಳ್ಳಿ: ಶಬರಿ ಮಲೈ ಶ್ರೀ ಅಯ್ಯಪ್ಪಸ್ವಾಮಿ ದರ್ಶನಕ್ಕೆ ತೆರಳುವ ರೈಲಿನ ಬೇಡಿಕೆಯಿದ್ದು, ಮುಂದಿನ ಎರಡು-ಮೂರು ತಿಂಗಳಲ್ಲಿ ಭಕ್ತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈಲು ಸಂಚಾರಕ್ಕೆ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಚಿವ ಅಶ್ವಿ‌ನಿ ವೈಷ್ಣವ್‌ ಹೇಳಿದರು.

ಇಲ್ಲಿನ ಶ್ರೀ ಸಿದ್ಧಾರೂಢ ಸ್ವಾಮೀಜಿ ರೈಲ್ವೆ ನಿಲ್ದಾಣದ ಮೂರನೇ ಪ್ರವೇಶ ದ್ವಾರ, ಮರು ನಿರ್ಮಾಣಗೊಂಡ ಯಾರ್ಡ್‌ ಹಾಗೂ ಹುಬ್ಬಳ್ಳಿ-ಹಜರತ್‌ ನಿಜಾಮುದ್ದಿನ್‌ ರೈಲಿಗೆ ಚಾಲನೆ ನೀಡಿದ ಮಾತನಾಡಿದ ಅವರು, ರಾಜ್ಯದ ರೈಲು ಯೋಜನೆಗಳ ಅಭಿವೃದ್ಧಿಗೆ ಪ್ರಧಾನಿಗಳು ಸಾಕಷ್ಟು ಹಣ ನೀಡಿದ್ದಾರೆ. ಸುಮಾರು 6 ಸಾವಿರ ಕೋಟಿ ರೂ. ರಾಜ್ಯಕ್ಕೆ ನೀಡಿದ್ದಾರೆ. ರಾಜ್ಯದ ರೈಲು ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನದಲ್ಲಿ ಒಂದು ಪೈಸೆ ಕೂಡ ಕಡಿಮೆ ಮಾಡುವುದಿಲ್ಲ. ಕರ್ನಾಟಕ ದೇಶದ ಭವಿಷ್ಯದ ರಾಜ್ಯವಾಗಿದೆ. ಇಲ್ಲಿನ ರೈಲ್ವೆ ಯೋಜನೆಗೆ ಅಗತ್ಯವಾದ ಅರಣ್ಯ ಪರವಾನಗಿ, ಭೂ ಸ್ವಾಧೀನ ಕಾರ್ಯ ಪೂರ್ಣಗೊಳ್ಳುತ್ತಿದ್ದಂತೆ ತ್ವರಿತಗತಿಯಲ್ಲಿ ಕಾಮಗಾರಿ ಆರಂಭಿಸಲಾಗುವುದು ಎಂದರು.

ದಿನಕ್ಕೆ 12 ಕಿಮೀ ರೈಲ್ವೆ ಮಾರ್ಗ ನಿರ್ಮಿಸಲಾಗುತ್ತಿದೆ. 2014ರಲ್ಲಿ ಭಾರತ ಜಿಡಿಪಿಯಲ್ಲಿ 10 ಸ್ಥಾನದಲ್ಲಿತ್ತು. ಈಗ 5 ಸ್ಥಾನಕ್ಕೇರಿದ್ದು, ಆರ್ಥಿಕವಾಗಿ ವೇಗವಾಗಿ ಬೆಳೆಯುತ್ತಿರುವ ದೇಶವಾಗಿದೆ. ವಿಶ್ವದರ್ಜೆ ರೈಲು ನೋಡಲು ಹಿಂದೆ ವಿದೇಶಗಳಿಗೆ ಹೋಗಬೇಕಿತ್ತು. ಹೊರದೇಶದ ಮಾದರಿ ಅನುಕರಿಸದೆ ಭಾರತೀಯ ಎಂಜಿನಿಯರ್‌ಗಳು ಒಳ್ಳೆಯ ಮಾದರಿ ರೈಲು ಸಿದ್ಧಪಡಿಸಿದರು. ಗಂಟೆಗೆ 180 ಕಿಮೀ ವೇಗದ ಮತ್ತೂಂದು ರೈಲು ಸಿದ್ಧಪಡಿಸಲಾಗಿದೆ ಎಂದರು.

ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ತುಮಕೂರು-ದಾವಣಗೆರೆ ಮಾರ್ಗದ ಭೂಸ್ವಾಧೀನ ಪ್ರಕ್ರಿಯೆಗೆ ಸಂಪೂರ್ಣ ಸಹಕಾರ ನೀಡುತ್ತೇವೆ.ಹುಬ್ಬಳ್ಳಿ- ವಾರಣಾಸಿ ವಾರಕ್ಕೆ ಎರಡು ಬಾರಿ ಸಂಚರಿಸಲಿದೆ. 2007-14 ರವರೆಗೆ 4437 ಕಿಮೀ ವಿದ್ಯುದ್ದೀಕರಣ ಮಾಡಲಾಗಿತ್ತು. ಆದರೆ ನಮ್ಮ ಸರಕಾರ ಬಂದ ಮೇಲೆ 2014-21ರವರೆಗೆ 30 ಸಾವಿರ ಕಿಮೀ ವಿದ್ಯುದ್ದೀಕರಣ ಮಾಡಲಾಗಿದೆ. 1.60 ಲಕ್ಷ ಕಿಮೀ ಫೈಬರ್‌ ಕೇಬಲ್‌ ಅಳವಡಿಸಿ ಪ್ರತಿ ಗ್ರಾಮಕ್ಕೆ ಇಂಟರ್‌ನೆಟ್‌ ಕಲ್ಪಿಸಲಾಗಿದೆ. ದೇಶದ ನಾಯಕನಿಗೆ ಕಾಳಜಿಯಿದ್ದರೆ ದೇಶದ ಅಭಿವೃದ್ಧಿ ಸಾಧ್ಯ ಎಂಬುದನ್ನು ಪ್ರಧಾನಿ ನರೇಂದ್ರ ತೋರಿಸಿದ್ದಾರೆ ಎಂದರು.

