ನಿಧಾನವಾಗಿ ಗೇರ್‌ ಬದಲಿಸುತ್ತಿರುವ ಸಿಬ್ಬಂದಿ


Team Udayavani, Apr 12, 2021, 1:53 PM IST

ನಿಧಾನವಾಗಿ ಗೇರ್‌ ಬದಲಿಸುತ್ತಿರುವ ಸಿಬ್ಬಂದಿ

ಹುಬ್ಬಳ್ಳಿ: ಸಾರಿಗೆ ನೌಕರರ ಮುಷ್ಕರದ ನಡುವೆಯೂ ಸಾರಿಗೆ ಸಂಸ್ಥೆ ಬಸ್‌ಗಳ ಸಂಚಾರ ಕ್ರಮೇಣಹೆಚ್ಚಾಗುತ್ತಿದೆ. ಸರಕಾರ ಪ್ರಯೋಗ ಮಾಡುತ್ತಿರುವಅಸ್ತ್ರಗಳ ಪರಿಣಾಮ ಕೆಲ ಸಿಬ್ಬಂದಿ ಡಿಪೋಗಳತ್ತ ಮುಖ ಮಾಡುತ್ತಿದ್ದಾರೆ. ಹೀಗಾಗಿ ಐದನೇ ದಿನ ಮುಷ್ಕರದಸಂದರ್ಭದಲ್ಲಿ ಹಳೇ ಬಸ್‌ ನಿಲ್ದಾಣದಿಂದ ಸಾರಿಗೆ ಸಂಸ್ಥೆ ಹಲವು ಬಸ್‌ಗಳು ಸಂಚಾರ ಮಾಡಿದವು.

ಸರಕಾರ ಆರಂಭದಲ್ಲಿ ಮನವೊಲಿಕೆ ನಂತರ ನೋಟಿಸ್‌, ಮೊಬೈಲ್‌ಗ‌ಳಿಗೆ ಸೂಚನೆಗಳ ಸಂದೇಶ, ವಸತಿಗೃಹ ಖಾಲಿ ಮಾಡಿಸುವ ನೋಟಿಸ್‌, ವಜಾ ಕ್ರಮಕ್ಕೆ ಸಿಬ್ಬಂದಿ ಜಗ್ಗಲಿಲ್ಲ. ಆದರೆ ತರಬೇತಿ ಸಿಬ್ಬಂದಿಯೊಂದಿಗೆಕಾಯಂ ಸಿಬ್ಬಂದಿ ವರ್ಗಾವಣೆ ಅಸ್ತ್ರ ಬಳಸುತ್ತಿದ್ದಂತೆಕೆಲ ಸಿಬ್ಬಂದಿ ಡಿಪೋದತ್ತ ಮುಖ ಮಾಡುತ್ತಿದ್ದಾರೆ.ಪರಿಣಾಮ ಕಳೆದ ನಾಲ್ಕು ದಿನಗಳಿಗಿಂತ ಐದನೇದಿನ ಒಂದಿಷ್ಟು ಹೆಚ್ಚಿನ ಸಂಖ್ಯೆಯಲ್ಲಿ ಬಸ್‌ಗಳು ರಸ್ತೆಗಿಳಿದವು.

ವಾಯವ್ಯ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ಕೃಷ್ಣ ಬಾಜಪೇಯಿ ಅವರು ಏ. 7ರಿಂದ 10ರ ವರೆಗೆಹಾಗೂ ಏ.11 ರಿಂದ ಕರ್ತವ್ಯಕ್ಕೆ ಬರುವ ಸಿಬ್ಬಂದಿಗೆಮಾರ್ಚ್‌ ತಿಂಗಳ ವೇತನ ನೀಡುವುದಾಗಿ ಆದೇಶಹೊರಡಿಸಿದ್ದರು. ಹೀಗಾಗಿ ಕೆಲವರು ಕರ್ತವ್ಯಕ್ಕೆಹಾಜರಾಗಿದ್ದಾರೆ. ವರ್ಗಾವಣೆ ಅಸ್ತ್ರಕ್ಕೆ ಕೆಲವರು ಬೆಂಡಾಗಿದ್ದಾರೆ ಎನ್ನಲಾಗಿದೆ.

