ಬಿಸರಳ್ಳಿಯಲ್ಲಿ ಟ್ರಾನ್ಸ್‌ಫಾರ್ಮರ್‌ ಗೋಳು


Team Udayavani, Nov 19, 2019, 11:57 AM IST

huballi-tdy-1

ಕಲಘಟಗಿ: ಬಿಟ್ಟು ಬಿಡದೆ ಸುರಿದ ಮಳೆಯಿಂದಾಗಿ ತಾಲೂಕಿನಾದ್ಯಂತ ಜರುಗಿರುವ ವಿದ್ಯುತ್‌ ಸಮಸ್ಯೆಗಳಿಗೆ ಇದುವರೆಗೂ ಮುಕ್ತಿ ದೊರಕಿಲ್ಲ. ಇದರಿಂದ ರೈತಾಪಿ ವರ್ಗ ಹಾಗೂ ಸಾರ್ವಜನಿಕರು ತೊಂದರೆ ಅನುಭವಿಸುವುದರ ಜೊತೆಗೆ ಜೀವ ಭಯದಲ್ಲಿ ಬದುಕುವಂತಾಗಿದೆ.

ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ವಾಲಿರುವ ವಿದ್ಯುತ್‌ ಕಂಬಗಳು ಹಾಗೂ ವಿದ್ಯುತ್‌ ತಂತಿಗಳನ್ನು ಇಂದಿಗೂ ಸರಿ ಮಾಡುವಲ್ಲಿ ಹೆಸ್ಕಾಂ ಇಲಾಖೆ ವಿಫಲವಾಗಿದೆ. ತಾಲೂಕಿನ ಬಿಸರಳ್ಳಿ ಗ್ರಾಮದ ರೈತ ಕಲ್ಲಯ್ಯಸ್ವಾಮಿ ಕಂದ್ಲಿ ಎಂಬುವರ ಹೊಲದಲ್ಲಿ ಸುಮಾರು ನಾಲ್ಕು ತಿಂಗಳ ಹಿಂದೆಯೇ ವಿದ್ಯುತ್‌ ಪರಿವರ್ತಕ ಕಂಬದ ಸಹಿತ ಬಿದ್ದಿರುವುದನ್ನು ಇದುವರೆಗೂ ಸರಿ ಮಾಡಿಲ್ಲ. ಇದರಿಂದಾಗಿ ರೈತ ತೀವ್ರ ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ.

ಈ ಪರಿವರ್ತಕ ಹಾಗೂ ಕಂಬದ ಮೂಲಕ ಹಾದು ಹೋಗಿರುವ ಇತರೇ ಲೈನ್‌ ಗಳು ಸಂಪೂರ್ಣ ನೆಲಕಚ್ಚಿರುವುದರಿಂದ ರೈತ ಬೆಳೆದ ಗೋವಿನಜೋಳ ಬೆಳೆಯೂ ನಾಶವಾಗಿದೆ. ಜಮೀನಿನಲ್ಲಿ ದೈನಂದಿನ ಕೆಲಸಗಳಿಗೆ ತಮ್ಮದೇ ಹೊಲದ ಹತ್ತಿರ ಬರಲೂ ಜೀವದ ಹಂಗು ತೊರೆದು ಬರಬೇಕಾದ ಅನಿವಾರ್ಯತೆ ರೈತನದ್ದಾಗಿದೆ. ಇವರ ಹೊಲಕ್ಕೆ ಕೆಲಸಕ್ಕೆ ಬರಲು ಕೂಲಿ ಕಾರ್ಮಿಕರು ಹಿಂಜರಿಯುತ್ತಿದ್ದಾರೆ.

