ಹುಬ್ಬಳ್ಳಿ: ಚಹಾ ಮಿರ್ಚಿ ಬಜಿ ಮಾರಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಸಾರಿಗೆ ನೌಕರರು
Team Udayavani, Apr 2, 2021, 4:43 PM IST
ಹುಬ್ಬಳ್ಳಿ: ಸಾರಿಗೆ ನೌಕರರಿಗೆ 6 ನೇ ವೇತನ ಆಯೋಗ ಜಾರಿಗೊಳಿಸುವಂತೆ ಒತ್ತಾಯಿಸಿ ಏ.7 ರಂದು ನಡೆಯಲಿರುವ ಅನಿರ್ಧಿಷ್ಟಾವಧಿ ಮುಷ್ಕರದ ಹಿನ್ನೆಲೆಯಲ್ಲಿ ಸಾರಿಗೆ ಸಿಬ್ಬಂದಿ ಶುಕ್ರವಾರ ಇಲ್ಲಿನ ಹಳೇ ಬಸ್ ನಿಲ್ದಾಣದಲ್ಲಿ ಮಿರ್ಚಿ ಬಜಿ ಹಾಗೂ ಚಹಾ ಮಾರಾಟ ಮಾಡಿ ಪ್ರತಿಭಟನೆ ನಡೆಸಿದರು.
ಮೂರು ತಿಂಗಳ ಹಿಂದೆ ಬೇಡಿಕೆ ಈಡೇರಿಕೆಗಾಗಿ ಮನವಿ ಮಾಡಿದ್ದರೂ ಸರಕಾರ ಕುಂಟು ನೆಪ ಹೇಳಿ ಜಾರಿಕೊಳ್ಳುತ್ತಿದೆ. ಕಳೆದ 15-20 ವರ್ಷಗಳಿಂದ ಸಾರಿಗೆ ನೌಕರರು ಕಡಿಮೆ ವೇತನದಲ್ಲಿ ಜೀವನ ಮಾಡುತ್ತಿದ್ದಾರೆ. ಕುಟುಂಬ ನಿರ್ವಹಣೆ ಮಾಡಲು ಅಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಚಹಾ, ಬಜಿ ಮಾರಾಟ ಮಾಡುವಂತಹ ಪರಿಸ್ಥಿತಿಗೆ ತಲುಪಿದ್ದಾರೆ. ಸರಕಾರ ಪ್ರತಿಯೊಂದು ಯೋಜನೆಗಳನ್ನು ಸಾರಿಗೆ ಸಂಸ್ಥೆ ಮೂಲಕ ಅನುಷ್ಠಾನ ಮಾಡುತ್ತದೆ. ಆದರೆ ಇದೂವರೆಗೆ ಬಜೆಟ್ನಲ್ಲಿ ಅನುದಾನ ಮೀಸಲಿರಿಸಿಲ್ಲ.
ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವ ನಿಗಮಗಳಿಗೆ ಅನುದಾನ ನೀಡುವ ಕೆಲಸ ಸರಕಾರಗಳಿಂದ ಆಗುತ್ತಿಲ್ಲ. ಹಲವು ಆರ್ಥಿಕ ಸೌಲಭ್ಯಗಳನ್ನು ಕಡಿತ ಮಾಡಿದ್ದಾರೆ. 24 ಗಂಟೆ ಸೇವೆ ಮಾಡಿದರೂ ಸೂಕ್ತ ವೇತನ, ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