ಪೊಲೀಸ್‌ ಬಂದೋಬಸ್ತ್ನಲ್ಲಿ ವರ್ಗಾವಣೆ ಕೌನ್ಸೆಲಿಂಗ್‌


Team Udayavani, Sep 17, 2019, 10:00 AM IST

huballi-tdy-3

ಧಾರವಾಡ: ಸರಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದದ 2018-19ನೇ ಸಾಲಿನ ಅಂತರ್‌ ಘಟಕ (ವಿಭಾಗದ ಒಳಗೆ ಮತ್ತು ವಿಭಾಗದ ಹೊರಗಿನ ಸಮಗ್ರ ಪಟ್ಟಿಯಂತೆ) ವರ್ಗಾವಣಾ ಕೌನ್ಸೆಲಿಂಗ್‌ಗೆ ನಗರದ ಡಯಟ್ ಆವರಣದಲ್ಲಿ ಸೋಮವಾರ ಚಾಲನೆ ದೊರೆತಿದೆ.

ಸೆ. 16ರಿಂದ 21ರ ವರೆಗೆ ಕ್ರಮಸಂಖ್ಯೆವಾರು ವರ್ಗಾವಣೆ ಕೌನ್ಸೆಲಿಂಗ್‌ ಜರುಗಿಸಲು ಸಿದ್ಧತೆ ಮಾಡಿಕೊಳ್ಳಲಾಗಿತ್ತು. ಆದರೆ ವರ್ಗಾವಣೆ ಬಯಸಿ ಬಂದಿದ್ದ ಶಿಕ್ಷಕರು ಸರ್ಕಾರದ ನಿಯಮಾವಳಿಗೆ ಆಕ್ಷೇಪ ವ್ಯಕ್ತಪಡಿಸಿದರು. ಶೇ. 20ಕ್ಕಿಂತ ಹೆಚ್ಚು ಹುದ್ದೆಗಳು ಖಾಲಿ ಇರುವ ತಾಲೂಕುಗಳಿಂದ ವಿಭಾಗದ ಹೊರಗೆ ವರ್ಗಾವಣೆ ನೀಡುವುದಿಲ್ಲ ಎಂಬ ನಿಯಮಾವಳಿ ಆಕ್ರೋಶಕ್ಕೆ ಕಾರಣವಾಯಿತು. ನಂತರ ಸ್ಥಳಕ್ಕೆ ಬಂದ ಅಪರ ಆಯುಕ್ತ ಮೇಜರ್‌ ಸಿದ್ಧಲಿಂಗಯ್ಯ ಹಿರೇಮಠ ಶಿಕ್ಷಕರೊಂದಿಗೆ ಚರ್ಚಿಸಿ, ಸರ್ಕಾರದ ನಿಯಮಾವಳಿ ಬಗ್ಗೆ ವಿವರಿಸಿದರು. ಆದರೆ ಅವರ ಮಾತಿಗೆ ಒಪ್ಪದ ಶಿಕ್ಷಕರು, ಸರ್ಕಾರದ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ಹೊರ ಹಾಕಿದರು.

ಶಿಕ್ಷಕರ ಅಳಲು: ಪ್ರತಿ ಕ್ಷೇತ್ರದಿಂದ ಶೇ.20 ಶಿಕ್ಷಕರ ವರ್ಗಾವಣೆ ಎಂಬ ನಿಯಮ ರದ್ದುಪಡಿಸಬೇಕು. ಕಡ್ಡಾಯ ವರ್ಗಾವಣೆಯನ್ನೂ ನಿಲ್ಲಿಸಬೇಕು. ಕೆಲವು ಕ್ಷೇತ್ರಗಳಲ್ಲಿ ಶಿಕ್ಷಕರ ಕೊರತೆ ಇದೆ. ಶೇ.20ಕ್ಕಿಂತ ಕಡಿಮೆ ಶಿಕ್ಷಕರ ಕೊರತೆ ಇರುವ ಕ್ಷೇತ್ರಗಳಿಗೆ ವರ್ಗಾವಣೆ ನಡೆಯುತ್ತಿಲ್ಲ. ಕೆಲ ಪ್ರದೇಶಗಳಿಗೆ ವರ್ಗಾವಣೆ ಬಯಸಿ ಹಲವು ವರ್ಷಗಳಿಂದ ಅರ್ಜಿ ಹಾಕುತ್ತಿದ್ದರೂ ಸಾಧ್ಯವಾಗಿಲ್ಲ ಎಂದು ಅಳಲು ತೋಡಿಕೊಂಡರು.

ಶಿಕ್ಷಕರ ಕೊರತೆ ನೀಗಿಸಲು ಸರ್ಕಾರ ನೇಮಕಾತಿ ಮಾಡಿಕೊಂಡಿಲ್ಲ. ಇದು ಶಿಕ್ಷಕರ ಸಮಸ್ಯೆ ಅಲ್ಲ. ಆದರೆ ನಿಗದಿತ ಸಂಖ್ಯೆಗಿಂತ ಕಡಿಮೆ ಶಿಕ್ಷಕರು ಇದ್ದಾರೆ ಎಂಬ ಕಾರಣಕ್ಕೆ ಈ ಕ್ಷೇತ್ರಕ್ಕೆ ಇತರರು ಹೋಗುವುದನ್ನು ತಡೆಯುವುದು ಸರಿಯಾದ ಕ್ರಮವಲ್ಲ. ಈ ಕಾಯ್ದೆಗೆ ತಿದ್ದುಪಡಿ ತಂದು ವರ್ಗಾವಣೆ ನಡೆಸಬೇಕು. ಸದ್ಯಕ್ಕೆ ಪ್ರಕ್ರಿಯೆ ಸ್ಥಗಿತಗೊಳಿಸಬೇಕು ಎಂದು ಒತ್ತಾಯಿಸಿದರು.

