ಶೆಡ್ಗಳ ಗುತ್ತಿಗೆ ಪತ್ರ ಹಸ್ತಾಂತರ
Team Udayavani, Aug 4, 2020, 12:23 PM IST
ಹುಬ್ಬಳ್ಳಿ: ಗೋಕುಲ ರಸ್ತೆಯ ಕೈಗಾರಿಕಾ ವಸಾಹತುವಿನಲ್ಲಿರುವ ಜಿ 4, ಜಿ 5 ಶೆಡ್ ಗಳನ್ನು ಕರ್ನಾಟಕ ಮಟೇರಿಯಲ್ ಟೆಸ್ಟಿಂಗ್ ಸೆಂಟರ್ ಸಂಸ್ಥೆಗೆ 99 ವರ್ಷಗಳ ಕಾಲ ಲೀಸ್ ನೀಡುವ ಪತ್ರವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ ವಿತರಿಸಿದರು.
ಕೇಂದ್ರ ಮತ್ತು ರಾಜ್ಯ ಸರಕಾರಗಳ ಅನುದಾನದಡಿ ಸ್ಥಾಪಿಸಿದ ಕರ್ನಾಟಕ ಮಟಿರಿಯಲ್ ಟೆಸ್ಟಿಂಗ್ ಸೆಂಟರ್ ಸಂಸ್ಥೆ ಕಳೆದ 25 ವರ್ಷಗಳಿಂದ ಉತ್ತರ ಕರ್ನಾಟಕ ಭಾಗದ ಕೈಗಾರಿಕೆಗಳಿಗೆ, ವಸ್ತುಗಳ ಗುಣಮಟ್ಟ ಪರೀಕ್ಷೆ ನಡೆಸುತ್ತಿದೆ. ಲೀಸ್ ಪತ್ರ ನೀಡುವ ಮುಖಾಂತರ ಪರೀಕ್ಷಾ ಕೇಂದ್ರವನ್ನು ಅಭಿವೃದ್ಧಿಪಡಿಸಲು ಸರ್ಕಾರ ಒತ್ತು ನೀಡಿದೆ. ಎನ್.ಎ.ಬಿ.ಎಲ್ (ನ್ಯಾಷಿನಲ್ ಅಕ್ರಿಡಿಯೇಷನ್ ಬೋರ್ಡ್ ಫಾರ್ ಟೆಸ್ಟಿಂಗ್ ಆ್ಯಂಡ್ ಕ್ಯಾಲಿಬರೇಷನ್ ಲ್ಯಾಬೋರೇಟರಿಸ್) ಪ್ರಮಾಣ ಪತ್ರ ಹೊಂದಿದೆ. ಉದ್ದಿಮೆದಾರರ ಬೇಡಿಕೆಗೆ ಅನುಸಾರವಾಗಿ ಇನ್ನೂ ಹೆಚ್ಚಿನ ಪ್ರಮಾಣದ ಟೆಸ್ಟಿಂಗ್ ಅನುಕೂಲ ಒದಗಿಸಲು ಸರಕಾರ ಮುಂದಾಗಿದೆ ಎಂದು ಕೈಗಾರಿಕೆ ಸಚಿವರು ಹೇಳಿದರು.
ಕೆಎಸ್ಎಸ್ಐಡಿಸಿ ಅಧಿಕಾರಿ ಡಿ.ಹೆಚ್.ನಾಗೇಶ, ಜಿಲ್ಲಾ ಕೈಗಾರಿಕಾ ತರಬೇತಿ ಸಂಸ್ಥೆಯ ಮೋಹನ ಭರಮಕ್ಕನವರ, ಪರೀಕ್ಷಣಾ ಕೇಂದ್ರದ ಅಧ್ಯಕ್ಷ ನಾಗರಾಜ ದಿವಾಟೆ, ಪ್ರಧಾನ ಕಾರ್ಯದರ್ಶಿ ಮಹೇಶ್ ಜಾಡರ್, ಕಾರ್ಯ ನಿರ್ವಾಹಕ ಅಧಿಕಾರಿ ನರೇಂದ್ರ ಕುಲಕರ್ಣಿ, ಉಪಾಧ್ಯಕ್ಷ ಜಯಪ್ರಕಾಶ್ ಟೆಂಗಿನಕಾಯಿ, ಸಹ ಕಾರ್ಯದರ್ಶಿ ಎಂ.ಕೆ.ಪಾಟೀಲ, ಖಜಾಂಚಿ ಹೇಮಂತ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
Loksabha; ಧಾರವಾಡ ಕ್ಷೇತ್ರದ ಅಭ್ಯರ್ಥಿ ಬದಲಾವಣೆಯಿಲ್ಲ: ಯಡಿಯೂರಪ್ಪ ಸ್ಪಷ್ಟನೆ
Pralhad Joshi; ಧಾರವಾಡದ ಬಿಜೆಪಿ ಅಭ್ಯರ್ಥಿ ಬದಲಿಸಬೇಕು: ದಿಂಗಾಲೇಶ್ವರ ಸ್ವಾಮೀಜಿ
Kannada; ಹಿರಿಯ ಸಾಹಿತಿ ಡಾ.ಗುರುಲಿಂಗ ಕಾಪಸೆ ಇನ್ನಿಲ್ಲ: ದೇಹ ದಾನ
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