ಮಾಜಿ ಸಿಎಂ ಜಗದೀಶ ಶೆಟ್ಟರ ಮಾತನಾಡಿ, ನರೇಂದ್ರ ಮೋದಿ ಪ್ರಧಾನಿಯಾದ ನಂತರ ರೈಲ್ವೆ ಇಲಾಖೆ ಸಾಕಷ್ಟು ಪ್ರಗತಿ ಕಂಡಿದೆ. ಉತ್ತರ ಕರ್ನಾಟಕದಲ್ಲಿ ಇದೊಂದು ಉತ್ತಮ ರೈಲ್ವೆ ನಿಲ್ದಾಣ. ಈ ಭಾಗದ ಜನರ ಬಹಳ ದಿನದ ಕೂಗಿಗೆ ಸಿದ್ಧಾರೂಢರ ಹೆಸರು ನಾಮಕರಣ ಈಡೇರಿದೆ. ಸುರೇಶ ಅಂಗಡಿ ರಾಜ್ಯದ ರೈಲ್ವೆ ಅಭಿವೃದ್ಧಿಗೆ ಶ್ರಮಿಸಿದರು. ಪ್ಲಾಟ್‌ ಫಾರ್ಮ್ ನಂಬರ್‌ 1ರಲ್ಲಿ ಎಸ್ಕಲೇಟರ್‌ ಅಗತ್ಯವಾಗಿದೆ.

ನಿಲ್ದಾಣದಲ್ಲಿ ಬ್ಯಾಟರಿ ಆಧಾರಿತ ವಾಹನಗಳನ್ನು ಹೆಚ್ಚಿಸುವುದು ಸೇರಿದಂತೆ ಕೆಲ ಬೇಡಿಕೆಗಳನ್ನು ಸಚಿವರಿಗೆ ಸಲ್ಲಿಸಿದರು. ಉಸ್ತುವಾರಿ ಸಚಿವ ಹಾಲಪ್ಪ ಆಚಾರ, ಮಾಜಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಅರವಿಂದ ಬೆಲ್ಲದ, ವಿಧಾನ ಪರಿಷತ್ತು ಸದಸ್ಯ ಎಸ್‌.ವಿ.ಸಂಕನೂರ, ಪ್ರದೀಪ ಶೆಟ್ಟರ, ಮಹಾಪೌರ ಈರೇಶ ಅಂಚಟಗೇರಿ, ಉಪ ಮಹಾಪೌರ ಉಮಾ ಮುಕುಂದ, ಸದಸ್ಯರಾದ ರಾಜಣ್ಣ ಕೊರವಿ, ವೀರಣ್ಣ ಸವಡಿ, ಶಿವು ಮೆಣಸಿನಕಾಯಿ, ರೂಪಾ ಶೆಟ್ಟಿ,
ಸಂತೋಷ ಚವ್ಹಾಣ ಇದ್ದರು.

ನಿವಾಸಿಗಳಿಗೆ ಅನುಕೂಲ ಮಾಡಿಕೊಡಿ: ಪ್ರಸಾದ
ಶಾಸಕ ಪ್ರಸಾದ ಅಬ್ಬಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಹುಬ್ಬಳ್ಳಿ ರೈಲ್ವೆ ನಿಲ್ದಾಣಕ್ಕೆ ಹೊಸ ರೂಪ ತಂದುಕೊಟ್ಟಿದೆ. ವಿಮಾನ ನಿಲ್ದಾಣಕ್ಕೂ ಕಡಿಮೆಯಿಲ್ಲ. ಮೂರು ಪ್ರವೇಶ ದ್ವಾರ ಉತ್ತಮವಾಗಿದೆ. ಕನ್ಯಾನಗರ ರಾಜಗೋಪಾಲ, ಸುಡುಗಾಡ ಚಾಳ ಈ ಭಾಗದಲ್ಲಿ 70-80 ವರ್ಷದಿಂದ ವಾಸ ಮಾಡುತ್ತಿದ್ದರು. ಇವರಿಗಾಗಿ ಅಗತ್ಯ ಮೂಲಸೌಲಭ್ಯ ಕಲ್ಪಿಸಲಾಗಿದೆ.

ರೈಲ್ವೆ ಇಲಾಖೆ ತಮ್ಮ ಆಸ್ತಿ ಎಂದು ಗೊಂದಲ ಮೂಡಿಸಲಾಗುತ್ತಿದೆ. ಈ ಭಾಗದ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರೊಂದಿಗೆ ಸಭೆ ಕರೆಯಬೇಕು. ಹುಬ್ಬಳ್ಳಿ- ಅಂಕೋಲಾ ರೈಲ್ವೆ ಮಾರ್ಗ ಆದಷ್ಟು ಬೇಗ ನೆರವೇರಬೇಕು ಎಂದು ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಮಾಡಿದರು.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.