ಅಪಾಯಕ್ಕೆ ಆಹ್ವಾನ: ಪರಿವರ್ತಕದ ಕಥೆ ಒಂದೆಡೆಯಾದರೆ, ಅಪಾಯಕ್ಕೆ ಆಹ್ವಾನ ನೀಡುವ ವಾಲಿದ ಕಂಬಗಳು ಇನ್ನೊಂದೆಡೆ. ದಿನಂಪ್ರತಿ ಸಾರ್ವಜನಿಕರು, ವಿದ್ಯಾರ್ಥಿಗಳು, ಕೂಲಿ ಕಾರ್ಮಿಕರು ಬಿಸರಳ್ಳಿಯಿಂದ ಹಿರೇಹೊನ್ನಿಹಳ್ಳಿ ಮಾರ್ಗವಾಗಿ ಧಾರವಾಡಕ್ಕೆ ನೂರಾರು ಸಂಖ್ಯೆಯಲ್ಲಿ ಸಂಚರಿಸುತ್ತಾರೆ. ಈ ರಸ್ತೆಯ ಪಕ್ಕದಲ್ಲಿ ಹಾದು ಹೋಗಿರುವ ವಿದ್ಯುತ್‌ ಕಂಬಗಳು ಸಂಪೂರ್ಣ ವಾಲಿದ್ದು, ಜೀವ ಬಲಿಗೆ ಕಾಯುವಂತಿವೆ. ಯಾವ ಕ್ಷಣಕ್ಕಾದರೂ ವಿದ್ಯುತ್‌ ತಂತಿಗಳು ವಾಹನಗಳ ಮೇಲೆ ಹರಿದುಬೀಳುವ ಸನ್ನಿವೇಶವಿದೆ. ಇಲ್ಲಿನ ಸಮಸ್ಯೆಗಳ ಕುರಿತು ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ತಿಳಿಸಿದರೂ ಗಮನ ಹರಿಸುತ್ತಿಲ್ಲ ಎಂಬುದು ಸಾರ್ವಜನಿಕರ ಅಳಲಾಗಿದೆ.

ನಿರಂತರ ಬೆಳಗದ ಜ್ಯೋತಿ: ತಾಲೂಕಿನ ಬಹುತೇಕ ಭಾಗಗಳಲ್ಲಿ ನಿರಂತರ ಜ್ಯೋತಿಯ ಕಾಮಗಾರಿಗೆ ಇಲಾಖೆಯವರೇ ಬಳಸಿರುವ ಉಪಕರಣಗಳು ಸಂಪೂರ್ಣ ಕಳಪೆ ಮಟ್ಟದ್ದಾಗಿವೆ. ಇದರಿಂದಾಗಿ ನಿರಂತರವಾಗಿ ಜ್ಯೋತಿ ಬಳಸುವುದನ್ನು ಬಿಟ್ಟು ಕಾರ್ಗತ್ತಲಲ್ಲಿ ಕಾಲ ಕಳೆಯುವಂತಾಗಿದೆ. ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಗ್ರಾಮೀಣ ಭಾಗದ ಜನರು ಬೇಸತ್ತು ಹೋಗಿದ್ದಾರೆ.

ನಿರಂತರ ಜ್ಯೋತಿ ಮಾರ್ಗದುದ್ದಕ್ಕೂ ಬಳಸಿರುವ ಇನ್ಸುಲೇಟರ್‌ಗಳು ಹಾಗೂ ಡಿಸ್ಕ್ಗಳು ಕಳಪೆ ಮಟ್ಟದ್ದಾಗಿರುವುದರಿಂದ ವಿದ್ಯುತ್‌ ಸರಬರಾಜು ಮೇಲಿಂದ ಮೇಲೆ ಸ್ಥಗಿತಗೊಳ್ಳುತ್ತಿದೆ. ಪಾಲಿಮಾರ್‌ ಇನ್ಸುಲೇಟರ್‌ ಹಾಗೂ ಪಾಲಿಮಾರ್‌ ಸ್ಟ್ರೇನ್‌ಗಳನ್ನು ಬಳಸುವುದರಿಂದ ಗುಣಮಟ್ಟದ ವಿದ್ಯುತ್‌ ಸರಬರಾಜು ಮಾಡಬಹುದೆಂಬುದು ತಾಲೂಕಿನ ಬಹುತೇಕ ಚುನಾಯಿತ ಪ್ರತಿನಿಧಿಗಳ ಅಭಿಪ್ರಾಯ.