ಬೇಡಿಕೆ ಈಡೇರುವವರೆಗೆ ಬರೋಲ್ಲ: ಸರಕಾರದ ದಮನಕಾರಿ ಕ್ರಮಗಳನ್ನು ಅಧಿಕಾರಿಗಳು ಪಾಲನೆಮಾಡುತ್ತಿದ್ದಾರೆ. ಇದು ಮುಷ್ಕರ ಹತ್ತಿಕ್ಕುವಕಾರ್ಯವಾಗಿದೆ. ಸರಕಾರದ ಕುತಂತ್ರ ಅಸ್ತ್ರಗಳಿಗೆ ಬಲಿಯಾಗಬಾರದು ಎನ್ನುವ ಕಾರಣಕ್ಕೆ ಕೆಲ ಸಿಬ್ಬಂದಿ ಒಂದು ದಿನ ಕೆಲಸ ಮಾಡಿ ನಂತರ ಮುಷ್ಕರದಲ್ಲಿಪಾಲ್ಗೊಳ್ಳುತ್ತಿದ್ದಾರೆ. ಸಾವಿರಾರು ಬಸ್‌ಗಳುಓಡಾಡುವ ಸಂದರ್ಭದಲ್ಲಿ ಎರಡಂಕಿಯ ಬಸ್‌ಗಳನ್ನು ಓಡಿಸಿದಾಕ್ಷಣ ಮುಷ್ಕರಕ್ಕೆ ಯಾವುದೇದಕ್ಕೆಯಾಗುವುದಿಲ್ಲ. ಯಾವುದೇ ಕಾರಣಕ್ಕೂ ಬೇಡಿಕೆಈಡೇರುವರೆಗೂ ಕರ್ತವ್ಯಕ್ಕೆ ಹಾಜರಾಗುವುದಿಲ್ಲ ಎನ್ನುವ ಹಠ ಬಹುತೇಕ ಕಾರ್ಮಿಕರದ್ದಾಗಿದೆ.

ಗ್ರಾಮಾಂತರ ವಿಭಾಗದಿಂದ 26 ಬಸ್‌ :

ಹುಬ್ಬಳ್ಳಿ ಗ್ರಾಮಾಂತರ ವಿಭಾಗದಿಂದ 26 ಬಸ್‌ಗಳನ್ನು ಕಾರ್ಯಾಚರಣೆ ಮಾಡಲಾಗಿದೆ. ಹಳೇ ಬಸ್‌ನಿಲ್ದಾಣದಿಂದ ಗದಗಕ್ಕೆ 26 ಟ್ರಿಪ್‌, ಬೆಳಗಾವಿಗೆ 4, ಬಾಗಲಕೋಟೆಗೆ 6, ಕಲಘಟಗಿಗೆ 6, ಮತ್ತಿತರ ಸ್ಥಳಗಳಿಗೆ 8 ಟ್ರಿಪ್‌ಗ್ಳಲ್ಲಿ ಬಸ್‌ ಸಂಚಾರ ಮಾಡಿವೆ. ನಲಗುಂದದಿಂದ ರೋಣಕ್ಕೆ ಒಂದು ಹಾಗೂಕಲಘಟಗಿಯಿಂದ ಹುಬ್ಬಳ್ಳಿಗೆ ಎರಡು ಸರತಿಗಳಲ್ಲಿ ಕಾರ್ಯಾಚರಣೆ ಮಾಡಲಾಗಿದೆ. ವಿಭಾಗದಿಂದ17 ಸಿಬ್ಬಂದಿಯನ್ನು ವಿವಿಧ ಘಟಕಗಳಿಗೆ ವರ್ಗಾವಣೆ ಮಾಡಲಾಗಿದೆ. ಮುಷ್ಕರದ ಆರಂಭದಿನದಿಂದ ಸಿಬ್ಬಂದಿ ಡಿಪೋದತ್ತ ಸುಳಿದಿರಲಿಲ್ಲ. ಇದೀಗ ಮೇಲಧಿ ಕಾರಿಗಳನ್ನು ಸಂಪರ್ಕಿಸಿ ಕರ್ತವ್ಯಕ್ಕೆ ಆಗಮಿಸುತ್ತಿದ್ದಾರೆ ಎಂದು ವಿಭಾಗೀಯ ನಿಯಂತ್ರಣಾಧಿ ಕಾರಿ ಎಚ್‌.ರಾಮನಗೌಡರ ತಿಳಿಸಿದ್ದಾರೆ.

ಖಾಸಗಿ ವಾಹನಗಳದೇ ದರ್ಬಾರ್‌ :

ದಿನದಿಂದ ದಿನಕ್ಕೆ ಖಾಸಗಿ ವಾಹನಗಳ ಸಂಖ್ಯೆ ಹಳೇ ಬಸ್‌ ನಿಲ್ದಾಣದಲ್ಲಿ ಹೆಚ್ಚಾಗುತ್ತಿವೆ. ವಿವಿಧೆಡೆಯಿಂದವಾಹನಗಳು ಆಗಮಿಸುತ್ತಿದ್ದು ಪ್ರಯಾಣಿಕರಿಗೆ ಒಂದಿಷ್ಟುಸಾರಿಗೆ ಸೌಲಭ್ಯ ದೊರೆಯುತ್ತಿದೆ. ಬೆಳಗ್ಗೆ ಹಾಗೂ ಸಂಜೆವೇಳೆ ಹಳೇ ಬಸ್‌ ನಿಲ್ದಾಣದಲ್ಲಿ ವಾಹನಗಳ ದಟ್ಟಣೆವಿಪರೀತವಾಗುತ್ತಿದೆ. ಸಾಮಾನ್ಯ ದಿನಗಳಲ್ಲಿ ಇಷ್ಟು ಪ್ರಮಾಣದಲ್ಲಿ ಸಾರಿಗೆ ಸಂಸ್ಥೆ ಬಸ್‌ಗಳೂ ಇರುತ್ತಿರಲಿಲ್ಲ. ಐದನೇ ದಿನವೂ ಖಾಸಗಿ ವಾಹನಗಳು ಕೆಲವೇ ಮಾರ್ಗಗಳಲ್ಲಿ ಸಂಚಾರ ಮಾಡಿದವು.