ಆಯುಕ್ತರು ಗರಂ: ಇದಕ್ಕೆ ಪ್ರತಿಕ್ರಿಯಿಸಿದ ಅಪರ ಆಯುಕ್ತ ಸಿದ್ಧಲಿಂಗಯ್ಯ ಹಿರೇಮಠ, ನೌಕರಿ ಮಾಡುವ ಸ್ಥಳಕ್ಕೆ ತಂದೆ-ತಾಯಿಯರನ್ನೂ ಕರೆದುಕೊಂಡು ಹೋಗಿ. ಅಲ್ಲಿಯೂ ನೆಮ್ಮದಿಯಿಂದ ಇರಬಹುದು. ಆದರೂ ಶಿಕ್ಷಕರ ಬೇಡಿಕೆಯನ್ನು ಸರ್ಕಾರಕ್ಕೆ ಮುಟ್ಟಿಸಲಾಗುವುದು ಎಂದು ಸ್ಪಷ್ಟಪಡಿಸಿದರು. ಆದರೆ ಇದಕ್ಕೆ ಶಿಕ್ಷಕರು ಒಪ್ಪದೇ ಪ್ರತಿಭಟನೆ ಕೈಗೊಂಡು ಗೊಂದಲ ಉಂಟು ಮಾಡಿದರು.

ಇದರಿಂದ ಕೆರಳಿದ ಆಯುಕ್ತ ಹಿರೇಮಠ, ಪೊಲೀಸರನ್ನು ಕರೆಸಿ ಗದ್ದಲ ಮಾಡುವವರನ್ನು ಒದ್ದು ಒಳಗೆ ಹಾಕಿಸುವುದಾಗಿ ಹೇಳಿದರು. ಈ ಮಾತಿಗೆ ಮತ್ತಷ್ಟು ಕೆರಳಿದ ಶಿಕ್ಷಕರು, ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದರು. ಕೊನೆಗೆ ಆಯುಕ್ತರ ಸೂಚನೆ ಅನ್ವಯ ಸಂಜೆ 4 ಗಂಟೆ ನಂತರ ಸ್ಥಳಕ್ಕೆ ಪೊಲೀಸ್‌ ಸಿಬ್ಬಂದಿ ಹಾಗೂ ಕೆಎಸ್‌ಆರ್‌ಪಿ ತುಕಡಿಯನ್ನು ಕರೆಸಿ, ಬಂದೋಬಸ್ತ್ನಲ್ಲಿ ಕೌನ್ಸೆಲಿಂಗ್‌ ನಡೆಸಲಾಯಿತು.

ಪರಿಷ್ಕೃತ ವೇಳಾಪಟ್ಟಿ: ಸೆ.16ರಿಂದ ನಡೆದಿರುವ ಪ್ರಾಥಮಿಕ ಶಾಲಾ ಶಿಕ್ಷಕರ ಘಟಕದ ಹೊರಗಿನ ವರ್ಗಾವಣೆ ಕೌನ್ಸೆಲಿಂಗ್‌ನ್ನು ಕ್ರಮಸಂಖ್ಯೆಗೆ ಅನುಗುಣವಾಗಿ ನಿಗದಿಪಡಿಸಲಾಗಿದ್ದು, ಆಯಾ ದಿನಾಂಕದಂದು ಶಿಕ್ಷಕರು ಹಾಜರಾಗಬೇಕಿದೆ. ಅಂತಿಮ ಆದ್ಯತಾ ಪಟ್ಟಿಯಲ್ಲಿರುವ ಕ್ರಮ ಸಂಖ್ಯೆಗಳಂತೆ ಸೆ. 16ರಂದು 1ರಿಂದ 300ರ ವರೆಗಿನ ಶಿಕ್ಷಕರ ಕೌನ್ಸೆಲಿಂಗ್‌ ಮುಗಿದಿದೆ.

17ರಂದು ಬೆಳಗ್ಗೆ 9ರಿಂದ 301-1500; 18ರಂದು ಬೆಳಗ್ಗೆ 9ರಿಂದ 1501-3000; 19ರಂದು ಬೆಳಗ್ಗೆ 9ರಿಂದ 3001-5000; 20ರಂದು ಬೆಳಗ್ಗೆ 9ರಿಂದ 5001-7000; 21ರಂದು ಬೆಳಗ್ಗೆ 9ರಿಂದ 7001-10000; 22ರಂದು ಬೆಳಗ್ಗೆ 9ರಿಂದ 10001ರಿಂದ 11340ರ ವರೆಗಿನ ಶಿಕ್ಷಕರ ಕೌನ್ಸೆಲಿಂಗ್‌ ನಡೆಯಲಿದೆ. ಸೆ.23 ರಂದು ಮುಖ್ಯ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರ ಕೌನ್ಸೆಲಿಂಗ್‌ ನಡೆಯಲಿದೆ. ಬೆಳಗ್ಗೆ 9ರಿಂದ ಮುಖ್ಯಶಿಕ್ಷಕರು 1ರಿಂದ 355ರ ವರೆಗೆ, ವಿಶೇಷ ಶಿಕ್ಷಕರು 1 ರಿಂದ 371ರವರೆಗಿನ ಕೌನ್ಸೆಲಿಂಗ್‌ ನಡೆಯಲಿದೆ ಎಂದು ಅಪರ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.