ನಿಷ್ಕಾಳಜಿ ಪರಮಾವಧಿ: ಕೆಲವೆಡೆ ಹೊಸದಾದ ವಿದ್ಯುತ್‌ ಕಂಬಗಳನ್ನು ಅಳವಡಿಸಿದ್ದು, ಅವೆಲ್ಲವೂ ಅವೈಜ್ಞಾನಿಕವಾಗಿ ನಿರ್ಮಿಸಿ ಸರಬರಾಜು ಮಾಡಲಾಗಿದೆ. ನೂತನ ಕಂಬಗಳ ಮೇಲ್ಮೈ ತುಂಬಾ ನುಣುಪಾಗಿರುವುದರಿಂದ ವಿದ್ಯುತ್‌ ಸರಬರಾಜು ನಿಲುಗಡೆಗೊಂಡಾಗ ಅದನ್ನು ಸರಿಪಡಿಸಲು ಪವರ್‌ಮನ್‌ (ಮಾರ್ಗಕರ್ಮಿ)ಗಳು ಕಂಬ ಹತ್ತಲು ಹರಸಾಹಸ ಪಡಬೇಕಾಗಿದೆ. ಜಿಲ್ಲಾ ಹಾಗೂ ಮೇಲ್ಮಟ್ಟದ ಅಧಿಕಾರಿಗಳ ನಿಷ್ಕಾಳಜಿ ಮೇಲಿನ ಎಲ್ಲ ಸಮಸ್ಯೆಗಳಲ್ಲಿ ಜಾಹೀರಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ಸ್ವಲ್ಪ ಈ ಕಡೆಯೂ ಗಮನ ಹರಿಸುವರೇ ಕಾದುನೋಡಬೇಕಿದೆ.

ನಾಲ್ಕು ತಿಂಗಳ ಹಿಂದೆಯೇ ಬಿದ್ದ ಟಿಸಿ ಸರಿ ಮಾಡಾಕ ಲೈನ್‌ ಮನ್‌ ಹಿಂದೊಮ್ಮೆ ಬಂದ ನಿಲ್ಸಾಕ್‌ ನೋಡಿ ಹೋಗ್ಯಾನ್ರಿ. ಮತ್ತ ಇನ್ನೂ ತನಕ ಯಾರೂ ಬಂದೇ ಇಲ್ರಿ. ನಮ್ಮ ಹೊಲದಾಗ ಕೆಲ್ಸಾ ಮಾಡಾಕ ಕೂಲಿಗಳು ಬರಲಿಕ್ಕೂ ಹೆದರಾಕ್ಕತ್ತಾರ್ರೀ.-ಕಲ್ಲಯ್ಯಸ್ವಾಮಿ ಕಂದ್ಲಿ, ಹೊಲದ ಮಾಲೀಕ

 

-ಪ್ರಭಾಕರ ನಾಯಕ

ಟಾಪ್ ನ್ಯೂಸ್

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

 PM Modi:ನನ್ನ 90 ಸೆಕೆಂಡ್‌ ಭಾಷಣ ಕಾಂಗ್ರೆಸ್‌, INDIA ಮೈತ್ರಿಕೂಟಕ್ಕೆ ತಲ್ಲಣ ಹುಟ್ಟಿಸಿದೆ

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

Padibagilu: ರಿಂಗ್ ಹಾಕಲೆಂದು ಬಾವಿಗಿಳಿದ ಇಬ್ಬರು ಉಸಿರುಗಟ್ಟಿ ಸಾವು

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

ಕೇಜ್ರಿವಾಲ್‌, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಕಾಂಗ್ರೆಸ್‌ ಸುಳ್ಳನ್ನು ಜನ ನಂಬಲ್ಲ: ಗೋವಿಂದ ಕಾರಜೋಳ

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

ಹಗರಿಬೊಮ್ಮನಹಳ್ಳಿ: ಶುದ್ಧ ನೀರಿನ ಘಟಕಕ್ಕೆ ಉದ್ಘಾಟನೆ ಭಾಗ್ಯವೆಂದು?

bp harish

Harihara; ಅಕ್ರಮ ಮರಳುಗಾರಿಕೆ ಮಾಹಿತಿ ನೀಡಿದ್ದಕ್ಕೆ ಬಿಜೆಪಿ ಶಾಸಕರಿಗೆ ಜೀವ ಬೆದರಿಕೆ

Food ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

Food: ಯಾವತ್ತಾದ್ರೂ ಮಾವಿನ ಕಾಯಿ ಬಜ್ಜಿ ಮಾಡಿದ್ದೀರಾ..? ಇಲ್ಲ ಅಂದ್ರೆ ಟ್ರೈ ಮಾಡಿ ನೋಡಿ

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.