ಕರ್ತವ್ಯಕೆ ಅಡ್ಡಿ ; ಪ್ರತ್ಯೇಕ ದೂರು ದಾಖಲು :

ಮುಷ್ಕರದ ಅವ ಧಿಯಲ್ಲಿ ಕರ್ತವ್ಯ ನಿರತ ಸಾರಿಗೆ ಸಿಬ್ಬಂದಿ ಕೆಲಸಕ್ಕೆಅಡ್ಡಿಪಡಿಸಿದ ಘಟನೆಗಳು ನಡೆದಿದ್ದು ಪ್ರಕರಣ ದಾಖಲಾಗಿವೆ.ಗುರುವಾರ ಹುಬ್ಬಳ್ಳಿ ಗ್ರಾಮಾಂತರ 2ನೇ ಡಿಪೋದ ಕೆಎ-42 ಎಫ್‌ 1501 ಸಂಖ್ಯೆಯ ಬಸ್‌ ಡಿಪೋದಿಂದ ಹಳೆ ಬಸ್‌ ನಿಲ್ದಾಣಕ್ಕೆಹೋಗುವಾಗ ಸಿಬ್ಬಂದಿ ವಸತಿಗೃಹಗಳ ಹತ್ತಿರ ಕೆಲವರು ಸ್ವಲ್ಪಹೊತ್ತು ಬಸ್‌ ತಡೆದು ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ ಗೋಕುಲಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. ರವಿವಾರಗ್ರಾಮಾಂತರ 1ನೇ ಘಟಕದ ಕೆಎ-63 ಎಫ್‌ 0171 ಬಸ್‌ ಹುಬ್ಬಳ್ಳಿಯಿಂದ ಬಾಗಲಕೋಟೆಗೆ ತೆರಳುತ್ತಿದ್ದಾಗ ನವಲಗುಂದಬಸ್‌ ನಿಲ್ದಾಣದಲ್ಲಿ ಶಿವಾನಂದ ಎಂಬುವರು ಬಸ್‌ ಚಾಲಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಘಟನೆಗೆ ಸಂಬಂಧಿ ಸಿದಂತೆ ನವಲಗುಂದಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಎಚ್‌.ರಾಮನಗೌಡರ ತಿಳಿಸಿದ್ದಾರೆ.

ಆರ್‌ಟಿಒ ಅಧಿಕಾರಿಗಳಿಗೆ ಹೊಣೆ : ಸಾರಿಗೆ ಸಂಸ್ಥೆ ಅಧಿಕಾರಿಗಳು ತಮ್ಮ ಬಸ್‌ಗಳನ್ನುಓಡಿಸುವ ಪ್ರಯತ್ನದಲ್ಲಿ ನಿರತರಾಗಿದ್ದಾರೆ. ಮುಷ್ಕರದಮೊದಲೆರಡು ದಿನ ಇದ್ದ ಪೊಲೀಸ್‌ ಬಂದೋಬಸ್ತ್ಕೂಡ ಕಡಿಮೆಯಾಗಿದೆ. ಓರ್ವ ಪಿಎಸ್‌ಐ ಜೊತೆಮೂರ್‍ನಾಲ್ಕು ಸಿಬ್ಬಂದಿ ಮಾತ್ರ ಕರ್ತವ್ಯದಲ್ಲಿರುತ್ತಾರೆ.ಹೀಗಾಗಿ ಇಡೀ ಹಳೇ ಬಸ್‌ ನಿಲ್ದಾಣದಲ್ಲಿ ಖಾಸಗಿವಾಹನಗಳ ಸಂಚಾರ, ವಿವಿಧ ಮಾರ್ಗಗಳಿಗೆ ಕಾರ್ಯಾಚರಣೆ ಮಾಡುವಂತೆ ನೋಡಿಕೊಳ್ಳುವುದು ಆರ್‌ಟಿಒ ಅಧಿಕಾರಿಗಳ ಜವಾಬ್ದಾರಿಯಾಗಿದೆ. ಏನೇನ್ಯೂ ನತೆಗಳಿದ್ದರೂ ಮೌಖೀಕ ಸೂಚನೆ ಮೂಲಕಎಚ್ಚರಿಕೆ ನೀಡುವ ಕೆಲಸವಾಗುತ್ತಿದೆ. ಕಳೆದ ಐದುದಿನಗಳಿಂದ ನಿತ್ಯ ಬೆಳಗ್ಗೆಯಿಂದ ಸಂಜೆಯವರೆಗೂ ಇದೇ ಕಾರ್ಯದಲ್ಲಿ ನಿರತರಾಗಿದ್ದಾರೆ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.